ಕ್ರೀಡೆಗಳ ಅಭಿವೃದ್ಧಿ ಹಾಗೂ ಕ್ರೀಡಾಪಟುಗಳ ಪ್ರೋತ್ಸಾಹಕ್ಕಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ- ಸಿಎಂ ಸಿದ್ದರಾಮಯ್ಯ

ಉತ್ತಮ ತರಬೇತಿ, ತರಬೇತುದಾರರು ಹಾಗೂ ಸೌಲಭ್ಯಗಳಿದ್ದರೆ ಒಲಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವುದು ಕಷ್ಟವೇನಲ್ಲ. ಕ್ರೀಡಾಪಟುಗಳು ತಮ್ಮ ಗುರಿಸಾಧನೆಗೆ ಹಗಲಿರುಳು ಶ್ರಮಿಸಬೇಕು. ಏಳು ಕೋಟಿ ಕನ್ನಡಿಗರಿರುವ ಕರ್ನಾಟಕದಿಂದ ಪದಕ ಗೆಲ್ಲುವುದು ಅಸಾಧ್ಯವೇನಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ್ದ 2022 ಮತ್ತು 2023ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಹಾಗೂ 2023ರ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಕ್ರೀಡೆಗಳ ಅಭಿವೃದ್ಧಿ ಹಾಗೂ ಕ್ರೀಡಾಪಟುಗಳ ಪ್ರೋತ್ಸಾಹಕ್ಕಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಒಲಂಪಿಕ್ಸ್ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ನಗದು ಬಹುಮಾನ, ಶ್ರೇಣಿ 1 ಅಥವಾ 2 ರಲ್ಲಿ ಸರ್ಕಾರಿ ಉದ್ಯೋಗ, ಬೆಳ್ಳಿ ಪದಕ ವಿಜೇತರಿಗೆ 4 ಕೋಟಿ ರೂ., ಕಂಚು ಪದಕ ವಿಜೇತರಿಗೆ 3 ಕೋಟಿ ರೂ. ನಗದು ಬಹುಮಾನ ನೀಡಲಾಗುತ್ತಿದೆ ಎಂದರು.

ಎರಡು ಸಾಲಿನ ಏಕಲವ್ಯ ಪ್ರಶಸ್ತಿಗಳನ್ನು ಒಟ್ಟು 30 ಜನರಿಗೆ ನೀಡಲಾಗಿದ್ದು, 4 ಲಕ್ಷಗಳ ನಗದು ಬಹುಮಾನವನ್ನು ಪ್ರಶಸ್ತಿ ಒಳಗೊಂಡಿದೆ. ನಗದು ಬಹುಮಾನದ ಮೊತ್ತವನ್ನು ನನ್ನ ಅವಧಿಯಲ್ಲಿಯೇ ಹೆಚ್ಚಿಸಲಾಗಿದೆ. ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಉತ್ತಮ ಕ್ರೀಡಾಪಟುಗಳನ್ನು ರಾಜ್ಯಕ್ಕೆ ನೀಡುವ ತರಬೇತುದಾರರಿಗೆ ಒಟ್ಟು 9 ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುತ್ತಿದ್ದು, 3 ಲಕ್ಷ ರೂ.ಗಳ ನಗದು ಬಹುಮಾನವನ್ನು ಒಳಗೊಂಡಿದೆ ಎಂದರು.

ಗ್ರಾಮೀಣ ಮತ್ತು ಪಾರಂಪರಿಕ ಕ್ರೀಡೆಗಳ ಸಾಧಕರನ್ನು ಗುರುತಿಸಿ ಒಟ್ಟು 15 ಕ್ರೀಡಾರತ್ನ ಪ್ರಶಸ್ತಿಗಳನ್ನು ನೀಡಲಾಗಿದ್ದು, ₹2 ಲಕ್ಷಗಳ ನಗದು ಬಹುಮಾನವನ್ನು ಒಳಗೊಂಡಿದೆ. ರಾಜ್ಯದ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ ಖಾಸಗಿ ಕ್ಷೇತ್ರದ ಸಂಸ್ಥಗಳನ್ನು ಗೌರವಿಸಲು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯನ್ನು ನೀಡಲಾಗಿದೆ ಎಂದರು.

