ಭಾರತದ ಯುವ ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್, ನಾರ್ವೆ ಚೆಸ್ ಟೂರ್ನಿಯ 6ನೇ ರೌಂಡ್ನಲ್ಲಿ ವಿಶ್ವ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್ಸನ್ ವಿರುದ್ಧ ತನ್ನ ಮೊದಲ ಕ್ಲಾಸಿಕಲ್ ಗೆಲುವು ದಾಖಲಿಸಿ ಇತಿಹಾಸ ಬರೆದಿದ್ದಾರೆ.
ಇದೇ ಮೊದಲ ಬಾರಿ ಕ್ಲಾಸಿಕಲ್ ಗೇಮ್ನಲ್ಲಿ ವಿಶ್ವ ನಂ.1 ಚೆಸ್ ಪಟು ಮ್ಯಾಗ್ನಸ್ ಕಾರ್ಲ್ಸನ್ ಅವರನ್ನು ಸೋಲಿಸುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.
ಇದರ ಬೆನ್ನಲ್ಲೇ ತಾಳ್ಮೆಕಳೆದುಕೊಂಡಂತೆ ವರ್ತಿಸಿದ ಕಾರ್ಲ್ಸನ್ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ಗೆ ಒಳಗಾಗಿದ್ದಾರೆ.
ಆ ಸೋಲಿನ ನಂತರ, ಕಾರ್ಲ್ಸನ್ ಸಾಮಾಜಿಕ ಮಾಧ್ಯಮದಲ್ಲಿ ಒಂದು ನಿಗೂಢ ಸಂದೇಶವನ್ನು ಪೋಸ್ಟ್ ಮಾಡಿ, “ನೀವು ರಾಜನ ವಿರುದ್ಧ ಆಡುವಾಗ, ನೀವು ತಪ್ಪಿಸಿಕೊಳ್ಳಬಾರದು” ಎಂದು ಕಾಲೆಳೆದಿದ್ದರು. ಈ ಸಂದೇಶವು ಮ್ಯಾಗ್ನಸ್ ಕಾರ್ಲ್ಸನ್ ಅವರ ಪ್ರಾಬಲ್ಯದ ಸಂಕೇತವಾಗಿತ್ತು. ಆದರೆ ಆರನೇ ಸುತ್ತಿನಲ್ಲಿ ಗುಕೇಶ್ ಅದಕ್ಕೆ ಸೂಕ್ತ ಉತ್ತರವನ್ನು ನೀಡಿದರು. ಬಿಳಿ ಕಾಯಿಗಳೊಂದಿಗೆ ಆಡಿದ 19 ವರ್ಷದ ಗುಕೇಶ್ ಆಟದ ಉದ್ದಕ್ಕೂ ತಾಳ್ಮೆ ಮತ್ತು ಶಿಸ್ತನ್ನು ತೋರಿಸಿದರು.
19 ವರ್ಷದ ಗುಕೇಶ್ ವಿರುದ್ಧದ ಸೋಲನ್ನು ಅರಗಿಸಿಕೊಳ್ಳಲು ಮ್ಯಾಗ್ನಸ್ ಕಾರ್ಲ್ಸನ್ ಸಾಧ್ಯವಾಗಲಿಲ್ಲ. ಅಲ್ಲದೆ ಆಘಾತಕಾರಿ ಸೋಲಿನಿಂದ ವಿಚಲಿತರಾದ ಕಾರ್ಲ್ಸನ್ ಪಂದ್ಯದ ನಂತರ ಮೇಜನ್ನು ಗುದ್ದುವ ಮೂಲಕ ತನ್ನ ಆಕ್ರೋಶವನ್ನು ಹೊರಹಾಕಿದ್ದರು.
ಇನ್ನು ಮ್ಯಾಗ್ನಸ್ ಕಾರ್ಲ್ಸನ್ ಅವರ ಈ ಸೋಲನ್ನು ಅವರ ವೃತ್ತಿಜೀವನದ ಅತಿದೊಡ್ಡ ಸೋಲುಗಳಲ್ಲಿ ಒಂದು ಖ್ಯಾತ ಚೆಸ್ ಗ್ರ್ಯಾಂಡ್ ಮಾಸ್ಟರ್ ಸುಸಾನ್ ಪೋಲ್ಗರ್ ವಿಮರ್ಶಿಸಿದ್ದಾರೆ. ಅದೇ ಸಮಯದಲ್ಲಿ, ನಾರ್ವೆ ಚೆಸ್ ಟೂರ್ನಿಯಲ್ಲಿ ಎರಡನೇ ಬಾರಿಗೆ, ಭಾರತೀಯ ಆಟಗಾರನೊಬ್ಬ ಕ್ಲಾಸಿಕ್ ಸ್ವರೂಪದಲ್ಲಿ ಕಾರ್ಲ್ಸನ್ ಅವರನ್ನು ಸೋಲಿಸಿದ್ದಾರೆ.
ಇದಕ್ಕೂ ಮುನ್ನ ಕಳೆದ ವರ್ಷ ಆರ್ ಪ್ರಜ್ಞಾನಂದ ಅವರು ಮ್ಯಾಗ್ನಸ್ ಕಾರ್ಲ್ಸನ್ ಅವರಿಗೆ ಸೋಲಿನ ರುಚಿ ತೋರಿಸಿದ್ದರು. ಇದೀಗ ಡಿ ಗುಕೇಶ್ ಕೂಡ ವಿಶ್ವದ ನಂಬರ್ 1 ಚೆಸ್ ಚತುರನ ವಿರುದ್ಧ ಸ್ಮರಣೀಯ ಗೆಲುವು ಸಾಧಿಸಿದ್ದಾರೆ.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…