ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ರಾಜ್ಯ ಕ್ರೀಡಾಶಾಲೆ /ವಸತಿ ನಿಲಯಗಳಿಗೆ 8ನೇ ತರಗತಿ ಮತ್ತು ಪ್ರಥಮ ಪಿಯುಸಿಗೆ ಪ್ರವೇಶ ಪಡೆಯಲು ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ತಾಲ್ಲೂಕುವಾರು ನಡೆಸಲಾಗುತ್ತಿದೆ.

7ನೇ ತರಗತಿ ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.

ಅಯ್ಕೆ ಪ್ರಕ್ರಿಯೆಯು ಆಯಾ ತಾಲ್ಲೂಕುಗಳಲ್ಲಿ ಫೆಬ್ರುವರಿ 06 ರಂದು ರಂದು ನೆಲಮಂಗಲ ತಾಲ್ಲೂಕಿನ ಡಾ.ಬಿ.ಆ‌ರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ, ಫೆಬ್ರವರಿ 07 ರಂದು ಹೊಸಕೋಟೆಯ ಶ್ರೀ ಚನ್ನಭೈರೇಗೌಡ ಕ್ರೀಡಾಂಗಣ, ಫೆಬ್ರವರಿ 10 ರಂದು ದೊಡ್ಡಬಳ್ಳಾಪುರದ ‘ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ, ಫೆಬ್ರವರಿ 11ರಂದು ದೇವನಹಳ್ಳಿಯ ಟೌನ್ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9.30 ರಂದು ನಡೆಸಲಾಗುತ್ತದೆ.

ಅರ್ಜಿಗಳನ್ನು ಕಛೇರಿಯಲ್ಲಿ ಅಥವಾ ಆಯ್ಕೆ ನಡೆಯುವ ಸ್ಥಳಗಳಲ್ಲಿ (ಕ್ರೀಡಾಂಗಣ) ಪಡೆಯತಕ್ಕದ್ದು.

8ನೇ ತರಗತಿಗೆ ಪ್ರವೇಶ ಪಡೆಯುವವರು 14 ವರ್ಷದೊಳಗಿರಬೇಕು ಹಾಗೂ ಪ್ರಥಮ ಪಿ.ಯು.ಸಿ ಪ್ರವೇಶ ಪಡೆಯುವವರು 17 ವರ್ಷದೊಳಗಿರಬೇಕು. ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು.

ಕಿರಿಯರ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆ ಫೆಬ್ರವರಿ 17 ರಂದು ಹಾಗೂ ಹಿರಿಯರ ವಿಭಾಗದ ಆಯ್ಕೆ ಪ್ರಕ್ರಿಯೆ ಫೆಬ್ರವರಿ 18 ರಂದು ಎರಡೂ ವಿಭಾಗದ ಆಯ್ಕೆ ಪ್ರಕ್ರಿಯೆ ಕಂಠೀರವ ಕ್ರೀಡಾಂಗಣ ಬೆಂಗಳೂರಿನಲ್ಲಿ ನಡೆಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ 080-29787443 ಮೊ.ಸಂ.9980590960/9632778567 ಗೆ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

1 hour ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

4 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

5 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

18 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

24 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

1 day ago