“ಕ್ವಿನ್ ಸಿಟಿ” ಹೊಸ ನಗರ, ಹೊಸ ಭರವಸೆ..”ಕ್ವಿನ್ ಸಿಟಿ” ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರದ “ಕ್ವಿನ್ ಸಿಟಿ” ಯೋಜನೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಚಾಲನೆ ನೀಡಿದರು.

ಕ್ವಿನ್ ಸಿಟಿ ಒಂದೇ ಸ್ಥಳದಲ್ಲಿ ಸುಸ್ಥಿರ ಪರಿಸರದ ನಡುವೆ ಜ್ಞಾನ, ಆರೋಗ್ಯ, ನಾವಿನ್ಯತೆ ಹಾಗೂ ಸಂಶೋಧನಯನ್ನು ಒಟ್ಟುಗೊಡಿಸುವ ಹೊಸ ಪರಿಕಲ್ಪನೆವುಳ್ಳ ನಗರವಾಗಿರಲಿದೆ. ಬೆಂಗಳೂರಿನ ಹೊರವಲಯದ ಡಾಬಸ್ ಪೇಟೆ-ದೊಡ್ಡಬಳ್ಳಾಪುರ ನಡುವಿನ ಸ್ಯಾಟಲೈಟ್ ರಿಂಗ್ ರೋಡ್ ನಲ್ಲಿ ಸುಮಾರು 2000 ಎಕರೆ ಪ್ರದೇಶದಲ್ಲಿ ಕ್ವಿನ್ ಸಿಟಿ ನಿರ್ಮಾಣಗೊಳ್ಳಲಿದೆ.

ಕ್ವಿನ್‌ ಸಿಟಿಯು ಒಂದೇ ಸ್ಥಳದಲ್ಲಿ ಸುಸ್ಥಿರ ಪರಿಸರದ ನಡುವೆ ಜ್ಞಾನ, ಆರೋಗ್ಯ, ನಾವೀನ್ಯತೆ ಹಾಗೂ ಸಂಶೋಧನೆಯನ್ನು ಒಟ್ಟುಗೂಡಿಸುವ ಹೊಸ ಪರಿಕಲ್ಪನೆಯುಳ್ಳ ನಗರವಾಗಿರಲಿದೆ.

ಈ ನಗರ ವಿಶ್ವ ದರ್ಜೆಯ ಶಿಕ್ಷಣ ಸಂಸ್ಥೆಗಳು, ಆಧುನಿಕ ಆರೋಗ್ಯ ಸೇವಾ ಸೌಲಭ್ಯಗಳು, ಅತ್ಯಾಧುನಿಕ ಸಂಶೋಧನಾ ಕೇಂದ್ರಗಳು ಹಾಗೂ ನವೋದ್ಯಮ ಸಂಪ್ರದಾಯಗಳನ್ನು ಒಟ್ಟುಗೂಡಿಸುವ ಮತ್ತು ಸುಸ್ಥಿರ ಮೂಲಸೌಕರ್ಯ ಮತ್ತು ಅತ್ಯುತ್ತಮ ಸಂಪರ್ಕವಿರುವಂತಹ ವಿಶೇಷ ನಗರವಾಗಿರುತ್ತದೆ.

ಈ ವೇಳೆ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ, ಸಚಿವ ಸಂಪುಟದ ಸಹದ್ಯೋಗಿಗಳಾದ ಎಂ.ಬಿ.ಪಾಟೀಲ, ಪ್ರಿಯಾಂಕ ಖರ್ಗೆ, ಡಾ. ಎಂ. ಸಿ.ಸುಧಾಕರ್, ಜಮೀರ್ ಅಹಮದ್, ಚಲುವರಾಯಸ್ವಾಮಿ, ಎಸ್.ಎಸ್.ಮಲ್ಲಿಕಾರ್ಜುನ, ಮಧು ಬಂಗಾರಪ್ಪ, ಶರಣ ಪ್ರಕಾಶ ಪಾಟೀಲ, ಕೆ‌.ಎನ್.ರಾಜಣ್ಣ, ಮಂಕಾಳ ವೈದ್ಯ‌‌‌‌, ದಿನೇಶ್ ಗುಂಡೂರಾವ್, ಬೋಸರಾಜು, ರಹೀಂ ಖಾನ್, ಶರಣ ಬಸಪ್ಪ ದರ್ಶನಾಪೂರ್, ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ, ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು. ‌

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

3 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

10 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

23 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago