Categories: ಕೊಡಗು

ಕ್ಷುಲಕ ಕಾರಣಕ್ಕಾಗಿ ಗಂಡ-ಹೆಂಡತಿ‌‌ ನಡುವೆ ಜಗಳ: ಪತ್ನಿಯಿಂದಲೇ ಪತಿಯ ಕೊಲೆ?: ಪತ್ನಿ ಶ್ರೀಜಳನ್ನು ಬಂಧಿಸಿದ ಪೊಲೀಸರು: ಮುಂದುವರಿದ ವಿಚಾರಣೆ

ಪತ್ನಿಯಿಂದಲೇ ಪತಿ ಸಾವನಪ್ಪಿದ ಘಟನೆ ಇಂದು ಬೆಳಿಗ್ಗೆ 7:30 ಗಂಟೆಗೆ ಕೊಡಗಿನ ಮೂರ್ನಾಡು ಗಾಂಧಿನಗರದಲ್ಲಿ ನಡೆದಿದೆ.

ಗಾಂಧಿನಗರದ ಮನೆಯೊಂದರಲ್ಲಿ ಬಾಡಿಗೆಗೆ ವಾಸವಾಗಿದ್ದ ಧರ್ಮ(26) ಎಂಬತನನ್ನು ಪತ್ನಿ ಶ್ರೀಜಾ (24) ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ ಎನ್ನಲಾಗಿದೆ.

ಕಳೆದ 10 ತಿಂಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ಧರ್ಮ ಇಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಸಂದರ್ಭ ಪತ್ನಿ ಶ್ರೀಜಾ ಕೈಲಿದ್ದ ಚಾಕುವಿನಿಂದ ಆತನನ್ನು ತಿವಿದ ಪರಿಣಾಮ ಧರ್ಮ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಧರ್ಮ ಕುಶಾಲನಗರದ ಮೂಲನವನಾಗಿದ್ದು, ಶ್ರೀಜ ಬೈರಂಬಾಡದ ನಿವಾಸಿಯಾಗಿದ್ದಾಳೆ. ಇಬ್ಬರು ಪ್ರೀತಿಸಿ ವಿವಾಹದ ನಂತರ ಮೂರ್ನಾಡಿನ ಗಾಂಧಿನಗರದಲ್ಲಿ ವಾಸವಾಗಿದ್ದರು ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ಸುಂದರ್ ರಾಜ್, ಡಿವೈಎಸ್ಪಿ ಮಹೇಶ್ ಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಉಮೇಶ್ ಉಪ್ಪಳಗಿ, ಮೂರ್ನಾಡು ಪೊಲೀಸ್ ಠಾಣೆಯ ಎ.ಎಸ್. ಐ ಶ್ರೀನಿವಾಸ್ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸದ್ಯ ಪೊಲೀಸರು ಶ್ರೀಜಾಲನ್ನು ಬಂಧಿಸಿ, ವಿಚಾರಣೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

18 minutes ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

2 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

10 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

10 hours ago

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

13 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

23 hours ago