ಕ್ರೀಡೆಗಳ ಅಭಿವೃದ್ಧಿ ಹಾಗೂ ಕ್ರೀಡಾಪಟುಗಳ ಪ್ರೋತ್ಸಾಹಕ್ಕಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ- ಸಿಎಂ ಸಿದ್ದರಾಮಯ್ಯ

ಉತ್ತಮ ತರಬೇತಿ, ತರಬೇತುದಾರರು ಹಾಗೂ ಸೌಲಭ್ಯಗಳಿದ್ದರೆ ಒಲಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವುದು ಕಷ್ಟವೇನಲ್ಲ. ಕ್ರೀಡಾಪಟುಗಳು ತಮ್ಮ ಗುರಿಸಾಧನೆಗೆ ಹಗಲಿರುಳು ಶ್ರಮಿಸಬೇಕು. ಏಳು ಕೋಟಿ ಕನ್ನಡಿಗರಿರುವ ಕರ್ನಾಟಕದಿಂದ ಪದಕ ಗೆಲ್ಲುವುದು ಅಸಾಧ್ಯವೇನಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ್ದ 2022 ಮತ್ತು 2023ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಹಾಗೂ 2023ರ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಕ್ರೀಡೆಗಳ ಅಭಿವೃದ್ಧಿ ಹಾಗೂ ಕ್ರೀಡಾಪಟುಗಳ ಪ್ರೋತ್ಸಾಹಕ್ಕಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಒಲಂಪಿಕ್ಸ್ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ನಗದು ಬಹುಮಾನ, ಶ್ರೇಣಿ 1 ಅಥವಾ 2 ರಲ್ಲಿ ಸರ್ಕಾರಿ ಉದ್ಯೋಗ, ಬೆಳ್ಳಿ ಪದಕ ವಿಜೇತರಿಗೆ 4 ಕೋಟಿ ರೂ., ಕಂಚು ಪದಕ ವಿಜೇತರಿಗೆ 3 ಕೋಟಿ ರೂ. ನಗದು ಬಹುಮಾನ ನೀಡಲಾಗುತ್ತಿದೆ ಎಂದರು.

ಎರಡು ಸಾಲಿನ ಏಕಲವ್ಯ ಪ್ರಶಸ್ತಿಗಳನ್ನು ಒಟ್ಟು 30 ಜನರಿಗೆ ನೀಡಲಾಗಿದ್ದು, 4 ಲಕ್ಷಗಳ ನಗದು ಬಹುಮಾನವನ್ನು ಪ್ರಶಸ್ತಿ ಒಳಗೊಂಡಿದೆ. ನಗದು ಬಹುಮಾನದ ಮೊತ್ತವನ್ನು ನನ್ನ ಅವಧಿಯಲ್ಲಿಯೇ ಹೆಚ್ಚಿಸಲಾಗಿದೆ. ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಉತ್ತಮ ಕ್ರೀಡಾಪಟುಗಳನ್ನು ರಾಜ್ಯಕ್ಕೆ ನೀಡುವ ತರಬೇತುದಾರರಿಗೆ ಒಟ್ಟು 9 ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುತ್ತಿದ್ದು, 3 ಲಕ್ಷ ರೂ.ಗಳ ನಗದು ಬಹುಮಾನವನ್ನು ಒಳಗೊಂಡಿದೆ ಎಂದರು.

ಗ್ರಾಮೀಣ ಮತ್ತು ಪಾರಂಪರಿಕ ಕ್ರೀಡೆಗಳ ಸಾಧಕರನ್ನು ಗುರುತಿಸಿ ಒಟ್ಟು 15 ಕ್ರೀಡಾರತ್ನ ಪ್ರಶಸ್ತಿಗಳನ್ನು ನೀಡಲಾಗಿದ್ದು, ₹2 ಲಕ್ಷಗಳ ನಗದು ಬಹುಮಾನವನ್ನು ಒಳಗೊಂಡಿದೆ. ರಾಜ್ಯದ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ ಖಾಸಗಿ ಕ್ಷೇತ್ರದ ಸಂಸ್ಥಗಳನ್ನು ಗೌರವಿಸಲು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯನ್ನು ನೀಡಲಾಗಿದೆ ಎಂದರು.

