Categories: ಕೊಡಗು

ಕ್ಷುಲಕ ಕಾರಣಕ್ಕಾಗಿ ಗಂಡ-ಹೆಂಡತಿ‌‌ ನಡುವೆ ಜಗಳ: ಪತ್ನಿಯಿಂದಲೇ ಪತಿಯ ಕೊಲೆ?: ಪತ್ನಿ ಶ್ರೀಜಳನ್ನು ಬಂಧಿಸಿದ ಪೊಲೀಸರು: ಮುಂದುವರಿದ ವಿಚಾರಣೆ

ಪತ್ನಿಯಿಂದಲೇ ಪತಿ ಸಾವನಪ್ಪಿದ ಘಟನೆ ಇಂದು ಬೆಳಿಗ್ಗೆ 7:30 ಗಂಟೆಗೆ ಕೊಡಗಿನ ಮೂರ್ನಾಡು ಗಾಂಧಿನಗರದಲ್ಲಿ ನಡೆದಿದೆ.

ಗಾಂಧಿನಗರದ ಮನೆಯೊಂದರಲ್ಲಿ ಬಾಡಿಗೆಗೆ ವಾಸವಾಗಿದ್ದ ಧರ್ಮ(26) ಎಂಬತನನ್ನು ಪತ್ನಿ ಶ್ರೀಜಾ (24) ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ ಎನ್ನಲಾಗಿದೆ.

ಕಳೆದ 10 ತಿಂಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ಧರ್ಮ ಇಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಸಂದರ್ಭ ಪತ್ನಿ ಶ್ರೀಜಾ ಕೈಲಿದ್ದ ಚಾಕುವಿನಿಂದ ಆತನನ್ನು ತಿವಿದ ಪರಿಣಾಮ ಧರ್ಮ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಧರ್ಮ ಕುಶಾಲನಗರದ ಮೂಲನವನಾಗಿದ್ದು, ಶ್ರೀಜ ಬೈರಂಬಾಡದ ನಿವಾಸಿಯಾಗಿದ್ದಾಳೆ. ಇಬ್ಬರು ಪ್ರೀತಿಸಿ ವಿವಾಹದ ನಂತರ ಮೂರ್ನಾಡಿನ ಗಾಂಧಿನಗರದಲ್ಲಿ ವಾಸವಾಗಿದ್ದರು ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ಸುಂದರ್ ರಾಜ್, ಡಿವೈಎಸ್ಪಿ ಮಹೇಶ್ ಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಉಮೇಶ್ ಉಪ್ಪಳಗಿ, ಮೂರ್ನಾಡು ಪೊಲೀಸ್ ಠಾಣೆಯ ಎ.ಎಸ್. ಐ ಶ್ರೀನಿವಾಸ್ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸದ್ಯ ಪೊಲೀಸರು ಶ್ರೀಜಾಲನ್ನು ಬಂಧಿಸಿ, ವಿಚಾರಣೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

53 minutes ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

1 hour ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

4 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

20 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago