ಭಾರತದ ಯುವ ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್, ನಾರ್ವೆ ಚೆಸ್ ಟೂರ್ನಿಯ 6ನೇ ರೌಂಡ್ನಲ್ಲಿ ವಿಶ್ವ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್ಸನ್ ವಿರುದ್ಧ ತನ್ನ ಮೊದಲ ಕ್ಲಾಸಿಕಲ್ ಗೆಲುವು ದಾಖಲಿಸಿ ಇತಿಹಾಸ ಬರೆದಿದ್ದಾರೆ.
ಇದೇ ಮೊದಲ ಬಾರಿ ಕ್ಲಾಸಿಕಲ್ ಗೇಮ್ನಲ್ಲಿ ವಿಶ್ವ ನಂ.1 ಚೆಸ್ ಪಟು ಮ್ಯಾಗ್ನಸ್ ಕಾರ್ಲ್ಸನ್ ಅವರನ್ನು ಸೋಲಿಸುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.
ಇದರ ಬೆನ್ನಲ್ಲೇ ತಾಳ್ಮೆಕಳೆದುಕೊಂಡಂತೆ ವರ್ತಿಸಿದ ಕಾರ್ಲ್ಸನ್ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ಗೆ ಒಳಗಾಗಿದ್ದಾರೆ.
ಆ ಸೋಲಿನ ನಂತರ, ಕಾರ್ಲ್ಸನ್ ಸಾಮಾಜಿಕ ಮಾಧ್ಯಮದಲ್ಲಿ ಒಂದು ನಿಗೂಢ ಸಂದೇಶವನ್ನು ಪೋಸ್ಟ್ ಮಾಡಿ, “ನೀವು ರಾಜನ ವಿರುದ್ಧ ಆಡುವಾಗ, ನೀವು ತಪ್ಪಿಸಿಕೊಳ್ಳಬಾರದು” ಎಂದು ಕಾಲೆಳೆದಿದ್ದರು. ಈ ಸಂದೇಶವು ಮ್ಯಾಗ್ನಸ್ ಕಾರ್ಲ್ಸನ್ ಅವರ ಪ್ರಾಬಲ್ಯದ ಸಂಕೇತವಾಗಿತ್ತು. ಆದರೆ ಆರನೇ ಸುತ್ತಿನಲ್ಲಿ ಗುಕೇಶ್ ಅದಕ್ಕೆ ಸೂಕ್ತ ಉತ್ತರವನ್ನು ನೀಡಿದರು. ಬಿಳಿ ಕಾಯಿಗಳೊಂದಿಗೆ ಆಡಿದ 19 ವರ್ಷದ ಗುಕೇಶ್ ಆಟದ ಉದ್ದಕ್ಕೂ ತಾಳ್ಮೆ ಮತ್ತು ಶಿಸ್ತನ್ನು ತೋರಿಸಿದರು.
19 ವರ್ಷದ ಗುಕೇಶ್ ವಿರುದ್ಧದ ಸೋಲನ್ನು ಅರಗಿಸಿಕೊಳ್ಳಲು ಮ್ಯಾಗ್ನಸ್ ಕಾರ್ಲ್ಸನ್ ಸಾಧ್ಯವಾಗಲಿಲ್ಲ. ಅಲ್ಲದೆ ಆಘಾತಕಾರಿ ಸೋಲಿನಿಂದ ವಿಚಲಿತರಾದ ಕಾರ್ಲ್ಸನ್ ಪಂದ್ಯದ ನಂತರ ಮೇಜನ್ನು ಗುದ್ದುವ ಮೂಲಕ ತನ್ನ ಆಕ್ರೋಶವನ್ನು ಹೊರಹಾಕಿದ್ದರು.
ಇನ್ನು ಮ್ಯಾಗ್ನಸ್ ಕಾರ್ಲ್ಸನ್ ಅವರ ಈ ಸೋಲನ್ನು ಅವರ ವೃತ್ತಿಜೀವನದ ಅತಿದೊಡ್ಡ ಸೋಲುಗಳಲ್ಲಿ ಒಂದು ಖ್ಯಾತ ಚೆಸ್ ಗ್ರ್ಯಾಂಡ್ ಮಾಸ್ಟರ್ ಸುಸಾನ್ ಪೋಲ್ಗರ್ ವಿಮರ್ಶಿಸಿದ್ದಾರೆ. ಅದೇ ಸಮಯದಲ್ಲಿ, ನಾರ್ವೆ ಚೆಸ್ ಟೂರ್ನಿಯಲ್ಲಿ ಎರಡನೇ ಬಾರಿಗೆ, ಭಾರತೀಯ ಆಟಗಾರನೊಬ್ಬ ಕ್ಲಾಸಿಕ್ ಸ್ವರೂಪದಲ್ಲಿ ಕಾರ್ಲ್ಸನ್ ಅವರನ್ನು ಸೋಲಿಸಿದ್ದಾರೆ.
ಇದಕ್ಕೂ ಮುನ್ನ ಕಳೆದ ವರ್ಷ ಆರ್ ಪ್ರಜ್ಞಾನಂದ ಅವರು ಮ್ಯಾಗ್ನಸ್ ಕಾರ್ಲ್ಸನ್ ಅವರಿಗೆ ಸೋಲಿನ ರುಚಿ ತೋರಿಸಿದ್ದರು. ಇದೀಗ ಡಿ ಗುಕೇಶ್ ಕೂಡ ವಿಶ್ವದ ನಂಬರ್ 1 ಚೆಸ್ ಚತುರನ ವಿರುದ್ಧ ಸ್ಮರಣೀಯ ಗೆಲುವು ಸಾಧಿಸಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…