ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರದ “ಕ್ವಿನ್ ಸಿಟಿ” ಯೋಜನೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಚಾಲನೆ ನೀಡಿದರು.
ಕ್ವಿನ್ ಸಿಟಿ ಒಂದೇ ಸ್ಥಳದಲ್ಲಿ ಸುಸ್ಥಿರ ಪರಿಸರದ ನಡುವೆ ಜ್ಞಾನ, ಆರೋಗ್ಯ, ನಾವಿನ್ಯತೆ ಹಾಗೂ ಸಂಶೋಧನಯನ್ನು ಒಟ್ಟುಗೊಡಿಸುವ ಹೊಸ ಪರಿಕಲ್ಪನೆವುಳ್ಳ ನಗರವಾಗಿರಲಿದೆ. ಬೆಂಗಳೂರಿನ ಹೊರವಲಯದ ಡಾಬಸ್ ಪೇಟೆ-ದೊಡ್ಡಬಳ್ಳಾಪುರ ನಡುವಿನ ಸ್ಯಾಟಲೈಟ್ ರಿಂಗ್ ರೋಡ್ ನಲ್ಲಿ ಸುಮಾರು 2000 ಎಕರೆ ಪ್ರದೇಶದಲ್ಲಿ ಕ್ವಿನ್ ಸಿಟಿ ನಿರ್ಮಾಣಗೊಳ್ಳಲಿದೆ.
ಕ್ವಿನ್ ಸಿಟಿಯು ಒಂದೇ ಸ್ಥಳದಲ್ಲಿ ಸುಸ್ಥಿರ ಪರಿಸರದ ನಡುವೆ ಜ್ಞಾನ, ಆರೋಗ್ಯ, ನಾವೀನ್ಯತೆ ಹಾಗೂ ಸಂಶೋಧನೆಯನ್ನು ಒಟ್ಟುಗೂಡಿಸುವ ಹೊಸ ಪರಿಕಲ್ಪನೆಯುಳ್ಳ ನಗರವಾಗಿರಲಿದೆ.
ಈ ನಗರ ವಿಶ್ವ ದರ್ಜೆಯ ಶಿಕ್ಷಣ ಸಂಸ್ಥೆಗಳು, ಆಧುನಿಕ ಆರೋಗ್ಯ ಸೇವಾ ಸೌಲಭ್ಯಗಳು, ಅತ್ಯಾಧುನಿಕ ಸಂಶೋಧನಾ ಕೇಂದ್ರಗಳು ಹಾಗೂ ನವೋದ್ಯಮ ಸಂಪ್ರದಾಯಗಳನ್ನು ಒಟ್ಟುಗೂಡಿಸುವ ಮತ್ತು ಸುಸ್ಥಿರ ಮೂಲಸೌಕರ್ಯ ಮತ್ತು ಅತ್ಯುತ್ತಮ ಸಂಪರ್ಕವಿರುವಂತಹ ವಿಶೇಷ ನಗರವಾಗಿರುತ್ತದೆ.
ಈ ವೇಳೆ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ, ಸಚಿವ ಸಂಪುಟದ ಸಹದ್ಯೋಗಿಗಳಾದ ಎಂ.ಬಿ.ಪಾಟೀಲ, ಪ್ರಿಯಾಂಕ ಖರ್ಗೆ, ಡಾ. ಎಂ. ಸಿ.ಸುಧಾಕರ್, ಜಮೀರ್ ಅಹಮದ್, ಚಲುವರಾಯಸ್ವಾಮಿ, ಎಸ್.ಎಸ್.ಮಲ್ಲಿಕಾರ್ಜುನ, ಮಧು ಬಂಗಾರಪ್ಪ, ಶರಣ ಪ್ರಕಾಶ ಪಾಟೀಲ, ಕೆ.ಎನ್.ರಾಜಣ್ಣ, ಮಂಕಾಳ ವೈದ್ಯ, ದಿನೇಶ್ ಗುಂಡೂರಾವ್, ಬೋಸರಾಜು, ರಹೀಂ ಖಾನ್, ಶರಣ ಬಸಪ್ಪ ದರ್ಶನಾಪೂರ್, ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ, ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…