ಕ್ಲಾಸಿಕಲ್ ಗೇಮ್‌ನಲ್ಲಿ ವಿಶ್ವ ನಂ.1 ಚೆಸ್ ಪಟು ಮ್ಯಾಗ್ನಸ್ ಕಾರ್ಲ್‌ಸನ್ ಮಣಿಸಿದ ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್

ಭಾರತದ ಯುವ ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್, ನಾರ್ವೆ ಚೆಸ್ ಟೂರ್ನಿಯ 6ನೇ ರೌಂಡ್‌ನಲ್ಲಿ ವಿಶ್ವ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧ ತನ್ನ ಮೊದಲ ಕ್ಲಾಸಿಕಲ್ ಗೆಲುವು ದಾಖಲಿಸಿ ಇತಿಹಾಸ ಬರೆದಿದ್ದಾರೆ.

ಇದೇ ಮೊದಲ ಬಾರಿ ಕ್ಲಾಸಿಕಲ್ ಗೇಮ್‌ನಲ್ಲಿ ವಿಶ್ವ ನಂ.1 ಚೆಸ್ ಪಟು ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನು ಸೋಲಿಸುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.

ಇದರ ಬೆನ್ನಲ್ಲೇ ತಾಳ್ಮೆಕಳೆದುಕೊಂಡಂತೆ ವರ್ತಿಸಿದ ಕಾರ್ಲ್‌ಸನ್ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್‌ಗೆ ಒಳಗಾಗಿದ್ದಾರೆ.

ಆ ಸೋಲಿನ ನಂತರ, ಕಾರ್ಲ್ಸನ್ ಸಾಮಾಜಿಕ ಮಾಧ್ಯಮದಲ್ಲಿ ಒಂದು ನಿಗೂಢ ಸಂದೇಶವನ್ನು ಪೋಸ್ಟ್ ಮಾಡಿ, “ನೀವು ರಾಜನ ವಿರುದ್ಧ ಆಡುವಾಗ, ನೀವು ತಪ್ಪಿಸಿಕೊಳ್ಳಬಾರದು” ಎಂದು ಕಾಲೆಳೆದಿದ್ದರು. ಈ ಸಂದೇಶವು ಮ್ಯಾಗ್ನಸ್ ಕಾರ್ಲ್ಸನ್ ಅವರ ಪ್ರಾಬಲ್ಯದ ಸಂಕೇತವಾಗಿತ್ತು. ಆದರೆ ಆರನೇ ಸುತ್ತಿನಲ್ಲಿ ಗುಕೇಶ್ ಅದಕ್ಕೆ ಸೂಕ್ತ ಉತ್ತರವನ್ನು ನೀಡಿದರು. ಬಿಳಿ ಕಾಯಿಗಳೊಂದಿಗೆ ಆಡಿದ 19 ವರ್ಷದ ಗುಕೇಶ್ ಆಟದ ಉದ್ದಕ್ಕೂ ತಾಳ್ಮೆ ಮತ್ತು ಶಿಸ್ತನ್ನು ತೋರಿಸಿದರು.

19 ವರ್ಷದ ಗುಕೇಶ್ ವಿರುದ್ಧದ ಸೋಲನ್ನು ಅರಗಿಸಿಕೊಳ್ಳಲು ಮ್ಯಾಗ್ನಸ್ ಕಾರ್ಲ್ಸನ್ ಸಾಧ್ಯವಾಗಲಿಲ್ಲ. ಅಲ್ಲದೆ ಆಘಾತಕಾರಿ ಸೋಲಿನಿಂದ ವಿಚಲಿತರಾದ ಕಾರ್ಲ್ಸನ್ ಪಂದ್ಯದ ನಂತರ ಮೇಜನ್ನು ಗುದ್ದುವ ಮೂಲಕ ತನ್ನ ಆಕ್ರೋಶವನ್ನು ಹೊರಹಾಕಿದ್ದರು.

ಇನ್ನು ಮ್ಯಾಗ್ನಸ್ ಕಾರ್ಲ್ಸನ್ ಅವರ ಈ ಸೋಲನ್ನು ಅವರ ವೃತ್ತಿಜೀವನದ ಅತಿದೊಡ್ಡ ಸೋಲುಗಳಲ್ಲಿ ಒಂದು ಖ್ಯಾತ ಚೆಸ್ ಗ್ರ್ಯಾಂಡ್ ಮಾಸ್ಟರ್ ಸುಸಾನ್ ಪೋಲ್ಗರ್ ವಿಮರ್ಶಿಸಿದ್ದಾರೆ. ಅದೇ ಸಮಯದಲ್ಲಿ, ನಾರ್ವೆ ಚೆಸ್‌ ಟೂರ್ನಿಯಲ್ಲಿ  ಎರಡನೇ ಬಾರಿಗೆ, ಭಾರತೀಯ ಆಟಗಾರನೊಬ್ಬ ಕ್ಲಾಸಿಕ್ ಸ್ವರೂಪದಲ್ಲಿ ಕಾರ್ಲ್ಸನ್ ಅವರನ್ನು ಸೋಲಿಸಿದ್ದಾರೆ.

ಇದಕ್ಕೂ ಮುನ್ನ ಕಳೆದ ವರ್ಷ ಆರ್ ಪ್ರಜ್ಞಾನಂದ ಅವರು ಮ್ಯಾಗ್ನಸ್ ಕಾರ್ಲ್ಸನ್ ಅವರಿಗೆ ಸೋಲಿನ ರುಚಿ ತೋರಿಸಿದ್ದರು. ಇದೀಗ ಡಿ ಗುಕೇಶ್ ಕೂಡ ವಿಶ್ವದ ನಂಬರ್ 1 ಚೆಸ್ ಚತುರನ ವಿರುದ್ಧ ಸ್ಮರಣೀಯ ಗೆಲುವು ಸಾಧಿಸಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

46 minutes ago

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…

1 hour ago

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

5 hours ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

10 hours ago

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

14 hours ago

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago