Categories: ಕೋಲಾರ

ಕ್ರೆಡಿಲ್ ಮತ್ತು ನಿರ್ಮಿತಿ ಕೇಂದ್ರವು ಶಾಸಕರು, ಎಂಎಲ್ಸಿಗಳನ್ನು ಸಾಕುವ ಕೇಂದ್ರ ಮುಬಾರಕ್ ಆರೋಪ: ದಾಖಲೆ ಬಹಿರಂಗ ಪಡಿಸುವಂತೆ ನಗರಸಭೆ ಅಧ್ಯಕ್ಷೆ, ಸದಸ್ಯರ ಸವಾಲು

ಕೋಲಾರ: ನಗರಸಭೆಯ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ವಿಶೇಷ ಅನುದಾನ 30 ಕೋಟಿ ಬಂದಿದ್ದು ಈ ಹಣವು ನಿರ್ಮಿತಿ ಕೇಂದ್ರ ಮತ್ತು ಕ್ರೆಡಿಲ್ ಇಲಾಖೆಗೆ ವಹಿಸಿದ್ದರ ಬಗ್ಗೆ ನಗರಸಭೆ ಮಾಜಿ ಅಧ್ಯಕ್ಷ ಮುಬಾರಕ್ ಅವರು ಸಭೆಯಲ್ಲಿ ಶಾಸಕರು ಮತ್ತು ಎಂಎಲ್ಸಿಗಳನ್ನು ಸಾಕುವ ಕೇಂದ್ರಗಳ ಎಂದು ಆರೋಪಿಸಿದ್ದಾರೆ ಬರೀ ಅರೋಪ ಮಾಡುವುದು ಬಿಟ್ಟು ದಾಖಲೆ ಸಮೇತ ಸಾಬೀತುಪಡಿಸಲಿ ಎಂದು ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಸವಾಲು ಹಾಕಿದರು.

ನಗರಸಭೆ ಆವರಣದಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಗರಸಭೆ ಮಾಜಿ ಅಧ್ಯಕ್ಷರಾಗಿ ಹಿರಿಯ ಸದಸ್ಯರಾಗಿರುವ ಮುಬಾರಕ್ ಅವರು ಪ್ರತಿ ಸಭೆಯಲ್ಲಿ ಬರೀ ಆರೋಪಗಳನ್ನು ಮಾಡಲಿಕ್ಕೆ ಬರತ್ತಾರೆ ಒಂದು ಬಾರಿ ಅಭಿವೃದ್ಧಿಗೆ ಶಾಸಕ ಕೊತ್ತೂರು ಮಂಜುನಾಥ್ ಮತ್ತು ಎಂಎಲ್ಸಿ ಅನಿಲ್ ಕುಮಾರ್ ನಯಾ ಪೈಸೆ ಬಂದಿಲ್ಲ ಎಂದು ಹೇಳುವ ಅವರು ಹೇಗೆ 30 ಕೋಟಿ ಅನುದಾನದ ಬಗ್ಗೆ ಮಾತಾಡತ್ತಾರೆ ಇವರಿಗೆ ಏನಾದರೂ ನೈತಿಕತೆ ಇದ್ದರೆ ಮೊದಲು ದಾಖಲೆಗಳನ್ನು ನೀಡಲಿ ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಸದಸ್ಯರೇ ಬುದ್ದಿ ಕಲಿಸಬೇಕಾಗುತ್ತದೆ ಎಂದರು.

ಕಳೆದ ಬಾರಿಯ ಸಭೆಯಲ್ಲಿ ನಗರಸಭೆ ಅಧ್ಯಕ್ಷರಿಗೆ ಇರುವ ಅಧಿಕಾರವನ್ನು ಶಾಸಕರು ಎಂಎಲ್ಸಿಗಳು ಆಪರೇಟ್ ಮಾಡತ್ತಾರೆ ಎಂದು ಆರೋಪಿಸಿದರು. ನನ್ನನ್ನು 23 ಸದಸ್ಯರಿಂದ ಆಯ್ಕೆಯಾಗಿದ್ದೇನೆ ನನಗೂ ಒಂದಿಷ್ಟು ಜ್ಞಾನವು ಇದೆ ಯಾರ ಕಡೆಯಿಂದಲೂ ಅಪರೇಟ್ ಮಾಡಿಸಿಕೊಳ್ಳುವ ಪರಿಸ್ಥಿತಿ ಇನ್ನೂ ಬಂದಿಲ್ಲ ನೀವು ಕೂಡ ಅಧ್ಯಕ್ಷರಾಗಿ ಇದ್ದವರು ನೀವು ಯಾರ ಕಡೆಯಿಂದ ಅಪರೇಟ್ ಆಗಿದ್ದೀರ ಉತ್ತರ ಕೊಡಬೇಕು ಅವರು ಎಂದು ಪ್ರಶ್ನೆ ಮಾಡಿದರು.