ಕರ್ನಾಟಕದ ಕ್ರೀಡಾಪಟುಗಳಿಗೆ ಗೆಲ್ಲುವ ಸಾಧ್ಯತೆಗಳಿವೆ, ಪ್ರಯತ್ನ ಮಾಡಬೇಕಷ್ಟೆ. 2028 ರಲ್ಲಿ ಲಾಸ್ ಏಂಜಲೀಸ್ ನಲ್ಲಿ ನಡೆಯಲಿರುವ ಒಲಂಪಿಕ್ಸ್ ನಲ್ಲಿ ಪಾಲ್ಗೊಳ್ಳಲಿರುವ 60 ಜನರನ್ನು ಗುರುತಿಸಲಾಗಿದ್ದು, ಪ್ರತಿ ವರ್ಷ 10 ಲಕ್ಷ ರೂ. ಗಳನ್ನು ತರಬೇತಿಯ ಅವಧಿಯಲ್ಲಿಯೇ ನೀಡಲಾಗುತ್ತದೆ ಎಂದು ಹೇಳಿದರು.

ಕ್ರೀಡಾಪಟುಗಳು ಯಾವುದಾದರೂ ಒಂದು ಕ್ರೀಡೆಯನ್ನು ಆಯ್ಕೆ ಮಾಡಿಕೊಂಡು ಅದರಲ್ಲಿಯೇ ಸಂಪೂರ್ಣ ಏಕಾಗ್ರತೆ, ಗುರಿಯಿಟ್ಟುಕೊಂಡು ಸಾಧನೆ ಮಾಡಬೇಕು ಎಂದು ತಿಳಿಸಿದರು.

ಉತ್ತಮ ಸಾಧನೆ ಮಾಡುವ ಕ್ರೀಡಾಪಟುಗಳಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲಿದೆ. ಒಲಂಪಿಕ್ಸ್ ಹಾಗೂ ಕಾಮನ್ ವೆಲ್ತ್ ಕ್ರೀಡೆಗಳಲ್ಲಿ ಗೆದ್ದವರಿಗೆ ನಗದು ಬಹುಮಾನ ನೀಡಲಾಗುತ್ತಿದೆ. ಕರ್ನಾಟಕ ಉತ್ತಮ ಕ್ರೀಡಾಪಟುಗಳನ್ನು ಈವರೆಗೆ ರೂಪಿಸಿದೆ. ಹಾಕಿಯಂತಹ ಕ್ರೀಡೆಗಳಲ್ಲಿ ಸಾಧನೆ ಮಾಡಿದವರು ಇದ್ದಾರೆ. ಅಥ್ಲೆಟಿಕ್ಸ್ ನಲ್ಲಿಯೂ ಸಾಧನೆ ಮಾಡಬೇಕು ಎಂದರು.

ಬೇಡರ ಜಾತಿಗೆ ಸೇರಿದ ಏಕಲವ್ಯ ಗುರುವಿಲ್ಲದೆ ವಿದ್ಯೆಯನ್ನು ಕಲಿತವನು. ಅರ್ಜುನನಿಗಿಂತ ಮೀರಿ ಬಿಲ್ಲುವಿದ್ಯೆಯಲ್ಲಿ ಪರಿಣಿತಿ ಸಾಧಿಸಿದ್ದರಿಂದ ಅವನ ಹೆಬ್ಬೆರಳನ್ನು ಗುರುದಕ್ಷಿಣೆಯಾಗಿ ದ್ರೋಣಾಚಾರ್ಯರು ಪಡೆಯುತ್ತಾರೆ. ಆ ಕಾಲದಲ್ಲಿಯೂ ಜಾತಿ ವ್ಯವಸ್ಥೆಯಿತ್ತು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಏಕಲವ್ಯ ಪ್ರಶಸ್ತಿ ಪಡೆದವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು ಎಂದು ಹಾರೈಸುತ್ತೇನೆ. ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆಗಳು. ನಿಮ್ಮ ಸಾಧನೆ ಇತರರಿಗೂ ಸ್ಪೂರ್ತಿಯಾಗಲಿ ಎಂದು ಹೇಳಿದರು.

Ramesh Babu

Journalist

Recent Posts

ಜೈಲಿನಲ್ಲಿ ಯೋಗಾಸನ ಮಾಡಿದ ದರ್ಶನ್

ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸಾಮೂಹಿಕ ಯೋಗಾಭ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.…

1 hour ago

ಸಕ್ರಿಯ ರೌಡಿ ಶೀಟರ್‌ಗಳ ಮನೆಗಳ ಮೇಲೆ ಖಾಕಿ ದಾಳಿ: 45ಕ್ಕೂ ಹೆಚ್ಚು ಕಡೆ ತಪಾಸಣೆ

ದೊಡ್ಡಬಳ್ಳಾಪುರ: ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವ ಹಾಗೂ ರೌಡಿ ಶೀಟರ್‌ಗಳ ಮೇಲೆ ನಿಗಾ ಬಿಗಿಗೊಳಿಸುವ ಉದ್ದೇಶದಿಂದ ದೊಡ್ಡಬಳ್ಳಾಪುರ ಡಿವೈಎಸ್‌ಪಿ ಉಪವಿಭಾಗ ವ್ಯಾಪ್ತಿಯಲ್ಲಿ…

6 hours ago

ಯೋಗ ಮತ್ತು ಧ್ಯಾನದ ಪರಿಕಲ್ಪನೆ ಸುತ್ತ ಒಂದಷ್ಟು ಅನಿಸಿಕೆಗಳು……..

ಧ್ಯಾನಸ್ಥ ಮನಸ್ಥಿತಿ,.... ಸಾಧಿಸುವ ಸರಳ ವಿಧಾನಗಳು, ಯೋಗ ಮತ್ತು ಧ್ಯಾನ, ಜೂನ್ 21, ಅಂತರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಯೋಗ…

9 hours ago

ಒಂಟಿ ವೃದ್ಧೆಯ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಆರೋಪಿ ಬಂಧನ

ಗೌರಿಬಿದನೂರು: ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯ ಮೇಲೆ ಹಲ್ಲೆ ನಡೆಸಿ ಕೊಲೆಗೈದು, ಚಿನ್ನದ ಓಲೆಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಮಂಚೇನಹಳ್ಳಿ ಪೊಲೀಸರು…

23 hours ago

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ, ಮತ್ತೊಂದು ಮಗುವಿಗೆ ಗಂಭೀರ ಗಾಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಸಮೀಪ ಶುಕ್ರವಾರ ಸಂಜೆ ಸುಮಾರು 6:15ಕ್ಕೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

2 days ago

ಬಂಗಾರದ ಕಿವಿ ಓಲೆಗಳಿಗಾಗಿ 80 ವರ್ಷದ ವೃದ್ಧೆಯ ಭೀಕರ ಕೊಲೆ

ಚಿಕ್ಕಬಳ್ಳಾಪುರ: ಬಂಗಾರದ ಕಿವಿ ಓಲೆಗಳಿಗಾಗಿ 80 ವರ್ಷದ ವೃದ್ಧೆಯನ್ನು ಹತ್ಯೆ ಮಾಡಿ, ಕಿವಿಗಳನ್ನು ಕತ್ತರಿಸಿ ಆಭರಣ ಕಳವು ಮಾಡಿರುವ ಅಮಾನುಷ…

2 days ago