ಕರ್ನಾಟಕದ ಕ್ರೀಡಾಪಟುಗಳಿಗೆ ಗೆಲ್ಲುವ ಸಾಧ್ಯತೆಗಳಿವೆ, ಪ್ರಯತ್ನ ಮಾಡಬೇಕಷ್ಟೆ. 2028 ರಲ್ಲಿ ಲಾಸ್ ಏಂಜಲೀಸ್ ನಲ್ಲಿ ನಡೆಯಲಿರುವ ಒಲಂಪಿಕ್ಸ್ ನಲ್ಲಿ ಪಾಲ್ಗೊಳ್ಳಲಿರುವ 60 ಜನರನ್ನು ಗುರುತಿಸಲಾಗಿದ್ದು, ಪ್ರತಿ ವರ್ಷ 10 ಲಕ್ಷ ರೂ. ಗಳನ್ನು ತರಬೇತಿಯ ಅವಧಿಯಲ್ಲಿಯೇ ನೀಡಲಾಗುತ್ತದೆ ಎಂದು ಹೇಳಿದರು.

ಕ್ರೀಡಾಪಟುಗಳು ಯಾವುದಾದರೂ ಒಂದು ಕ್ರೀಡೆಯನ್ನು ಆಯ್ಕೆ ಮಾಡಿಕೊಂಡು ಅದರಲ್ಲಿಯೇ ಸಂಪೂರ್ಣ ಏಕಾಗ್ರತೆ, ಗುರಿಯಿಟ್ಟುಕೊಂಡು ಸಾಧನೆ ಮಾಡಬೇಕು ಎಂದು ತಿಳಿಸಿದರು.

ಉತ್ತಮ ಸಾಧನೆ ಮಾಡುವ ಕ್ರೀಡಾಪಟುಗಳಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲಿದೆ. ಒಲಂಪಿಕ್ಸ್ ಹಾಗೂ ಕಾಮನ್ ವೆಲ್ತ್ ಕ್ರೀಡೆಗಳಲ್ಲಿ ಗೆದ್ದವರಿಗೆ ನಗದು ಬಹುಮಾನ ನೀಡಲಾಗುತ್ತಿದೆ. ಕರ್ನಾಟಕ ಉತ್ತಮ ಕ್ರೀಡಾಪಟುಗಳನ್ನು ಈವರೆಗೆ ರೂಪಿಸಿದೆ. ಹಾಕಿಯಂತಹ ಕ್ರೀಡೆಗಳಲ್ಲಿ ಸಾಧನೆ ಮಾಡಿದವರು ಇದ್ದಾರೆ. ಅಥ್ಲೆಟಿಕ್ಸ್ ನಲ್ಲಿಯೂ ಸಾಧನೆ ಮಾಡಬೇಕು ಎಂದರು.

ಬೇಡರ ಜಾತಿಗೆ ಸೇರಿದ ಏಕಲವ್ಯ ಗುರುವಿಲ್ಲದೆ ವಿದ್ಯೆಯನ್ನು ಕಲಿತವನು. ಅರ್ಜುನನಿಗಿಂತ ಮೀರಿ ಬಿಲ್ಲುವಿದ್ಯೆಯಲ್ಲಿ ಪರಿಣಿತಿ ಸಾಧಿಸಿದ್ದರಿಂದ ಅವನ ಹೆಬ್ಬೆರಳನ್ನು ಗುರುದಕ್ಷಿಣೆಯಾಗಿ ದ್ರೋಣಾಚಾರ್ಯರು ಪಡೆಯುತ್ತಾರೆ. ಆ ಕಾಲದಲ್ಲಿಯೂ ಜಾತಿ ವ್ಯವಸ್ಥೆಯಿತ್ತು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಏಕಲವ್ಯ ಪ್ರಶಸ್ತಿ ಪಡೆದವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು ಎಂದು ಹಾರೈಸುತ್ತೇನೆ. ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆಗಳು. ನಿಮ್ಮ ಸಾಧನೆ ಇತರರಿಗೂ ಸ್ಪೂರ್ತಿಯಾಗಲಿ ಎಂದು ಹೇಳಿದರು.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

3 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

14 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

15 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

15 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

16 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

23 hours ago