ಈ ಸಂದರ್ಭದಲ್ಲಿ ಸದಸ್ಯ ಎನ್. ಅಂಬರೀಷ್ ಮಾತನಾಡಿ, ಮುಬಾರಕ್ ಸಹ 2014 ರಿಂದ 2016 ರ ವರೆಗೆ ಅಧ್ಯಕ್ಷರಾಗಿ ಸುಮಾರು 1.40 ಕೋಟಿ ಅನುದಾನವನ್ನು ನಿರ್ಮಿತಿ ಕೇಂದ್ರಕ್ಕೆ ಹಾಗೂ ಕಿಯೋನಿಕ್ಸ್ ಇಲಾಖೆಗೆ ಬಿಡುಗಡೆ ಮಾಡಿದ್ದರು ಅವತ್ತು ಯಾವ ಉದ್ದೇಶಕ್ಕಾಗಿ ಕೊಟ್ಟಿದ್ದೀರಾ ಇವತ್ತು ಅ ಇಲಾಖೆಗಳ ಬಗ್ಗೆ ಆರೋಪ ಮಾಡಲಿಕ್ಕೆ ಯಾವ ನೈತಿಕತೆ ಇದೆ ನಿಮ್ಮ ಹೊಟ್ಟೆಪಾಡಿಗಾಗಿ ಯಾರ ಯಾರ ಮನೆ ಬಾಗಿಲಿಗೆ ಹೋಗಿದ್ದೀರಾ ಜನಕ್ಕೆ ಗೊತ್ತಿದೆ ಆರೋಪ ಮಾಡುವ ಮೊದಲು ತಾವು ದಾಖಲೆಗಳನ್ನು ಸಾಬೀತು ಮಾಡಲಿ ಇಲ್ಲದೇ ಹೋದರೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸದಸ್ಯ ಸುರೇಶ್ ಬಾಬು ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಎಷ್ಟು ಅನುದಾನ ಬಂದಿದೆ ಎಂಬುದನ್ನು ಕಾಮಗಾರಿ ಸ್ಥಳದಲ್ಲಿಯೇ ಸಾಬೀತು ಪಡಿಸಲು ಸಿದ್ದವಿದ್ದೇವೆ ಮುಬಾರಕ್ ಅವರೇ ನಿಮಗೆ ಏನಾದರೂ ರಾಜಕೀಯದ ಮೌಲ್ಯದ ಜೊತೆಗೆ ನೈತಿಕತೆ ಇದ್ದರೆ ಮಾಧ್ಯಮರೊಂದಿಗೆ ದಿನಾಂಕ ನಿಗಧಿ ಮಾಡಿ ಅದು ಎಲ್ಲಾ ಬಿಟ್ಟು ಆಧಾರ ರಹಿತವಿಲ್ಲದೇ ವಿನಾಕಾರಣ ಮಾತಾಡುವುದಕ್ಕೆ ನಾಚಿಕೆ ಪಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸದಸ್ಯ ಅಫ್ಸರ್ ಮಾತನಾಡಿ, ಪ್ರತಿ ಬಾರಿಯ ಸಭೆಯಲ್ಲಿ ಆರೋಪ ಮಾಡಲಿಕ್ಕೆ ಸೀಮಿತವಾಗಿದ್ದು ಅಭಿವೃದ್ಧಿಗೆ ಸಹಕಾರವಿಲ್ಲ ಅಲ್ಪಸಂಖ್ಯಾತ ವಾರ್ಡ್ ಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿದರು ವಿರೋಧ ವ್ಯಕ್ತಪಡಿಸತ್ತಾರೆ ಎಂದರೆ ನಮ್ಮ ಸಮುದಾಯದವರು ಎಂದು ಹೇಳಿಕೊಂಡು ಓಡಾಡುತ್ತಾರೆ ಅವರು ಅಧ್ಯಕ್ಷರಾಗಿ ಹೇಗೆ ಸಭೆಗಳನ್ನು ನಡೆಸಿದ್ದಾರೆ ಎಂಬುದು ಜನಕ್ಕೆ ಗೊತ್ತಿದೆ ಇವತ್ತಿನ ಅಧ್ಯಕ್ಷರ ಉಪಾಧ್ಯಕ್ಷ ಬಗ್ಗೆ ಮಾತಾಡುವುದಕ್ಕೆ ಯೋಗ್ಯತೆ ಇಲ್ಲ ಎಂದು ಆರೋಪಿಸಿದರು.

ಸದಸ್ಯ ರಫೀ ಮಾತನಾಡಿ, ಮಾಜಿ ಅಧ್ಯಕ್ಷ ಮುಬಾರಕ್ ಅವರಿಗೆ ಅತ್ಮ ಮತ್ತು ಶರೀರ ಕೆಟ್ಟರಬೇಕು ಅದಕ್ಕೆ ಅವರು ಬರೀ ಆರೋಪಕ್ಕೆ ಸೀಮಿತವಾಗಿದ್ದಾರೆ ಎರಡು ನಾಲಿಗೆ ಇರೋ ವ್ಯಕ್ತಿ ಅವರಿಂದ ಮುಸ್ಲಿಂ ಸಮುದಾಯಕ್ಕೆ ಅವಮಾನವಾಗಿದೆ ಪ್ರತಿ ಚುನಾವಣೆಗೆ ಒಂದೊಂದು ಪಕ್ಷದ ಪರವಾಗಿ ಕೆಲಸ ಮಾಡತ್ತಾರೆ ಅಂತಹವರಿಂದ ನಗರಸಭೆ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಸಂಗೀತಾ ಜಗದೀಶ್, ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಖಾನ್ ಸದಸ್ಯರಾದ ಹಿದಾಯಿತ್ ಉಲ್ಲಾ, ಏಜಾಜ್, ಗುಣಶೇಖರ್, ಶ್ಯಾಮೀರ್, ಏಜಾಜ್ ಪಾಷ, ಮುಂತಾದವರು ಇದ್ದರು.

Ramesh Babu

Journalist

Recent Posts

ಚರಂಡಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ..!

ಚರಂಡಿಯಲ್ಲಿ‌ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದ ಸ್ವರ್ಣಾದ್ರಿ ಹೋಟೆಲ್ ಮುಂಭಾಗದಲ್ಲಿ ನಡೆದಿದೆ... ಮಹಿಳೆ…

3 hours ago

ಮಾ.6ರಂದು ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ: ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹ

ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…

6 hours ago

ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ: ವಿಜೇತರಿಗೆ ಬಹುಮಾನ ವಿತರಣೆ

ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…

10 hours ago

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

21 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

22 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

23 hours ago