ಕ್ಷುಲ್ಲಕ ಕಾರಣಕ್ಕೆ ದಲಿತರ ಮೇಲೆ ಕಾರು ಹತ್ತಿಸಿದ ಸವರ್ಣೀಯ ವ್ಯಕ್ತಿ

ಯಲಹಂಕ : ದಲಿತನೋರ್ವ ಹೊಟೇಲ್ ನಲ್ಲಿ ನೀರು ಕುಡಿದದ್ದೇ ತಪ್ಪಾಗಿತ್ತು, ನೀನು ಕುಡಿದ ನೀರನ್ನು ನಾನು ಕುಡಿಯ ಬೇಕಾ ಎಂದು ಜಾತಿ ನಿಂದನೆ ಮಾಡಿದ ಸವರ್ಣಿಯ ವ್ಯಕ್ತಿ ಏಕಾಏಕಿ ಸ್ಥಳದಲ್ಲೇ ಹಲ್ಲೆ ಸಹ ನಡೆಸಿದ, ಇಷ್ಟಕ್ಕೆ ಸುಮ್ಮನಾಗದ ಆತ ದಲಿತ ಮತ್ತು ಆತನ ಸ್ನೇಹಿತರು ಬರುತ್ತಿದ್ದ ಸ್ಕೂಟರ್ ಮೇಲೆ ಕಾರು ಹತ್ತಿಸಿದ್ದಾನೆ, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ, ಮತ್ತೊಬ್ಬನ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ.

ಯಲಹಂಕ ತಾಲೂಕಿನ ಕಾಕೋಳು ಗ್ರಾಮದಲ್ಲಿ ಮೇ.11ರ ಬೆಳಗ್ಗೆ 6:30 ಸಯಯದಲ್ಲಿ ಘಟನೆ ನಡೆದಿದ್ದು, ಒಂದೇ ಸ್ಕೂಟರ್ ನಲ್ಲಿ ಒಂದೇ ಊರಿನ ಮೂವರು ಕೆಲಸಕ್ಕೆ ಹೋಗುತ್ತಿದ್ದರು, ಅತಿವೇಗವಾಗಿ ಬಂದ ಕಾರು ಸ್ಕೂಟರ್ ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಸ್ಕೂಟರ್ ನಲ್ಲಿದ್ದ ರಾಮಯ್ಯ ಮತ್ತು ನಾಗರಾಜು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಗೋಪಾಲ್ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಸಹ ಚಿಂತಾಜನಕವಾಗಿದ್ದು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಬ್ಬರ ಸಾವಿಗೆ ಕಾರಣನಾದ ಭರತ್, ಯಲಹಂಕ ತಾಲೂಕಿನ ಹನಿಯೂರು ಗ್ರಾಮದವ, ಈತನ ಮೇಲೆ ರೌಡಿಶೀಟರ್ ಸಹ ಇದೆ, ಮೇಲ್ನೋಟಕ್ಕೆ ಅಪಘಾತವಾಗಿ ಕಂಡರು ಮೃತರು ಸಂಬಂಧಿಕರು ಕೊಲೆ ಆರೋಪವನ್ನ ಮಾಡುತ್ತಿದ್ದಾರೆ, ಹದಿನೈದು ದಿನಗಳ ಹಿಂದೆ ಮೃತ ರಾಮಯ್ಯ ರಾಜಯಕೀಯ ಪಕ್ಷವೊಂದರ ರ್ಯಾಲಿಗಾಗಿ ಹೆಸರಘಟ್ಟಕ್ಕೆ ಹೋಗಿದ್ದರು, ಈ ಸಮಯದಲ್ಲಿ ಅವರು ಹೊಟೇಲ್ ನಲ್ಲಿ ನೀರು ಕುಡಿದಿದ್ದಾರೆ, ಇದನ್ನ ಗಮನಿಸಿದ ಭರತ್, ನೀನು ಕುಡಿದ ನೀರನ್ನು ನಾವು ಕುಡಿಯ ಬೇಕಾ ಎಂದು ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿದ್ದಾರೆ, ನಿನ್ನನ್ನು ನೋಡಿಕೊಳ್ಳವುದ್ದಾಗಿ ಬೆದರಿಕೆ ಹಾಕಿದ್ದಾನೆ ಇದೇ ದ್ವೇಷದ ಮೇಲೆ ರಾಮಯ್ಯ ಎಂದಿನಂತೆ ಕೆಲಸಕ್ಕೆ ಬರುವುದು ಗೊತ್ತಿದ್ದ ಭರತ್, ಆತ ಬರುದನ್ನೇ ಕಾದು ಕಾರು ಹತ್ತಿಸಿ ಕೊಲೆ ಮಾಡಿದ್ದಾನೆ ಎಂಬುದು ಮೃತ ಕುಟುಂಬದವರ ಆರೋಪ

ಘಟನೆಗೆ ಸಂಬಂಧಿಸಿದಂತೆ ರಾಜಾನುಕುಂಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಘಟನೆಗೆ ಕಾರಣನಾದ ಭರತ್ ಮತ್ತು ಆತನ ಸ್ನೇಹಿತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೃತ ರಾಯಯ್ಯನ ಸಂಬಂಧಿ ವೆಂಕಟೇಶ್ ತಿಳಿಸಿದ್ದಾರೆ.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

16 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

21 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

21 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

1 day ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

2 days ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago