ಕ್ಲಾಸಿಕಲ್ ಗೇಮ್‌ನಲ್ಲಿ ವಿಶ್ವ ನಂ.1 ಚೆಸ್ ಪಟು ಮ್ಯಾಗ್ನಸ್ ಕಾರ್ಲ್‌ಸನ್ ಮಣಿಸಿದ ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್

ಭಾರತದ ಯುವ ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್, ನಾರ್ವೆ ಚೆಸ್ ಟೂರ್ನಿಯ 6ನೇ ರೌಂಡ್‌ನಲ್ಲಿ ವಿಶ್ವ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧ ತನ್ನ ಮೊದಲ ಕ್ಲಾಸಿಕಲ್ ಗೆಲುವು ದಾಖಲಿಸಿ ಇತಿಹಾಸ ಬರೆದಿದ್ದಾರೆ.

ಇದೇ ಮೊದಲ ಬಾರಿ ಕ್ಲಾಸಿಕಲ್ ಗೇಮ್‌ನಲ್ಲಿ ವಿಶ್ವ ನಂ.1 ಚೆಸ್ ಪಟು ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನು ಸೋಲಿಸುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.

ಇದರ ಬೆನ್ನಲ್ಲೇ ತಾಳ್ಮೆಕಳೆದುಕೊಂಡಂತೆ ವರ್ತಿಸಿದ ಕಾರ್ಲ್‌ಸನ್ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್‌ಗೆ ಒಳಗಾಗಿದ್ದಾರೆ.

ಆ ಸೋಲಿನ ನಂತರ, ಕಾರ್ಲ್ಸನ್ ಸಾಮಾಜಿಕ ಮಾಧ್ಯಮದಲ್ಲಿ ಒಂದು ನಿಗೂಢ ಸಂದೇಶವನ್ನು ಪೋಸ್ಟ್ ಮಾಡಿ, “ನೀವು ರಾಜನ ವಿರುದ್ಧ ಆಡುವಾಗ, ನೀವು ತಪ್ಪಿಸಿಕೊಳ್ಳಬಾರದು” ಎಂದು ಕಾಲೆಳೆದಿದ್ದರು. ಈ ಸಂದೇಶವು ಮ್ಯಾಗ್ನಸ್ ಕಾರ್ಲ್ಸನ್ ಅವರ ಪ್ರಾಬಲ್ಯದ ಸಂಕೇತವಾಗಿತ್ತು. ಆದರೆ ಆರನೇ ಸುತ್ತಿನಲ್ಲಿ ಗುಕೇಶ್ ಅದಕ್ಕೆ ಸೂಕ್ತ ಉತ್ತರವನ್ನು ನೀಡಿದರು. ಬಿಳಿ ಕಾಯಿಗಳೊಂದಿಗೆ ಆಡಿದ 19 ವರ್ಷದ ಗುಕೇಶ್ ಆಟದ ಉದ್ದಕ್ಕೂ ತಾಳ್ಮೆ ಮತ್ತು ಶಿಸ್ತನ್ನು ತೋರಿಸಿದರು.

19 ವರ್ಷದ ಗುಕೇಶ್ ವಿರುದ್ಧದ ಸೋಲನ್ನು ಅರಗಿಸಿಕೊಳ್ಳಲು ಮ್ಯಾಗ್ನಸ್ ಕಾರ್ಲ್ಸನ್ ಸಾಧ್ಯವಾಗಲಿಲ್ಲ. ಅಲ್ಲದೆ ಆಘಾತಕಾರಿ ಸೋಲಿನಿಂದ ವಿಚಲಿತರಾದ ಕಾರ್ಲ್ಸನ್ ಪಂದ್ಯದ ನಂತರ ಮೇಜನ್ನು ಗುದ್ದುವ ಮೂಲಕ ತನ್ನ ಆಕ್ರೋಶವನ್ನು ಹೊರಹಾಕಿದ್ದರು.

ಇನ್ನು ಮ್ಯಾಗ್ನಸ್ ಕಾರ್ಲ್ಸನ್ ಅವರ ಈ ಸೋಲನ್ನು ಅವರ ವೃತ್ತಿಜೀವನದ ಅತಿದೊಡ್ಡ ಸೋಲುಗಳಲ್ಲಿ ಒಂದು ಖ್ಯಾತ ಚೆಸ್ ಗ್ರ್ಯಾಂಡ್ ಮಾಸ್ಟರ್ ಸುಸಾನ್ ಪೋಲ್ಗರ್ ವಿಮರ್ಶಿಸಿದ್ದಾರೆ. ಅದೇ ಸಮಯದಲ್ಲಿ, ನಾರ್ವೆ ಚೆಸ್‌ ಟೂರ್ನಿಯಲ್ಲಿ  ಎರಡನೇ ಬಾರಿಗೆ, ಭಾರತೀಯ ಆಟಗಾರನೊಬ್ಬ ಕ್ಲಾಸಿಕ್ ಸ್ವರೂಪದಲ್ಲಿ ಕಾರ್ಲ್ಸನ್ ಅವರನ್ನು ಸೋಲಿಸಿದ್ದಾರೆ.

ಇದಕ್ಕೂ ಮುನ್ನ ಕಳೆದ ವರ್ಷ ಆರ್ ಪ್ರಜ್ಞಾನಂದ ಅವರು ಮ್ಯಾಗ್ನಸ್ ಕಾರ್ಲ್ಸನ್ ಅವರಿಗೆ ಸೋಲಿನ ರುಚಿ ತೋರಿಸಿದ್ದರು. ಇದೀಗ ಡಿ ಗುಕೇಶ್ ಕೂಡ ವಿಶ್ವದ ನಂಬರ್ 1 ಚೆಸ್ ಚತುರನ ವಿರುದ್ಧ ಸ್ಮರಣೀಯ ಗೆಲುವು ಸಾಧಿಸಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

2 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

4 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

7 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

8 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

19 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

19 hours ago