ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ರಾಜ್ಯ ಕ್ರೀಡಾಶಾಲೆ /ವಸತಿ ನಿಲಯಗಳಿಗೆ 8ನೇ ತರಗತಿ ಮತ್ತು ಪ್ರಥಮ ಪಿಯುಸಿಗೆ ಪ್ರವೇಶ ಪಡೆಯಲು ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ತಾಲ್ಲೂಕುವಾರು ನಡೆಸಲಾಗುತ್ತಿದೆ.

7ನೇ ತರಗತಿ ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.

ಅಯ್ಕೆ ಪ್ರಕ್ರಿಯೆಯು ಆಯಾ ತಾಲ್ಲೂಕುಗಳಲ್ಲಿ ಫೆಬ್ರುವರಿ 06 ರಂದು ರಂದು ನೆಲಮಂಗಲ ತಾಲ್ಲೂಕಿನ ಡಾ.ಬಿ.ಆ‌ರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ, ಫೆಬ್ರವರಿ 07 ರಂದು ಹೊಸಕೋಟೆಯ ಶ್ರೀ ಚನ್ನಭೈರೇಗೌಡ ಕ್ರೀಡಾಂಗಣ, ಫೆಬ್ರವರಿ 10 ರಂದು ದೊಡ್ಡಬಳ್ಳಾಪುರದ ‘ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ, ಫೆಬ್ರವರಿ 11ರಂದು ದೇವನಹಳ್ಳಿಯ ಟೌನ್ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9.30 ರಂದು ನಡೆಸಲಾಗುತ್ತದೆ.

ಅರ್ಜಿಗಳನ್ನು ಕಛೇರಿಯಲ್ಲಿ ಅಥವಾ ಆಯ್ಕೆ ನಡೆಯುವ ಸ್ಥಳಗಳಲ್ಲಿ (ಕ್ರೀಡಾಂಗಣ) ಪಡೆಯತಕ್ಕದ್ದು.

8ನೇ ತರಗತಿಗೆ ಪ್ರವೇಶ ಪಡೆಯುವವರು 14 ವರ್ಷದೊಳಗಿರಬೇಕು ಹಾಗೂ ಪ್ರಥಮ ಪಿ.ಯು.ಸಿ ಪ್ರವೇಶ ಪಡೆಯುವವರು 17 ವರ್ಷದೊಳಗಿರಬೇಕು. ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು.

ಕಿರಿಯರ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆ ಫೆಬ್ರವರಿ 17 ರಂದು ಹಾಗೂ ಹಿರಿಯರ ವಿಭಾಗದ ಆಯ್ಕೆ ಪ್ರಕ್ರಿಯೆ ಫೆಬ್ರವರಿ 18 ರಂದು ಎರಡೂ ವಿಭಾಗದ ಆಯ್ಕೆ ಪ್ರಕ್ರಿಯೆ ಕಂಠೀರವ ಕ್ರೀಡಾಂಗಣ ಬೆಂಗಳೂರಿನಲ್ಲಿ ನಡೆಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ 080-29787443 ಮೊ.ಸಂ.9980590960/9632778567 ಗೆ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

22 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago