ಕ್ಷುಲ್ಲಕ ಕಾರಣಕ್ಕೆ ದಲಿತರ ಮೇಲೆ ಕಾರು ಹತ್ತಿಸಿದ ಸವರ್ಣೀಯ ವ್ಯಕ್ತಿ

ಯಲಹಂಕ : ದಲಿತನೋರ್ವ ಹೊಟೇಲ್ ನಲ್ಲಿ ನೀರು ಕುಡಿದದ್ದೇ ತಪ್ಪಾಗಿತ್ತು, ನೀನು ಕುಡಿದ ನೀರನ್ನು ನಾನು ಕುಡಿಯ ಬೇಕಾ ಎಂದು ಜಾತಿ ನಿಂದನೆ ಮಾಡಿದ ಸವರ್ಣಿಯ ವ್ಯಕ್ತಿ ಏಕಾಏಕಿ ಸ್ಥಳದಲ್ಲೇ ಹಲ್ಲೆ ಸಹ ನಡೆಸಿದ, ಇಷ್ಟಕ್ಕೆ ಸುಮ್ಮನಾಗದ ಆತ ದಲಿತ ಮತ್ತು ಆತನ ಸ್ನೇಹಿತರು ಬರುತ್ತಿದ್ದ ಸ್ಕೂಟರ್ ಮೇಲೆ ಕಾರು ಹತ್ತಿಸಿದ್ದಾನೆ, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ, ಮತ್ತೊಬ್ಬನ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ.

ಯಲಹಂಕ ತಾಲೂಕಿನ ಕಾಕೋಳು ಗ್ರಾಮದಲ್ಲಿ ಮೇ.11ರ ಬೆಳಗ್ಗೆ 6:30 ಸಯಯದಲ್ಲಿ ಘಟನೆ ನಡೆದಿದ್ದು, ಒಂದೇ ಸ್ಕೂಟರ್ ನಲ್ಲಿ ಒಂದೇ ಊರಿನ ಮೂವರು ಕೆಲಸಕ್ಕೆ ಹೋಗುತ್ತಿದ್ದರು, ಅತಿವೇಗವಾಗಿ ಬಂದ ಕಾರು ಸ್ಕೂಟರ್ ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಸ್ಕೂಟರ್ ನಲ್ಲಿದ್ದ ರಾಮಯ್ಯ ಮತ್ತು ನಾಗರಾಜು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಗೋಪಾಲ್ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಸಹ ಚಿಂತಾಜನಕವಾಗಿದ್ದು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಬ್ಬರ ಸಾವಿಗೆ ಕಾರಣನಾದ ಭರತ್, ಯಲಹಂಕ ತಾಲೂಕಿನ ಹನಿಯೂರು ಗ್ರಾಮದವ, ಈತನ ಮೇಲೆ ರೌಡಿಶೀಟರ್ ಸಹ ಇದೆ, ಮೇಲ್ನೋಟಕ್ಕೆ ಅಪಘಾತವಾಗಿ ಕಂಡರು ಮೃತರು ಸಂಬಂಧಿಕರು ಕೊಲೆ ಆರೋಪವನ್ನ ಮಾಡುತ್ತಿದ್ದಾರೆ, ಹದಿನೈದು ದಿನಗಳ ಹಿಂದೆ ಮೃತ ರಾಮಯ್ಯ ರಾಜಯಕೀಯ ಪಕ್ಷವೊಂದರ ರ್ಯಾಲಿಗಾಗಿ ಹೆಸರಘಟ್ಟಕ್ಕೆ ಹೋಗಿದ್ದರು, ಈ ಸಮಯದಲ್ಲಿ ಅವರು ಹೊಟೇಲ್ ನಲ್ಲಿ ನೀರು ಕುಡಿದಿದ್ದಾರೆ, ಇದನ್ನ ಗಮನಿಸಿದ ಭರತ್, ನೀನು ಕುಡಿದ ನೀರನ್ನು ನಾವು ಕುಡಿಯ ಬೇಕಾ ಎಂದು ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿದ್ದಾರೆ, ನಿನ್ನನ್ನು ನೋಡಿಕೊಳ್ಳವುದ್ದಾಗಿ ಬೆದರಿಕೆ ಹಾಕಿದ್ದಾನೆ ಇದೇ ದ್ವೇಷದ ಮೇಲೆ ರಾಮಯ್ಯ ಎಂದಿನಂತೆ ಕೆಲಸಕ್ಕೆ ಬರುವುದು ಗೊತ್ತಿದ್ದ ಭರತ್, ಆತ ಬರುದನ್ನೇ ಕಾದು ಕಾರು ಹತ್ತಿಸಿ ಕೊಲೆ ಮಾಡಿದ್ದಾನೆ ಎಂಬುದು ಮೃತ ಕುಟುಂಬದವರ ಆರೋಪ

ಘಟನೆಗೆ ಸಂಬಂಧಿಸಿದಂತೆ ರಾಜಾನುಕುಂಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಘಟನೆಗೆ ಕಾರಣನಾದ ಭರತ್ ಮತ್ತು ಆತನ ಸ್ನೇಹಿತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೃತ ರಾಯಯ್ಯನ ಸಂಬಂಧಿ ವೆಂಕಟೇಶ್ ತಿಳಿಸಿದ್ದಾರೆ.

Ramesh Babu

Journalist

Recent Posts

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

5 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

6 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

11 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

23 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

24 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

1 day ago