ಕ್ಲಾಸಿಕಲ್ ಗೇಮ್‌ನಲ್ಲಿ ವಿಶ್ವ ನಂ.1 ಚೆಸ್ ಪಟು ಮ್ಯಾಗ್ನಸ್ ಕಾರ್ಲ್‌ಸನ್ ಮಣಿಸಿದ ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್

ಭಾರತದ ಯುವ ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್, ನಾರ್ವೆ ಚೆಸ್ ಟೂರ್ನಿಯ 6ನೇ ರೌಂಡ್‌ನಲ್ಲಿ ವಿಶ್ವ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧ ತನ್ನ ಮೊದಲ ಕ್ಲಾಸಿಕಲ್ ಗೆಲುವು ದಾಖಲಿಸಿ ಇತಿಹಾಸ ಬರೆದಿದ್ದಾರೆ.

ಇದೇ ಮೊದಲ ಬಾರಿ ಕ್ಲಾಸಿಕಲ್ ಗೇಮ್‌ನಲ್ಲಿ ವಿಶ್ವ ನಂ.1 ಚೆಸ್ ಪಟು ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನು ಸೋಲಿಸುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.

ಇದರ ಬೆನ್ನಲ್ಲೇ ತಾಳ್ಮೆಕಳೆದುಕೊಂಡಂತೆ ವರ್ತಿಸಿದ ಕಾರ್ಲ್‌ಸನ್ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್‌ಗೆ ಒಳಗಾಗಿದ್ದಾರೆ.

ಆ ಸೋಲಿನ ನಂತರ, ಕಾರ್ಲ್ಸನ್ ಸಾಮಾಜಿಕ ಮಾಧ್ಯಮದಲ್ಲಿ ಒಂದು ನಿಗೂಢ ಸಂದೇಶವನ್ನು ಪೋಸ್ಟ್ ಮಾಡಿ, “ನೀವು ರಾಜನ ವಿರುದ್ಧ ಆಡುವಾಗ, ನೀವು ತಪ್ಪಿಸಿಕೊಳ್ಳಬಾರದು” ಎಂದು ಕಾಲೆಳೆದಿದ್ದರು. ಈ ಸಂದೇಶವು ಮ್ಯಾಗ್ನಸ್ ಕಾರ್ಲ್ಸನ್ ಅವರ ಪ್ರಾಬಲ್ಯದ ಸಂಕೇತವಾಗಿತ್ತು. ಆದರೆ ಆರನೇ ಸುತ್ತಿನಲ್ಲಿ ಗುಕೇಶ್ ಅದಕ್ಕೆ ಸೂಕ್ತ ಉತ್ತರವನ್ನು ನೀಡಿದರು. ಬಿಳಿ ಕಾಯಿಗಳೊಂದಿಗೆ ಆಡಿದ 19 ವರ್ಷದ ಗುಕೇಶ್ ಆಟದ ಉದ್ದಕ್ಕೂ ತಾಳ್ಮೆ ಮತ್ತು ಶಿಸ್ತನ್ನು ತೋರಿಸಿದರು.

19 ವರ್ಷದ ಗುಕೇಶ್ ವಿರುದ್ಧದ ಸೋಲನ್ನು ಅರಗಿಸಿಕೊಳ್ಳಲು ಮ್ಯಾಗ್ನಸ್ ಕಾರ್ಲ್ಸನ್ ಸಾಧ್ಯವಾಗಲಿಲ್ಲ. ಅಲ್ಲದೆ ಆಘಾತಕಾರಿ ಸೋಲಿನಿಂದ ವಿಚಲಿತರಾದ ಕಾರ್ಲ್ಸನ್ ಪಂದ್ಯದ ನಂತರ ಮೇಜನ್ನು ಗುದ್ದುವ ಮೂಲಕ ತನ್ನ ಆಕ್ರೋಶವನ್ನು ಹೊರಹಾಕಿದ್ದರು.

ಇನ್ನು ಮ್ಯಾಗ್ನಸ್ ಕಾರ್ಲ್ಸನ್ ಅವರ ಈ ಸೋಲನ್ನು ಅವರ ವೃತ್ತಿಜೀವನದ ಅತಿದೊಡ್ಡ ಸೋಲುಗಳಲ್ಲಿ ಒಂದು ಖ್ಯಾತ ಚೆಸ್ ಗ್ರ್ಯಾಂಡ್ ಮಾಸ್ಟರ್ ಸುಸಾನ್ ಪೋಲ್ಗರ್ ವಿಮರ್ಶಿಸಿದ್ದಾರೆ. ಅದೇ ಸಮಯದಲ್ಲಿ, ನಾರ್ವೆ ಚೆಸ್‌ ಟೂರ್ನಿಯಲ್ಲಿ  ಎರಡನೇ ಬಾರಿಗೆ, ಭಾರತೀಯ ಆಟಗಾರನೊಬ್ಬ ಕ್ಲಾಸಿಕ್ ಸ್ವರೂಪದಲ್ಲಿ ಕಾರ್ಲ್ಸನ್ ಅವರನ್ನು ಸೋಲಿಸಿದ್ದಾರೆ.

ಇದಕ್ಕೂ ಮುನ್ನ ಕಳೆದ ವರ್ಷ ಆರ್ ಪ್ರಜ್ಞಾನಂದ ಅವರು ಮ್ಯಾಗ್ನಸ್ ಕಾರ್ಲ್ಸನ್ ಅವರಿಗೆ ಸೋಲಿನ ರುಚಿ ತೋರಿಸಿದ್ದರು. ಇದೀಗ ಡಿ ಗುಕೇಶ್ ಕೂಡ ವಿಶ್ವದ ನಂಬರ್ 1 ಚೆಸ್ ಚತುರನ ವಿರುದ್ಧ ಸ್ಮರಣೀಯ ಗೆಲುವು ಸಾಧಿಸಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

9 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

14 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

14 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

22 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago