ಕ್ಷಯ ರೋಗ ಬಗ್ಗೆ ಜಾಗೃತಿ ಮೂಡಿಸಲು ಕ್ಷಯ ಗೆದ್ದ ಚಾಂಪಿಯನ್ ಗಳಿಗೆ ತರಬೇತಿ‌

ಕ್ಷಯ ರೋಗ ಬಗ್ಗೆ ಜಾಗೃತಿ ಮೂಡಿಸುವ ತರಬೇತಿ ಪಡೆದ ಟಿಬಿ ಚಾಂಪಿಯನ್ ಗಳು ಮುಂದಿನ ದಿನಗಳಲ್ಲಿ ಟಿಬಿ ಕಾಯಿಲೆಗೆ ತುತ್ತಾಗಿ ಬರುವ ಹೊಸ ಟಿಬಿ ರೋಗಿಗಳಿಗೆ ಮನೋಸ್ಥೈರ್ಯ ನೀಡಿ ಚಿಕಿತ್ಸೆ ಪೂರ್ಣವಾಗಿ ಪಡೆದು ಬೇಗ ಗುಣಮುಖರಾಗುವಂತೆ ಮಾನವೊಲಿಸುವ ಮೂಲಕ ಕ್ಷಯ ಮುಕ್ತ ಭಾರತದ ನಿರ್ಮಾಣಕ್ಕೆ ಸಹಾಯಕವಾಗಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲೆಕ್ಕ ಕೃಷ್ಣಾರೆಡ್ಡಿ ಹೇಳಿದರು.

ಕ್ಷಯ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕ್ಷಯರೋಗದ ವಿರುದ್ಧ ಹೋರಾಡಿ ಗೆದ್ದು ಬಂದ ಟಿಬಿ ಚಾಂಪಿಯನ್ ಗಳಿಗೆ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಒಂದು ಕಾಲದಲ್ಲಿ ಜನರನ್ನು ಭಯಭೀತರನ್ನಾಗಿಸಿದ್ದ ಕಾಯಿಲೆಗಳಲ್ಲಿ ಕ್ಷಯ ರೋಗ ಅಥವಾ ಟಿಬಿ ಕೂಡ ಒಂದು. ಒಬ್ಬರಿಂದ ಇನ್ನೊಬ್ಬರಿಗೆ ಸಾಂಕ್ರಾಮಿಕವಾಗಿ ಹರಡುವ ಈ ಕ್ಷಯರೋಗಕ್ಕೆ ಸರಿಯಾದ ಚಿಕಿತ್ಸೆ ಪಡೆದುಕೊಳ್ಳದೇ ಹೋದರೆ ಜೀವಕ್ಕೆ ಕಂಟಕ ಎದುರಾಗಬಹುದು ಎಂದರು.

ಈಗಾಗಲೇ ತಾಲೂಕಿನ ವ್ಯಾಪ್ತಿಯಲ್ಲಿ ಚಿಕಿತ್ಸೆಯನ್ನು ಪಡೆದು ಟಿಬಿಯಿಂದ ಗುಣಮುಖರಾಗಿರುವ ವ್ಯಕ್ತಿಗಳು ಟಿಬಿ ಚಾಂಪಿಯನ್ ಗಳಾಗಿದ್ದು, ಇವರುಗಳಲ್ಲಿ ಕೆಲ ಚಾಂಪಿಯನ್ ಗಳನ್ನು ಆಯ್ಕೆ ಮಾಡಿ ಕ್ಷಯ ರೋಗಿಗಳಿಗೆ ಜಾಗೃತಿ ಮೂಡಿಸಲು ಸಲುವಾಗಿ ಇಂದು ತರಬೇತಿ ಹಮ್ಮಿಕೊಳ್ಳಲಾಗಿದೆ. ತಿಳಿವಳಿಕೆಯ ಕೊರತೆಯಿಂದ ಬಹಳಷ್ಟು ಜನ ತಮ್ಮಲ್ಲಿರುವ ಕ್ಷಯದ ಬಗ್ಗೆ ಚಿಂತಿಸುತ್ತಿಲ್ಲ. ಇಂತಹವರು ಕಾಯಿಲೆಯನ್ನು ಉಲ್ಬಣ ಮಾಡಿಕೊಳ್ಳುವುದಲ್ಲದೆ, ತಮ್ಮ ರೋಗಾಣುಗಳನ್ನು ಉಸಿರು, ಕೆಮ್ಮು, ಕಫದ ಮೂಲಕ ಹೊರಚೆಲ್ಲಿ ಸಾವಿರಾರು ಜನರಿಗೆ ರೋಗವನ್ನು ಅಂಟಿಸುವ ವಾಹಕಗಳಾಗುತ್ತಿದ್ದಾರೆ. ಇನ್ನು ಕೆಲವು ಮಂದಿ ಕ್ಷಯ ರೋಗಕ್ಕೆ ಅಂಟಿರುವ ಕಳಂಕಕ್ಕೆ ಹೆದರಿ ಕಾಯಿಲೆಯನ್ನು ಹಾಗೇ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದಾರೆ. ಇಂತಹ ನಡವಳಿಕೆಯ ಜನರಿಂದಲೇ ಇತರರಿಗೆ ಹರಡುವ ಕ್ಷಯದ ಪ್ರಮಾಣ ಅತ್ಯಂತ ಘೋರವಾಗಿದೆ. ಆದ್ದರಿಂದ ಕ್ಷಯ ಗೆದ್ದ ಚಾಂಪಿಯನ್ ಗಳಿಂದಲೇ ಕ್ಷಯ ರೋಗಿಗಳಿಗೆ ಜಾಗೃತಿ ಮೂಡಿಸಿ ಬೇಗ ಗುಣಮುಖರನ್ನಾಗಿಸಿ ಕ್ಷಯಮುಕ್ತ ತಾಲೂಕನ್ನಾಗಿಸಲು ಪ್ರಯತ್ನ ನಡೆಸಲಾಗುತ್ತಿದೆ ಎಂದರು.

