ಪತ್ನಿಯಿಂದಲೇ ಪತಿ ಸಾವನಪ್ಪಿದ ಘಟನೆ ಇಂದು ಬೆಳಿಗ್ಗೆ 7:30 ಗಂಟೆಗೆ ಕೊಡಗಿನ ಮೂರ್ನಾಡು ಗಾಂಧಿನಗರದಲ್ಲಿ ನಡೆದಿದೆ.
ಗಾಂಧಿನಗರದ ಮನೆಯೊಂದರಲ್ಲಿ ಬಾಡಿಗೆಗೆ ವಾಸವಾಗಿದ್ದ ಧರ್ಮ(26) ಎಂಬತನನ್ನು ಪತ್ನಿ ಶ್ರೀಜಾ (24) ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ ಎನ್ನಲಾಗಿದೆ.
ಕಳೆದ 10 ತಿಂಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ಧರ್ಮ ಇಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಸಂದರ್ಭ ಪತ್ನಿ ಶ್ರೀಜಾ ಕೈಲಿದ್ದ ಚಾಕುವಿನಿಂದ ಆತನನ್ನು ತಿವಿದ ಪರಿಣಾಮ ಧರ್ಮ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಧರ್ಮ ಕುಶಾಲನಗರದ ಮೂಲನವನಾಗಿದ್ದು, ಶ್ರೀಜ ಬೈರಂಬಾಡದ ನಿವಾಸಿಯಾಗಿದ್ದಾಳೆ. ಇಬ್ಬರು ಪ್ರೀತಿಸಿ ವಿವಾಹದ ನಂತರ ಮೂರ್ನಾಡಿನ ಗಾಂಧಿನಗರದಲ್ಲಿ ವಾಸವಾಗಿದ್ದರು ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ಸುಂದರ್ ರಾಜ್, ಡಿವೈಎಸ್ಪಿ ಮಹೇಶ್ ಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಉಮೇಶ್ ಉಪ್ಪಳಗಿ, ಮೂರ್ನಾಡು ಪೊಲೀಸ್ ಠಾಣೆಯ ಎ.ಎಸ್. ಐ ಶ್ರೀನಿವಾಸ್ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸದ್ಯ ಪೊಲೀಸರು ಶ್ರೀಜಾಲನ್ನು ಬಂಧಿಸಿ, ವಿಚಾರಣೆ ಮುಂದುವರಿಸಿದ್ದಾರೆ.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…