ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ರಾಜ್ಯ ಕ್ರೀಡಾಶಾಲೆ /ವಸತಿ ನಿಲಯಗಳಿಗೆ 8ನೇ ತರಗತಿ ಮತ್ತು ಪ್ರಥಮ ಪಿಯುಸಿಗೆ ಪ್ರವೇಶ ಪಡೆಯಲು ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ತಾಲ್ಲೂಕುವಾರು ನಡೆಸಲಾಗುತ್ತಿದೆ.

7ನೇ ತರಗತಿ ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.

ಅಯ್ಕೆ ಪ್ರಕ್ರಿಯೆಯು ಆಯಾ ತಾಲ್ಲೂಕುಗಳಲ್ಲಿ ಫೆಬ್ರುವರಿ 06 ರಂದು ರಂದು ನೆಲಮಂಗಲ ತಾಲ್ಲೂಕಿನ ಡಾ.ಬಿ.ಆ‌ರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ, ಫೆಬ್ರವರಿ 07 ರಂದು ಹೊಸಕೋಟೆಯ ಶ್ರೀ ಚನ್ನಭೈರೇಗೌಡ ಕ್ರೀಡಾಂಗಣ, ಫೆಬ್ರವರಿ 10 ರಂದು ದೊಡ್ಡಬಳ್ಳಾಪುರದ ‘ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ, ಫೆಬ್ರವರಿ 11ರಂದು ದೇವನಹಳ್ಳಿಯ ಟೌನ್ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9.30 ರಂದು ನಡೆಸಲಾಗುತ್ತದೆ.

ಅರ್ಜಿಗಳನ್ನು ಕಛೇರಿಯಲ್ಲಿ ಅಥವಾ ಆಯ್ಕೆ ನಡೆಯುವ ಸ್ಥಳಗಳಲ್ಲಿ (ಕ್ರೀಡಾಂಗಣ) ಪಡೆಯತಕ್ಕದ್ದು.

8ನೇ ತರಗತಿಗೆ ಪ್ರವೇಶ ಪಡೆಯುವವರು 14 ವರ್ಷದೊಳಗಿರಬೇಕು ಹಾಗೂ ಪ್ರಥಮ ಪಿ.ಯು.ಸಿ ಪ್ರವೇಶ ಪಡೆಯುವವರು 17 ವರ್ಷದೊಳಗಿರಬೇಕು. ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು.

ಕಿರಿಯರ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆ ಫೆಬ್ರವರಿ 17 ರಂದು ಹಾಗೂ ಹಿರಿಯರ ವಿಭಾಗದ ಆಯ್ಕೆ ಪ್ರಕ್ರಿಯೆ ಫೆಬ್ರವರಿ 18 ರಂದು ಎರಡೂ ವಿಭಾಗದ ಆಯ್ಕೆ ಪ್ರಕ್ರಿಯೆ ಕಂಠೀರವ ಕ್ರೀಡಾಂಗಣ ಬೆಂಗಳೂರಿನಲ್ಲಿ ನಡೆಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ 080-29787443 ಮೊ.ಸಂ.9980590960/9632778567 ಗೆ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

14 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

15 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

16 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

16 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

24 hours ago