ಕ್ಷಯದ ಲಕ್ಷಣಗಳು ಕಂಡುಬಂದವರು ಅಲಕ್ಷಿಸದೆ ತಕ್ಷಣವೇ ಪರೀಕ್ಷೆಗೆ ಒಳಗಾಗಬೇಕು. ಕೇಂದ್ರ ಸರ್ಕಾರದ ಪರಿಷ್ಕೃತ ರಾಷ್ಟ್ರೀಯ ಕ್ಷಯ ನಿಯಂತ್ರಣ ಕಾರ್ಯಕ್ರಮದಡಿ ಪರೀಕ್ಷೆ ಮತ್ತು ಚಿಕಿತ್ಸಾ ಸೌಲಭ್ಯವನ್ನು ಪ್ರತಿ ಸರ್ಕಾರಿ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರದಲ್ಲಿ ಉಚಿತವಾಗಿ ನೀಡಲಾಗುತ್ತದೆ. ಇಲ್ಲಿ ಕಫ ಪರೀಕ್ಷೆಯ ಮೂಲಕ ಕಾಯಿಲೆಯನ್ನು ಪತ್ತೆ ಮಾಡಿ ಔಷಧಿ ಕೊಡಲಾಗುತ್ತದೆ ಎಂದು ಹೇಳಿದರು.

ಕ್ಷಯ ರೋಗದ ನಿವಾರಣೆ ದೇಶಕ್ಕೆ ಅತಿ ಮುಖ್ಯ. ಹೀಗಾಗಿ ಸರ್ಕಾರ ಅತ್ಯಂತ ದಕ್ಷತೆಯಿಂದ ಕ್ಷಯ ನಿಯಂತ್ರಣ ಕಾರ್ಯಕ್ರಮವನ್ನು ಕೈಗೆತ್ತಿಕೊಂಡಿದ್ದು, ಕಾಯಿಲೆಯನ್ನು ಸಂಪೂರ್ಣವಾಗಿ ನಿವಾರಿಸುವುದೇ ಮುಖ್ಯ ಗುರಿ ಎಂದರು.

