ಕ್ಲಾಸಿಕಲ್ ಗೇಮ್‌ನಲ್ಲಿ ವಿಶ್ವ ನಂ.1 ಚೆಸ್ ಪಟು ಮ್ಯಾಗ್ನಸ್ ಕಾರ್ಲ್‌ಸನ್ ಮಣಿಸಿದ ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್

ಭಾರತದ ಯುವ ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್, ನಾರ್ವೆ ಚೆಸ್ ಟೂರ್ನಿಯ 6ನೇ ರೌಂಡ್‌ನಲ್ಲಿ ವಿಶ್ವ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧ ತನ್ನ ಮೊದಲ ಕ್ಲಾಸಿಕಲ್ ಗೆಲುವು ದಾಖಲಿಸಿ ಇತಿಹಾಸ ಬರೆದಿದ್ದಾರೆ.

ಇದೇ ಮೊದಲ ಬಾರಿ ಕ್ಲಾಸಿಕಲ್ ಗೇಮ್‌ನಲ್ಲಿ ವಿಶ್ವ ನಂ.1 ಚೆಸ್ ಪಟು ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನು ಸೋಲಿಸುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.

ಇದರ ಬೆನ್ನಲ್ಲೇ ತಾಳ್ಮೆಕಳೆದುಕೊಂಡಂತೆ ವರ್ತಿಸಿದ ಕಾರ್ಲ್‌ಸನ್ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್‌ಗೆ ಒಳಗಾಗಿದ್ದಾರೆ.

ಆ ಸೋಲಿನ ನಂತರ, ಕಾರ್ಲ್ಸನ್ ಸಾಮಾಜಿಕ ಮಾಧ್ಯಮದಲ್ಲಿ ಒಂದು ನಿಗೂಢ ಸಂದೇಶವನ್ನು ಪೋಸ್ಟ್ ಮಾಡಿ, “ನೀವು ರಾಜನ ವಿರುದ್ಧ ಆಡುವಾಗ, ನೀವು ತಪ್ಪಿಸಿಕೊಳ್ಳಬಾರದು” ಎಂದು ಕಾಲೆಳೆದಿದ್ದರು. ಈ ಸಂದೇಶವು ಮ್ಯಾಗ್ನಸ್ ಕಾರ್ಲ್ಸನ್ ಅವರ ಪ್ರಾಬಲ್ಯದ ಸಂಕೇತವಾಗಿತ್ತು. ಆದರೆ ಆರನೇ ಸುತ್ತಿನಲ್ಲಿ ಗುಕೇಶ್ ಅದಕ್ಕೆ ಸೂಕ್ತ ಉತ್ತರವನ್ನು ನೀಡಿದರು. ಬಿಳಿ ಕಾಯಿಗಳೊಂದಿಗೆ ಆಡಿದ 19 ವರ್ಷದ ಗುಕೇಶ್ ಆಟದ ಉದ್ದಕ್ಕೂ ತಾಳ್ಮೆ ಮತ್ತು ಶಿಸ್ತನ್ನು ತೋರಿಸಿದರು.

19 ವರ್ಷದ ಗುಕೇಶ್ ವಿರುದ್ಧದ ಸೋಲನ್ನು ಅರಗಿಸಿಕೊಳ್ಳಲು ಮ್ಯಾಗ್ನಸ್ ಕಾರ್ಲ್ಸನ್ ಸಾಧ್ಯವಾಗಲಿಲ್ಲ. ಅಲ್ಲದೆ ಆಘಾತಕಾರಿ ಸೋಲಿನಿಂದ ವಿಚಲಿತರಾದ ಕಾರ್ಲ್ಸನ್ ಪಂದ್ಯದ ನಂತರ ಮೇಜನ್ನು ಗುದ್ದುವ ಮೂಲಕ ತನ್ನ ಆಕ್ರೋಶವನ್ನು ಹೊರಹಾಕಿದ್ದರು.

ಇನ್ನು ಮ್ಯಾಗ್ನಸ್ ಕಾರ್ಲ್ಸನ್ ಅವರ ಈ ಸೋಲನ್ನು ಅವರ ವೃತ್ತಿಜೀವನದ ಅತಿದೊಡ್ಡ ಸೋಲುಗಳಲ್ಲಿ ಒಂದು ಖ್ಯಾತ ಚೆಸ್ ಗ್ರ್ಯಾಂಡ್ ಮಾಸ್ಟರ್ ಸುಸಾನ್ ಪೋಲ್ಗರ್ ವಿಮರ್ಶಿಸಿದ್ದಾರೆ. ಅದೇ ಸಮಯದಲ್ಲಿ, ನಾರ್ವೆ ಚೆಸ್‌ ಟೂರ್ನಿಯಲ್ಲಿ  ಎರಡನೇ ಬಾರಿಗೆ, ಭಾರತೀಯ ಆಟಗಾರನೊಬ್ಬ ಕ್ಲಾಸಿಕ್ ಸ್ವರೂಪದಲ್ಲಿ ಕಾರ್ಲ್ಸನ್ ಅವರನ್ನು ಸೋಲಿಸಿದ್ದಾರೆ.

ಇದಕ್ಕೂ ಮುನ್ನ ಕಳೆದ ವರ್ಷ ಆರ್ ಪ್ರಜ್ಞಾನಂದ ಅವರು ಮ್ಯಾಗ್ನಸ್ ಕಾರ್ಲ್ಸನ್ ಅವರಿಗೆ ಸೋಲಿನ ರುಚಿ ತೋರಿಸಿದ್ದರು. ಇದೀಗ ಡಿ ಗುಕೇಶ್ ಕೂಡ ವಿಶ್ವದ ನಂಬರ್ 1 ಚೆಸ್ ಚತುರನ ವಿರುದ್ಧ ಸ್ಮರಣೀಯ ಗೆಲುವು ಸಾಧಿಸಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

43 minutes ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

1 hour ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

2 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

7 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

13 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago