Categories: ಕೋಲಾರ

ಕ್ರೆಡಿಲ್ ಮತ್ತು ನಿರ್ಮಿತಿ ಕೇಂದ್ರವು ಶಾಸಕರು, ಎಂಎಲ್ಸಿಗಳನ್ನು ಸಾಕುವ ಕೇಂದ್ರ ಮುಬಾರಕ್ ಆರೋಪ: ದಾಖಲೆ ಬಹಿರಂಗ ಪಡಿಸುವಂತೆ ನಗರಸಭೆ ಅಧ್ಯಕ್ಷೆ, ಸದಸ್ಯರ ಸವಾಲು

ಕೋಲಾರ: ನಗರಸಭೆಯ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ವಿಶೇಷ ಅನುದಾನ 30 ಕೋಟಿ ಬಂದಿದ್ದು ಈ ಹಣವು ನಿರ್ಮಿತಿ ಕೇಂದ್ರ ಮತ್ತು ಕ್ರೆಡಿಲ್ ಇಲಾಖೆಗೆ ವಹಿಸಿದ್ದರ ಬಗ್ಗೆ ನಗರಸಭೆ ಮಾಜಿ ಅಧ್ಯಕ್ಷ ಮುಬಾರಕ್ ಅವರು ಸಭೆಯಲ್ಲಿ ಶಾಸಕರು ಮತ್ತು ಎಂಎಲ್ಸಿಗಳನ್ನು ಸಾಕುವ ಕೇಂದ್ರಗಳ ಎಂದು ಆರೋಪಿಸಿದ್ದಾರೆ ಬರೀ ಅರೋಪ ಮಾಡುವುದು ಬಿಟ್ಟು ದಾಖಲೆ ಸಮೇತ ಸಾಬೀತುಪಡಿಸಲಿ ಎಂದು ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಸವಾಲು ಹಾಕಿದರು.

ನಗರಸಭೆ ಆವರಣದಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಗರಸಭೆ ಮಾಜಿ ಅಧ್ಯಕ್ಷರಾಗಿ ಹಿರಿಯ ಸದಸ್ಯರಾಗಿರುವ ಮುಬಾರಕ್ ಅವರು ಪ್ರತಿ ಸಭೆಯಲ್ಲಿ ಬರೀ ಆರೋಪಗಳನ್ನು ಮಾಡಲಿಕ್ಕೆ ಬರತ್ತಾರೆ ಒಂದು ಬಾರಿ ಅಭಿವೃದ್ಧಿಗೆ ಶಾಸಕ ಕೊತ್ತೂರು ಮಂಜುನಾಥ್ ಮತ್ತು ಎಂಎಲ್ಸಿ ಅನಿಲ್ ಕುಮಾರ್ ನಯಾ ಪೈಸೆ ಬಂದಿಲ್ಲ ಎಂದು ಹೇಳುವ ಅವರು ಹೇಗೆ 30 ಕೋಟಿ ಅನುದಾನದ ಬಗ್ಗೆ ಮಾತಾಡತ್ತಾರೆ ಇವರಿಗೆ ಏನಾದರೂ ನೈತಿಕತೆ ಇದ್ದರೆ ಮೊದಲು ದಾಖಲೆಗಳನ್ನು ನೀಡಲಿ ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಸದಸ್ಯರೇ ಬುದ್ದಿ ಕಲಿಸಬೇಕಾಗುತ್ತದೆ ಎಂದರು.

ಕಳೆದ ಬಾರಿಯ ಸಭೆಯಲ್ಲಿ ನಗರಸಭೆ ಅಧ್ಯಕ್ಷರಿಗೆ ಇರುವ ಅಧಿಕಾರವನ್ನು ಶಾಸಕರು ಎಂಎಲ್ಸಿಗಳು ಆಪರೇಟ್ ಮಾಡತ್ತಾರೆ ಎಂದು ಆರೋಪಿಸಿದರು. ನನ್ನನ್ನು 23 ಸದಸ್ಯರಿಂದ ಆಯ್ಕೆಯಾಗಿದ್ದೇನೆ ನನಗೂ ಒಂದಿಷ್ಟು ಜ್ಞಾನವು ಇದೆ ಯಾರ ಕಡೆಯಿಂದಲೂ ಅಪರೇಟ್ ಮಾಡಿಸಿಕೊಳ್ಳುವ ಪರಿಸ್ಥಿತಿ ಇನ್ನೂ ಬಂದಿಲ್ಲ ನೀವು ಕೂಡ ಅಧ್ಯಕ್ಷರಾಗಿ ಇದ್ದವರು ನೀವು ಯಾರ ಕಡೆಯಿಂದ ಅಪರೇಟ್ ಆಗಿದ್ದೀರ ಉತ್ತರ ಕೊಡಬೇಕು ಅವರು ಎಂದು ಪ್ರಶ್ನೆ ಮಾಡಿದರು.