ಭಾಗವಹಿಸಿದ್ದರು.ಜಿಲ್ಲಾ ಕ್ಷಯ ರೋಗ ನಿರ್ಮೂಲನ ಅಧಿಕಾರಿ ಡಾ ನಾಗೇಶ್ ಮಾತನಾಡಿ, ಚಿಕಿತ್ಸೆ ಪ್ರಾರಂಭಿಸಿದ ನಂತರ ರೋಗಿಯು ಅರ್ಧದಲ್ಲಿ ಚಿಕಿತ್ಸೆ ಬಿಟ್ಟರೆ, ಆತನಿಗೆ ತನ್ನ ಚಿಕಿತ್ಸೆಯ ಅನುಭವಗಳು ಮತ್ತು ಉದಾಹರಣೆಗಳನ್ನು ನೀಡುವುದರ ಮೂಲಕ ಚಿಕಿತ್ಸೆಯನ್ನು ಮುಂದುವರಿಸಲು ಆಪ್ತ ಸಮಾಲೋಚನೆ ಮಾಡುವುದು, ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಲ್ಲಿ, ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಹಾಜರಾಗಿ ಟಿಬಿ ಬಗ್ಗೆ ಜಾಗೃತಿ ಮೂಡಿಸುವುದು, ಟಿಬಿ ಬಗ್ಗೆ ಇರುವಂತಹ ಕಳಂಕ, ತಾರತಮ್ಯವನ್ನು ಹೋಗಲಾಡಿಸಿ ಕ್ಷಯ ಮುಕ್ತ ಭಾರತವನ್ನು ಮಾಡಲು ಕೈಜೋಡಿಸುವುದು, ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಮಾಡುವಂತೆ ಮನವರಿಕೆ ಮಾಡುವುದು. ರೋಗಿಯನ್ನು ಪ್ರೀತಿ ವಿಶ್ವಾಸದಿಂದ ನೋಡಿಕೊಳ್ಳುವಂತೆ ಪೋಷಕರಿಗೆ ಮನವೊಲಿಸುವುದು, ತಮ್ಮ ವ್ಯಾಪ್ತಿಯಲ್ಲಿ ಬರುವ ಕ್ಷಯ ರೋಗಿಗಳನ್ನು ದತ್ತು ಪಡೆದು ಫುಡ್ ಕಿಟ್ ವಿತರಣೆ ಮಾಡಲು ಸಾರ್ವಜನಿಕರಲ್ಲಿ ಮನವರಿಕೆ ಮಾಡುವುದು ಕ್ಷಯ‌ ಚಾಂಪಿಯನ್ ಗಳ ಪ್ರಮುಖ ಕರ್ತವ್ಯ ಹಾಗೂ ಉದ್ದೇಶವಾಗಿರುತ್ತದೆ ಎಂದು ತಿಳಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯ ಆಡಳಿತಾಧಿಕಾರಿ ಡಾ.ಶಾರದಾ ಸೇರಿದಂತೆ ಜಿಲ್ಲಾ ಕ್ಷಯ ರೋಗ ನಿರಂತರ ಅಧಿಕಾರಿಗಳು, ಕಚೇರಿಯ ಸಿಬ್ಬಂದಿ ಸೇರಿದಂತೆ ಇತರರು ಭಾಗವಹಿಸಿದ್ದರು.‌

Ramesh Babu

Journalist

Recent Posts

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

11 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

11 hours ago

ಹೊರಗುತ್ತಿಗೆ ನೇಮಕಾತಿಯಲ್ಲೂ ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಕಡ್ಡಾಯ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…

11 hours ago

ಆತ್ರೇಯ ಆಯುರ್ವೇದ ಕಾಲೇಜಿಗೆ ಬೀಗ; 400 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ: ಪರ್ಯಾಯ ವ್ಯವಸ್ಥೆಗೆ ಆಗ್ರಹಿಸಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

  ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…

11 hours ago

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶ ಅಸಂಬದ್ಧ: ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ಸರ್ಕಾರದ ಚಿಂತನೆ – ಸಚಿವ ಚಲುವರಾಯಸ್ವಾಮಿ

ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ CWRC ನೀಡಿರುವ ಆದೇಶ ಅಸಂಬದ್ಧವಾಗಿದ್ದು, ಅತ್ಯಂತ ನೋವು ಹಾಗೂ…

17 hours ago

ಮೋರಿ ಬಳಿ ತ್ಯಾಜ್ಯ ರಾಶಿ; ದುರ್ವಾಸನೆ, ಸೊಳ್ಳೆ ಕಾಟಕ್ಕೆ ವಿನಾಯಕನಗರ ನಿವಾಸಿಗಳ ಪರದಾಟ

ದೊಡ್ಡಬಳ್ಳಾಪುರ: ನಗರದ ವಿನಾಯಕನಗರದ ಸರ್ಕಾರಿ ಪ್ರಾಥಮಿಕ ಶಾಲೆ ಸಮೀಪದಲ್ಲಿರುವ ರಾಜಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಮೋರಿ ಬಳಿ ತ್ಯಾಜ್ಯ ರಾಶಿ ಬಿದ್ದಿದ್ದು,…

19 hours ago