ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರದ “ಕ್ವಿನ್ ಸಿಟಿ” ಯೋಜನೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಚಾಲನೆ ನೀಡಿದರು.
ಕ್ವಿನ್ ಸಿಟಿ ಒಂದೇ ಸ್ಥಳದಲ್ಲಿ ಸುಸ್ಥಿರ ಪರಿಸರದ ನಡುವೆ ಜ್ಞಾನ, ಆರೋಗ್ಯ, ನಾವಿನ್ಯತೆ ಹಾಗೂ ಸಂಶೋಧನಯನ್ನು ಒಟ್ಟುಗೊಡಿಸುವ ಹೊಸ ಪರಿಕಲ್ಪನೆವುಳ್ಳ ನಗರವಾಗಿರಲಿದೆ. ಬೆಂಗಳೂರಿನ ಹೊರವಲಯದ ಡಾಬಸ್ ಪೇಟೆ-ದೊಡ್ಡಬಳ್ಳಾಪುರ ನಡುವಿನ ಸ್ಯಾಟಲೈಟ್ ರಿಂಗ್ ರೋಡ್ ನಲ್ಲಿ ಸುಮಾರು 2000 ಎಕರೆ ಪ್ರದೇಶದಲ್ಲಿ ಕ್ವಿನ್ ಸಿಟಿ ನಿರ್ಮಾಣಗೊಳ್ಳಲಿದೆ.
ಕ್ವಿನ್ ಸಿಟಿಯು ಒಂದೇ ಸ್ಥಳದಲ್ಲಿ ಸುಸ್ಥಿರ ಪರಿಸರದ ನಡುವೆ ಜ್ಞಾನ, ಆರೋಗ್ಯ, ನಾವೀನ್ಯತೆ ಹಾಗೂ ಸಂಶೋಧನೆಯನ್ನು ಒಟ್ಟುಗೂಡಿಸುವ ಹೊಸ ಪರಿಕಲ್ಪನೆಯುಳ್ಳ ನಗರವಾಗಿರಲಿದೆ.
ಈ ನಗರ ವಿಶ್ವ ದರ್ಜೆಯ ಶಿಕ್ಷಣ ಸಂಸ್ಥೆಗಳು, ಆಧುನಿಕ ಆರೋಗ್ಯ ಸೇವಾ ಸೌಲಭ್ಯಗಳು, ಅತ್ಯಾಧುನಿಕ ಸಂಶೋಧನಾ ಕೇಂದ್ರಗಳು ಹಾಗೂ ನವೋದ್ಯಮ ಸಂಪ್ರದಾಯಗಳನ್ನು ಒಟ್ಟುಗೂಡಿಸುವ ಮತ್ತು ಸುಸ್ಥಿರ ಮೂಲಸೌಕರ್ಯ ಮತ್ತು ಅತ್ಯುತ್ತಮ ಸಂಪರ್ಕವಿರುವಂತಹ ವಿಶೇಷ ನಗರವಾಗಿರುತ್ತದೆ.
ಈ ವೇಳೆ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ, ಸಚಿವ ಸಂಪುಟದ ಸಹದ್ಯೋಗಿಗಳಾದ ಎಂ.ಬಿ.ಪಾಟೀಲ, ಪ್ರಿಯಾಂಕ ಖರ್ಗೆ, ಡಾ. ಎಂ. ಸಿ.ಸುಧಾಕರ್, ಜಮೀರ್ ಅಹಮದ್, ಚಲುವರಾಯಸ್ವಾಮಿ, ಎಸ್.ಎಸ್.ಮಲ್ಲಿಕಾರ್ಜುನ, ಮಧು ಬಂಗಾರಪ್ಪ, ಶರಣ ಪ್ರಕಾಶ ಪಾಟೀಲ, ಕೆ.ಎನ್.ರಾಜಣ್ಣ, ಮಂಕಾಳ ವೈದ್ಯ, ದಿನೇಶ್ ಗುಂಡೂರಾವ್, ಬೋಸರಾಜು, ರಹೀಂ ಖಾನ್, ಶರಣ ಬಸಪ್ಪ ದರ್ಶನಾಪೂರ್, ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ, ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…
ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…
ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…
ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ್ಯಾಂಕ್ ಪಡೆದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…