ಈ ಸಂದರ್ಭದಲ್ಲಿ ಸದಸ್ಯ ಎನ್. ಅಂಬರೀಷ್ ಮಾತನಾಡಿ, ಮುಬಾರಕ್ ಸಹ 2014 ರಿಂದ 2016 ರ ವರೆಗೆ ಅಧ್ಯಕ್ಷರಾಗಿ ಸುಮಾರು 1.40 ಕೋಟಿ ಅನುದಾನವನ್ನು ನಿರ್ಮಿತಿ ಕೇಂದ್ರಕ್ಕೆ ಹಾಗೂ ಕಿಯೋನಿಕ್ಸ್ ಇಲಾಖೆಗೆ ಬಿಡುಗಡೆ ಮಾಡಿದ್ದರು ಅವತ್ತು ಯಾವ ಉದ್ದೇಶಕ್ಕಾಗಿ ಕೊಟ್ಟಿದ್ದೀರಾ ಇವತ್ತು ಅ ಇಲಾಖೆಗಳ ಬಗ್ಗೆ ಆರೋಪ ಮಾಡಲಿಕ್ಕೆ ಯಾವ ನೈತಿಕತೆ ಇದೆ ನಿಮ್ಮ ಹೊಟ್ಟೆಪಾಡಿಗಾಗಿ ಯಾರ ಯಾರ ಮನೆ ಬಾಗಿಲಿಗೆ ಹೋಗಿದ್ದೀರಾ ಜನಕ್ಕೆ ಗೊತ್ತಿದೆ ಆರೋಪ ಮಾಡುವ ಮೊದಲು ತಾವು ದಾಖಲೆಗಳನ್ನು ಸಾಬೀತು ಮಾಡಲಿ ಇಲ್ಲದೇ ಹೋದರೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸದಸ್ಯ ಸುರೇಶ್ ಬಾಬು ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಎಷ್ಟು ಅನುದಾನ ಬಂದಿದೆ ಎಂಬುದನ್ನು ಕಾಮಗಾರಿ ಸ್ಥಳದಲ್ಲಿಯೇ ಸಾಬೀತು ಪಡಿಸಲು ಸಿದ್ದವಿದ್ದೇವೆ ಮುಬಾರಕ್ ಅವರೇ ನಿಮಗೆ ಏನಾದರೂ ರಾಜಕೀಯದ ಮೌಲ್ಯದ ಜೊತೆಗೆ ನೈತಿಕತೆ ಇದ್ದರೆ ಮಾಧ್ಯಮರೊಂದಿಗೆ ದಿನಾಂಕ ನಿಗಧಿ ಮಾಡಿ ಅದು ಎಲ್ಲಾ ಬಿಟ್ಟು ಆಧಾರ ರಹಿತವಿಲ್ಲದೇ ವಿನಾಕಾರಣ ಮಾತಾಡುವುದಕ್ಕೆ ನಾಚಿಕೆ ಪಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸದಸ್ಯ ಅಫ್ಸರ್ ಮಾತನಾಡಿ, ಪ್ರತಿ ಬಾರಿಯ ಸಭೆಯಲ್ಲಿ ಆರೋಪ ಮಾಡಲಿಕ್ಕೆ ಸೀಮಿತವಾಗಿದ್ದು ಅಭಿವೃದ್ಧಿಗೆ ಸಹಕಾರವಿಲ್ಲ ಅಲ್ಪಸಂಖ್ಯಾತ ವಾರ್ಡ್ ಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿದರು ವಿರೋಧ ವ್ಯಕ್ತಪಡಿಸತ್ತಾರೆ ಎಂದರೆ ನಮ್ಮ ಸಮುದಾಯದವರು ಎಂದು ಹೇಳಿಕೊಂಡು ಓಡಾಡುತ್ತಾರೆ ಅವರು ಅಧ್ಯಕ್ಷರಾಗಿ ಹೇಗೆ ಸಭೆಗಳನ್ನು ನಡೆಸಿದ್ದಾರೆ ಎಂಬುದು ಜನಕ್ಕೆ ಗೊತ್ತಿದೆ ಇವತ್ತಿನ ಅಧ್ಯಕ್ಷರ ಉಪಾಧ್ಯಕ್ಷ ಬಗ್ಗೆ ಮಾತಾಡುವುದಕ್ಕೆ ಯೋಗ್ಯತೆ ಇಲ್ಲ ಎಂದು ಆರೋಪಿಸಿದರು.

ಸದಸ್ಯ ರಫೀ ಮಾತನಾಡಿ, ಮಾಜಿ ಅಧ್ಯಕ್ಷ ಮುಬಾರಕ್ ಅವರಿಗೆ ಅತ್ಮ ಮತ್ತು ಶರೀರ ಕೆಟ್ಟರಬೇಕು ಅದಕ್ಕೆ ಅವರು ಬರೀ ಆರೋಪಕ್ಕೆ ಸೀಮಿತವಾಗಿದ್ದಾರೆ ಎರಡು ನಾಲಿಗೆ ಇರೋ ವ್ಯಕ್ತಿ ಅವರಿಂದ ಮುಸ್ಲಿಂ ಸಮುದಾಯಕ್ಕೆ ಅವಮಾನವಾಗಿದೆ ಪ್ರತಿ ಚುನಾವಣೆಗೆ ಒಂದೊಂದು ಪಕ್ಷದ ಪರವಾಗಿ ಕೆಲಸ ಮಾಡತ್ತಾರೆ ಅಂತಹವರಿಂದ ನಗರಸಭೆ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಸಂಗೀತಾ ಜಗದೀಶ್, ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಖಾನ್ ಸದಸ್ಯರಾದ ಹಿದಾಯಿತ್ ಉಲ್ಲಾ, ಏಜಾಜ್, ಗುಣಶೇಖರ್, ಶ್ಯಾಮೀರ್, ಏಜಾಜ್ ಪಾಷ, ಮುಂತಾದವರು ಇದ್ದರು.

Ramesh Babu

Journalist

Recent Posts

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

59 minutes ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

3 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

21 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

22 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

23 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

23 hours ago