ಕ್ರೀಡೆಗಳು ದೇಹ, ಮನಸ್ಸು, ಮೆದುಳಿಗೆ ಉತ್ತಮ ವ್ಯಾಯಾಮವಿದ್ದಂತೆ- ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾದ ರವಿ ಮಾವಿನಕುಂಟೆ

ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸು ಎನ್ನುವಂತೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಬಹಳ ಮುಖ್ಯ. ಅದರಲ್ಲೂ ಕ್ರೀಡೆಗಳು ದೇಹಕ್ಕೂ, ಮನಸ್ಸಿಗೂ, ಮೆದುಳಿಗೂ ಉತ್ತಮ ವ್ಯಾಯಾಮವಿದ್ದಂತೆ. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಂಡು ದೇಹವನ್ನು ದಂಡಿಸಿ ಬಲಾಢ್ಯರಾಗಿ ಬೆಳೆಯಬೇಕು ಎಂದು ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾದ ರವಿ ಮಾವಿನಕುಂಟೆ ಹೇಳಿದರು.

ನಗರದ ಎಂ.ಎಸ್.ವಿ ಪಬ್ಲಿಕ್ ಶಾಲೆಯಲ್ಲಿ 2023-24ನೇ ಸಾಲಿನ ಶಾಲಾ ವಾರ್ಷಿಕ ಕ್ರೀಡೋತ್ಸವವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಸೋಲು ಗೆಲುವು ಸಹಜ ಎನ್ನುವ ಸತ್ಯವನ್ನು ಅರಿತು ಎಲ್ಲವನ್ನೂ ಸಕಾರಾತ್ಮಕವಾಗಿ ಸ್ವೀಕರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಉತ್ತಮ ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವುದರ ಮೂಲಕ ನಾಯಕತ್ವದ ಗುಣಗಳನ್ನು ಮೇಳೈಸಿಕೊಂಡು ನಾಡಿಗೆ, ಹೆತ್ತವರಿಗೆ ಹಾಗೂ ಶಾಲೆಗೆ ಹೆಮ್ಮೆ ತರುವಂತಹ ಸತ್ಪ್ರಜೆಗಳಾಗಬೇಕು ಎಂದು ಕರೆ ನೀಡಿದರು.

ಶಾಲಾ ಸಂಸ್ಥಾಪಕರಾದ ಎ. ಸುಬ್ರಮಣ್ಯ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಸೋಲು- ಗೆಲುವು ಸಾಮಾನ್ಯ. ಸೋತಾಗ ಕುಗ್ಗದೆ ಗೆದ್ದಾಗ ಹಿಗ್ಗದೆ ಕ್ರೀಡಾ ಮನೋಭಾವದಿಂದ ಆಡಬೇಕು. ಮಕ್ಕಳಲ್ಲಿ ಕ್ರೀಡಾ ಸ್ಫೂರ್ತಿಯನ್ನು ಬೆಳೆಸುವ ನಿಟ್ಟಿನಲ್ಲಿ ಇಂದು ನಮ್ಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವವನ್ನು ಆಚರಿಸುತ್ತಿದ್ದೇವೆ. ಮಕ್ಕಳಲ್ಲಿ ಉತ್ತಮವಾದ ದೈಹಿಕ, ಬೌದ್ಧಿಕ, ನೈತಿಕ ಮತ್ತು ಗುಣಾತ್ಮಕ ಅಂಶಗಳನ್ನು ಬೆಳೆಸುವಲ್ಲಿ ನಮ್ಮ ಶಾಲೆಯು ಕಳೆದ ಸುಮಾರು ವರ್ಷಗಳಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಮಕ್ಕಳ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಆಶಯ. ಈ ಮನೋಭೂಮಿಕೆಯ ಅಡಿಯಲ್ಲಿ ದೇಶದ ಭವಿಷ್ಯತ್ತಿನ ನೇತಾರರಾದ ತಾವುಗಳು ಶಿಸ್ತು, ಗಾಂಭೀರ್ಯಗಳೊಡನೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ನಾಡಿನ ಧೀಮಂತ ನಾಯಕರಾಗಿ ಬೆಳೆಯಬೇಕೆಂದು ಮಕ್ಕಳಿಗೆ ಸ್ಫೂರ್ತಿದಾಯಕ ಮಾತುಗಳನ್ನು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಪಥ ಸಂಚಲನ, ಕ್ರೀಡಾ ಜ್ಯೋತಿ ಪ್ರಜ್ವಲನ, ಪುಟಾಣಿ ಮಕ್ಕಳ ಮ್ಯಾರಾಥಾನ್, ಡ್ರಿಲ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶಾಲಾ ಕ್ರೀಡಾ ಮಹೋತ್ಸವ ವಿಜೃಂಭಣೆಯಿಂದ ಪ್ರಾರಂಭಗೊಂಡಿತು.

ಮಕ್ಕಳು ಪ್ರದರ್ಶಿಸಿದ ಯೋಗ ಹಾಗೂ ಟೇಕ್ವಾಂಡೋ ಪ್ರದರ್ಶನ ನೆರೆದಿದ್ದ ಪೋಷಕರ ಮನಗೆದ್ದಿತು. ವಿಜೇತರಿಗೆ ಪ್ರಶಸ್ತಿಪತ್ರ ಹಾಗೂ ಬಹುಮಾನ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಸಂಸ್ಥಾಪಕರಾದ ಸುಬ್ರಮಣ್ಯ.ಎ, ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಎಸ್. ಸ್ವರೂಪ್, ಶಾಲೆಯ ಟ್ರಸ್ಟಿಗಳಾದ ನಯನಾ ಸ್ವರೂಪ್, ಪ್ರಾಂಶುಪಾಲರಾದ ರಮ್ಯಾ.ಬಿ.ವಿ ಹಾಗೂ ಸಿಬ್ಬಂದಿವರ್ಗ ಪಾಲ್ಗೊಂಡಿದ್ದರು.

Ramesh Babu

Journalist

View Comments

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

13 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

17 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago