ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರದ “ಕ್ವಿನ್ ಸಿಟಿ” ಯೋಜನೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಚಾಲನೆ ನೀಡಿದರು.
ಕ್ವಿನ್ ಸಿಟಿ ಒಂದೇ ಸ್ಥಳದಲ್ಲಿ ಸುಸ್ಥಿರ ಪರಿಸರದ ನಡುವೆ ಜ್ಞಾನ, ಆರೋಗ್ಯ, ನಾವಿನ್ಯತೆ ಹಾಗೂ ಸಂಶೋಧನಯನ್ನು ಒಟ್ಟುಗೊಡಿಸುವ ಹೊಸ ಪರಿಕಲ್ಪನೆವುಳ್ಳ ನಗರವಾಗಿರಲಿದೆ. ಬೆಂಗಳೂರಿನ ಹೊರವಲಯದ ಡಾಬಸ್ ಪೇಟೆ-ದೊಡ್ಡಬಳ್ಳಾಪುರ ನಡುವಿನ ಸ್ಯಾಟಲೈಟ್ ರಿಂಗ್ ರೋಡ್ ನಲ್ಲಿ ಸುಮಾರು 2000 ಎಕರೆ ಪ್ರದೇಶದಲ್ಲಿ ಕ್ವಿನ್ ಸಿಟಿ ನಿರ್ಮಾಣಗೊಳ್ಳಲಿದೆ.
ಕ್ವಿನ್ ಸಿಟಿಯು ಒಂದೇ ಸ್ಥಳದಲ್ಲಿ ಸುಸ್ಥಿರ ಪರಿಸರದ ನಡುವೆ ಜ್ಞಾನ, ಆರೋಗ್ಯ, ನಾವೀನ್ಯತೆ ಹಾಗೂ ಸಂಶೋಧನೆಯನ್ನು ಒಟ್ಟುಗೂಡಿಸುವ ಹೊಸ ಪರಿಕಲ್ಪನೆಯುಳ್ಳ ನಗರವಾಗಿರಲಿದೆ.
ಈ ನಗರ ವಿಶ್ವ ದರ್ಜೆಯ ಶಿಕ್ಷಣ ಸಂಸ್ಥೆಗಳು, ಆಧುನಿಕ ಆರೋಗ್ಯ ಸೇವಾ ಸೌಲಭ್ಯಗಳು, ಅತ್ಯಾಧುನಿಕ ಸಂಶೋಧನಾ ಕೇಂದ್ರಗಳು ಹಾಗೂ ನವೋದ್ಯಮ ಸಂಪ್ರದಾಯಗಳನ್ನು ಒಟ್ಟುಗೂಡಿಸುವ ಮತ್ತು ಸುಸ್ಥಿರ ಮೂಲಸೌಕರ್ಯ ಮತ್ತು ಅತ್ಯುತ್ತಮ ಸಂಪರ್ಕವಿರುವಂತಹ ವಿಶೇಷ ನಗರವಾಗಿರುತ್ತದೆ.
ಈ ವೇಳೆ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ, ಸಚಿವ ಸಂಪುಟದ ಸಹದ್ಯೋಗಿಗಳಾದ ಎಂ.ಬಿ.ಪಾಟೀಲ, ಪ್ರಿಯಾಂಕ ಖರ್ಗೆ, ಡಾ. ಎಂ. ಸಿ.ಸುಧಾಕರ್, ಜಮೀರ್ ಅಹಮದ್, ಚಲುವರಾಯಸ್ವಾಮಿ, ಎಸ್.ಎಸ್.ಮಲ್ಲಿಕಾರ್ಜುನ, ಮಧು ಬಂಗಾರಪ್ಪ, ಶರಣ ಪ್ರಕಾಶ ಪಾಟೀಲ, ಕೆ.ಎನ್.ರಾಜಣ್ಣ, ಮಂಕಾಳ ವೈದ್ಯ, ದಿನೇಶ್ ಗುಂಡೂರಾವ್, ಬೋಸರಾಜು, ರಹೀಂ ಖಾನ್, ಶರಣ ಬಸಪ್ಪ ದರ್ಶನಾಪೂರ್, ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ, ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…