ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ ಅಂಗವಾಗಿ ಜಾಗೃತಿ ಜಾಥಾ ಹಾಗೂ ಬೀದಿ ನಾಟಕ ಕಾರ್ಯಕ್ರಮ ನಡೆಯಿತು.

ನ್ಯೂ ಹಾರಿಜನ್ ಕಾಲೇಜು ಹಾಗೂ 6ನೇ ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ವಿದ್ಯಾರ್ಥಿಗಳ ಸಹಯೋಗದಲ್ಲಿ ದೇವನಹಳ್ಳಿ ತಾಲ್ಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ, ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪಂಚಾಯಿತಿ ಹಾಗೂ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕ್ಷಯರೋಗದ ಕುರಿತು ಜಾಗೃತಿ ಮೂಡಿಸಲಾಯಿತು.

ಅಭಿಯಾನದ ವೇಳೆ ಎನ್‌ಸಿಸಿ ವಿದ್ಯಾರ್ಥಿಗಳು ಮನೆ ಮನೆಗೆ ಭೇಟಿ ನೀಡಿ ಕ್ಷಯರೋಗದ ಲಕ್ಷಣಗಳು ಕಂಡುಬರುವ ವ್ಯಕ್ತಿಗಳನ್ನು ಗುರುತಿಸಿ, ತಪಾಸಣೆಗೆ ಒಳಪಡಿಸುವ ಕಾರ್ಯ ನಡೆಸಿದರು.

ಸಾರ್ವಜನಿಕರಲ್ಲಿ ಕ್ಷಯರೋಗದ ಲಕ್ಷಣಗಳು, ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯುವ ಕುರಿತು ಜಾಗೃತಿ ಮೂಡಿಸಲಾಯಿತು.

ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿದ ಎಲ್ಲಾ ಎನ್‌ಸಿಸಿ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಪೌರಕಾರ್ಮಿಕರು ಸೇರಿದಂತೆ ಸುಮಾರು 100 ಮಂದಿಗೆ ಎಕ್ಸ್‌ರೇ ಮಾಡಿಸುವ ಮೂಲಕ ಕ್ಷಯರೋಗ ತಪಾಸಣೆ ನಡೆಸಲಾಯಿತು.

ಕ್ಷಯರೋಗವನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯುವ ಮೂಲಕ ರೋಗ ಹರಡುವುದನ್ನು ತಡೆಗಟ್ಟಬಹುದು. ಸಾರ್ವಜನಿಕರು ಕ್ಷಯರೋಗದ ಲಕ್ಷಣಗಳು ಕಂಡುಬಂದಲ್ಲಿ ನಿರ್ಲಕ್ಷ್ಯ ವಹಿಸದೆ ಆರೋಗ್ಯ ಕೇಂದ್ರಗಳಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.

ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರೇಮ್ ಕುಮಾರ್ ಸೇರಿದಂತೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶಾರದಾ, ವೈದ್ಯಾಧಿಕಾರಿಗಳಾದ ಡಾ. ಮಂಜುವಾಣಿ, ಡಾ. ಪವನ್ ಕುಮಾರ್, ಎನ್‌ಸಿಸಿ ವಿಭಾಗದ ಬಿಎಚ್‌ಎಂ ಹರಭಜನ್ ಸಿಂಗ್, ಎನ್‌ಸಿಸಿ ಅಧಿಕಾರಿ ನಂದಿನಿ ಟಿ, ರೂಪ, ಕಿರಣ್, ಆನಂದ ಎಚ್.ಎಂ., ಪ್ರಭಾಕರ್ ಗೌಡ, ರೇಣುಕಪ್ಪ, ಯುವರಾಜ್ ಆಡಿನ್ ಸೇರಿದಂತೆ ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

25 minutes ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

6 hours ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

3 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago