ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ರಾಜ್ಯ ಕ್ರೀಡಾಶಾಲೆ /ವಸತಿ ನಿಲಯಗಳಿಗೆ 8ನೇ ತರಗತಿ ಮತ್ತು ಪ್ರಥಮ ಪಿಯುಸಿಗೆ ಪ್ರವೇಶ ಪಡೆಯಲು ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ತಾಲ್ಲೂಕುವಾರು ನಡೆಸಲಾಗುತ್ತಿದೆ.
7ನೇ ತರಗತಿ ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.
ಅಯ್ಕೆ ಪ್ರಕ್ರಿಯೆಯು ಆಯಾ ತಾಲ್ಲೂಕುಗಳಲ್ಲಿ ಫೆಬ್ರುವರಿ 06 ರಂದು ರಂದು ನೆಲಮಂಗಲ ತಾಲ್ಲೂಕಿನ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ, ಫೆಬ್ರವರಿ 07 ರಂದು ಹೊಸಕೋಟೆಯ ಶ್ರೀ ಚನ್ನಭೈರೇಗೌಡ ಕ್ರೀಡಾಂಗಣ, ಫೆಬ್ರವರಿ 10 ರಂದು ದೊಡ್ಡಬಳ್ಳಾಪುರದ ‘ಭಗತ್ಸಿಂಗ್ ಕ್ರೀಡಾಂಗಣದಲ್ಲಿ, ಫೆಬ್ರವರಿ 11ರಂದು ದೇವನಹಳ್ಳಿಯ ಟೌನ್ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9.30 ರಂದು ನಡೆಸಲಾಗುತ್ತದೆ.
ಅರ್ಜಿಗಳನ್ನು ಕಛೇರಿಯಲ್ಲಿ ಅಥವಾ ಆಯ್ಕೆ ನಡೆಯುವ ಸ್ಥಳಗಳಲ್ಲಿ (ಕ್ರೀಡಾಂಗಣ) ಪಡೆಯತಕ್ಕದ್ದು.
8ನೇ ತರಗತಿಗೆ ಪ್ರವೇಶ ಪಡೆಯುವವರು 14 ವರ್ಷದೊಳಗಿರಬೇಕು ಹಾಗೂ ಪ್ರಥಮ ಪಿ.ಯು.ಸಿ ಪ್ರವೇಶ ಪಡೆಯುವವರು 17 ವರ್ಷದೊಳಗಿರಬೇಕು. ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು.
ಕಿರಿಯರ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆ ಫೆಬ್ರವರಿ 17 ರಂದು ಹಾಗೂ ಹಿರಿಯರ ವಿಭಾಗದ ಆಯ್ಕೆ ಪ್ರಕ್ರಿಯೆ ಫೆಬ್ರವರಿ 18 ರಂದು ಎರಡೂ ವಿಭಾಗದ ಆಯ್ಕೆ ಪ್ರಕ್ರಿಯೆ ಕಂಠೀರವ ಕ್ರೀಡಾಂಗಣ ಬೆಂಗಳೂರಿನಲ್ಲಿ ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ 080-29787443 ಮೊ.ಸಂ.9980590960/9632778567 ಗೆ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…