ಭಾರತದ ಯುವ ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್, ನಾರ್ವೆ ಚೆಸ್ ಟೂರ್ನಿಯ 6ನೇ ರೌಂಡ್ನಲ್ಲಿ ವಿಶ್ವ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್ಸನ್ ವಿರುದ್ಧ ತನ್ನ ಮೊದಲ ಕ್ಲಾಸಿಕಲ್ ಗೆಲುವು ದಾಖಲಿಸಿ ಇತಿಹಾಸ ಬರೆದಿದ್ದಾರೆ.
ಇದೇ ಮೊದಲ ಬಾರಿ ಕ್ಲಾಸಿಕಲ್ ಗೇಮ್ನಲ್ಲಿ ವಿಶ್ವ ನಂ.1 ಚೆಸ್ ಪಟು ಮ್ಯಾಗ್ನಸ್ ಕಾರ್ಲ್ಸನ್ ಅವರನ್ನು ಸೋಲಿಸುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.
ಇದರ ಬೆನ್ನಲ್ಲೇ ತಾಳ್ಮೆಕಳೆದುಕೊಂಡಂತೆ ವರ್ತಿಸಿದ ಕಾರ್ಲ್ಸನ್ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ಗೆ ಒಳಗಾಗಿದ್ದಾರೆ.
ಆ ಸೋಲಿನ ನಂತರ, ಕಾರ್ಲ್ಸನ್ ಸಾಮಾಜಿಕ ಮಾಧ್ಯಮದಲ್ಲಿ ಒಂದು ನಿಗೂಢ ಸಂದೇಶವನ್ನು ಪೋಸ್ಟ್ ಮಾಡಿ, “ನೀವು ರಾಜನ ವಿರುದ್ಧ ಆಡುವಾಗ, ನೀವು ತಪ್ಪಿಸಿಕೊಳ್ಳಬಾರದು” ಎಂದು ಕಾಲೆಳೆದಿದ್ದರು. ಈ ಸಂದೇಶವು ಮ್ಯಾಗ್ನಸ್ ಕಾರ್ಲ್ಸನ್ ಅವರ ಪ್ರಾಬಲ್ಯದ ಸಂಕೇತವಾಗಿತ್ತು. ಆದರೆ ಆರನೇ ಸುತ್ತಿನಲ್ಲಿ ಗುಕೇಶ್ ಅದಕ್ಕೆ ಸೂಕ್ತ ಉತ್ತರವನ್ನು ನೀಡಿದರು. ಬಿಳಿ ಕಾಯಿಗಳೊಂದಿಗೆ ಆಡಿದ 19 ವರ್ಷದ ಗುಕೇಶ್ ಆಟದ ಉದ್ದಕ್ಕೂ ತಾಳ್ಮೆ ಮತ್ತು ಶಿಸ್ತನ್ನು ತೋರಿಸಿದರು.
19 ವರ್ಷದ ಗುಕೇಶ್ ವಿರುದ್ಧದ ಸೋಲನ್ನು ಅರಗಿಸಿಕೊಳ್ಳಲು ಮ್ಯಾಗ್ನಸ್ ಕಾರ್ಲ್ಸನ್ ಸಾಧ್ಯವಾಗಲಿಲ್ಲ. ಅಲ್ಲದೆ ಆಘಾತಕಾರಿ ಸೋಲಿನಿಂದ ವಿಚಲಿತರಾದ ಕಾರ್ಲ್ಸನ್ ಪಂದ್ಯದ ನಂತರ ಮೇಜನ್ನು ಗುದ್ದುವ ಮೂಲಕ ತನ್ನ ಆಕ್ರೋಶವನ್ನು ಹೊರಹಾಕಿದ್ದರು.
ಇನ್ನು ಮ್ಯಾಗ್ನಸ್ ಕಾರ್ಲ್ಸನ್ ಅವರ ಈ ಸೋಲನ್ನು ಅವರ ವೃತ್ತಿಜೀವನದ ಅತಿದೊಡ್ಡ ಸೋಲುಗಳಲ್ಲಿ ಒಂದು ಖ್ಯಾತ ಚೆಸ್ ಗ್ರ್ಯಾಂಡ್ ಮಾಸ್ಟರ್ ಸುಸಾನ್ ಪೋಲ್ಗರ್ ವಿಮರ್ಶಿಸಿದ್ದಾರೆ. ಅದೇ ಸಮಯದಲ್ಲಿ, ನಾರ್ವೆ ಚೆಸ್ ಟೂರ್ನಿಯಲ್ಲಿ ಎರಡನೇ ಬಾರಿಗೆ, ಭಾರತೀಯ ಆಟಗಾರನೊಬ್ಬ ಕ್ಲಾಸಿಕ್ ಸ್ವರೂಪದಲ್ಲಿ ಕಾರ್ಲ್ಸನ್ ಅವರನ್ನು ಸೋಲಿಸಿದ್ದಾರೆ.
ಇದಕ್ಕೂ ಮುನ್ನ ಕಳೆದ ವರ್ಷ ಆರ್ ಪ್ರಜ್ಞಾನಂದ ಅವರು ಮ್ಯಾಗ್ನಸ್ ಕಾರ್ಲ್ಸನ್ ಅವರಿಗೆ ಸೋಲಿನ ರುಚಿ ತೋರಿಸಿದ್ದರು. ಇದೀಗ ಡಿ ಗುಕೇಶ್ ಕೂಡ ವಿಶ್ವದ ನಂಬರ್ 1 ಚೆಸ್ ಚತುರನ ವಿರುದ್ಧ ಸ್ಮರಣೀಯ ಗೆಲುವು ಸಾಧಿಸಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…