Categories: Home

ಕ್ಷಯ ರೋಗಿಗಳಿಗೆ ಔಷಧಿ ಜತೆಗೆ ಸಾಮಾಜಿಕ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ಕ್ಷಯ ರೋಗಿಗಳಿಗೆ ಹಾಗೂ ಹೆಚ್.ಐ.ವಿ ಬಾದಿತರಿಗೆ ಅವಶ್ಯಕ ಔಷಧಿಗಳನ್ನು ಪೂರೈಸುವ ಜೊತೆಗೆ ತಪ್ಪದೇ ಸಾಮಾಜಿಕ ಸವಲತ್ತುಗಳ ಒದಗಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಛೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿರುವ ಕ್ಷಯ ರೋಗ ಹಾಗೂ ಹೆಚ್.ಐ.ವಿ. ಸೋಂಕಿತ / ಬಾದಿತರ ಸಂಖ್ಯೆಗೆ ಅನುಗುಣವಾಗಿ ಅವರಿಗೆ ಅವಶ್ಯಕವಾಗಿ ಬೇಕಾಗಿರುವ ಸಾಮಾಜಿಕ ಸವಲತ್ತುಗಳು ಮತ್ತು ಬೇಡಿಕೆಗಳ ಪಟ್ಟಿಯನ್ನು ಸಿದ್ದಪಡಿಸಿ ಸಂಬಂದಪಟ್ಟ ಇಲಾಖೆಗಳಿಗೆ ಸಲ್ಲಿಸಿ. ಬಾದಿತರಿಗೆ ಸರ್ಕಾರದಿಂದ ಸಿಗುವ ಅಗತ್ಯ ಸಾಮಾಜಿಕ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಸಮಾಜದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಬಾದಿತರಿಗೆ ಸಹಕಾರಿಯಾಗುತ್ತದೆ ಎಂದರು.

ಪ್ರಸ್ತುತ ಜಿಲ್ಲೆಯಲ್ಲಿ 485 ಕ್ಷಯರೋಗಿಗಳು ಉಚಿತವಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಕ್ಷಯ ರೋಗಿಗಳಿಗೆ ಚಿಕಿತ್ಸೆ ಜತೆಗೆ ಆರೋಗ್ಯದ ಹಿತದೃಷ್ಟಿಯಿಂದ ಪೌಷ್ಠಿಕ ಆಹಾರದ ಅವಶ್ಯಕತೆ ಇದ್ದು, ಪೌಷ್ಠಿಕ ಆಹಾರ ವಿತರಿಸಲು ಸ್ವಯಂ ಪ್ರೇರಿತವಾಗಿ ಕೈಗಾರಿಕೆಗಳ ಮುಖ್ಯಸ್ಥರು, ಸಂಘ-ಸಂಸ್ಥೆಗಳ ದಾನಿಗಳು ಮುಂದೆ ಬರಬೇಕಿದೆ ಎಂದರು.

ಜಿಲ್ಲೆಯಾದ್ಯಂತ ಕ್ಷಯ ಮುಕ್ತ ಭಾರತ ಅಭಿಯಾನದ ಅಡಿಯಲ್ಲಿ 100 ದಿನಗಳ ವಿಶೇಷ ಆಂದೋಲನವನ್ನು ಹಮ್ಮಿಕೊಂಡಿದ್ದು ನಿರ್ದಿಷ್ಟ ಪ್ರದೇಶಗಳ ಜನರನ್ನು ತಪಾಸಣೆಗೆ ಒಳಪಡಿಸಿ, ಕ್ಷೇತ್ರ ಕ್ಷಯರೋಗ ಪತ್ತೆಹಚ್ಚಲು ಕ್ರಮ ವಹಿಸಲಾಗುತ್ತಿದೆ. 40 ಗ್ರಾಮ ಪಂಚಾಯಿತಿಗಳನ್ನು ಕ್ಷಯರೋಗ ಮುಕ್ತ ಮಾಡಲು ಈಗಾಗಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದು 30ಕ್ಕೂ ಅಧಿಕ ಗ್ರಾಮ ಪಂಚಾಯಿತಿಗಳು ಕ್ಷಯ ಮುಕ್ತ ಗ್ರಾಮ ಪಂಚಾಯಿತಿಯಾಗಿ ಆಯ್ಕೆಯಾಗುವ ನಿರೀಕ್ಷೆಯಿದೆ ಎಂದರು.

ಇದೇ ಸಂದರ್ಭದಲ್ಲಿ ನಡೆದ ನಮ್ಮ ಕ್ಲಿನಿಕ್ ಗಳ ಕುಂದು ಕೊರತೆ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯಲ್ಲಿ 10 ನಮ್ಮ ಕ್ಲಿನಿಕ್ ಗಳು ಕಾರ್ಯನಿರ್ವಹಿಸುತ್ತಿದ್ದು. ಸಣ್ಣ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರೋಗ್ಯ ಕಾಪಾಡಲು ಸಹಾಯವಾಗುತ್ತಿವೆ. ಸಾರ್ವಜನಿಕರು ನಮ್ಮ ಕ್ಲಿನಿಕ್ ನಲ್ಲಿ ದೊರೆಯುವ ಆರೋಗ್ಯ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುನೀಲ್ ಕುಮಾರ್ ಎಂ.ಸಿ, ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ನಾಗೇಶ್, ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿಗಳು, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Ramesh Babu

Journalist

Share
Published by
Ramesh Babu

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

6 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

21 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago