ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ; ಕೊಲೆಯಲ್ಲಿ ಅಂತ್ಯ

ಕ್ರಿಕೆಟ್ ಟೂರ್ನಮೆಂಟ್ ನಡೆಯುವ ವೇಳೆ ನಡೆದ ಜಗಳ ಇಬ್ಬರು ಯುವಕರ ಸಾವಿಗೆ ಕಾರಣವಾಗಿದೆ, ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳದಲ್ಲಿ ಇಬ್ಬರು ಯುವಕರ ಗುಪ್ತಾಂಗಗಳಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಶಿವರಾತ್ರಿ ಹಬ್ಬದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿಯನ್ನ ಆಯೋಜಿಸಲಾಗಿತ್ತು, ಕ್ರಿಕೆಟ್ ಪಂದ್ಯದ ವೇಳೆ ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ, ಚಾಕುವಿನಿಂದ ಇಬ್ಬರು ಯುವಕರು ಗುಪ್ತಾಂಗಗಳಿಗೆ ಇರಿಯಲಾಗಿದ್ದು, ಚಾಕು ಇರಿತಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಮೃತ ಯುವಕರನ್ನ ದೊಡ್ಡಬೆಳವಂಗಲದ ಭರತ್ (23), ಪ್ರತೀಕ್ (17) ಎಂದು ಗುರುತಿಸಲಾಗಿದೆ.

ಇಂದು ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಘಟನೆ ನಡೆದಿದ್ದು, ಮೊದಲಿಗೆ ಮೈದಾನದಲ್ಲಿ ವಾಹನ ಪಾರ್ಕಿಂಗ್ ಮಾಡುವ ವಿಚಾರಕ್ಕೆ ಸಂಬಂಧಿಸಿ ದೊಡ್ಡಬೆಳವಂಗಲ ಹಾಗೂ ಹುಲಿಕುಂಟೆ ಗ್ರಾಮದ ಯುವಕರ ನಡುವೆ ಗಲಾಟೆ ನಡೆದಿದೆ. ಅಷ್ಟಕ್ಕೆ ಸುಮ್ಮನಾಗದ ಯುವಕರು ಬಸ್ ನಿಲ್ದಾಣಕ್ಕೆ ಬಂದು ಹೊಡೆದಾಟಕ್ಕೆ ಇಳಿದಿದ್ದಾರೆ. ಈ ವೇಳೆ ಭರತ್ ಹಾಗೂ ಪ್ರತೀಕ್ ಅವರಿಗೆ ಎದುರಾಳಿ ಗುಂಪಿನ ಯುವಕರ ಗುಪ್ತಾಂಗ ಹಾಗೂ ಹೊಟ್ಟೆಯ ಭಾಗಕ್ಕೆ ಬಲವಾಗಿ ಇರಿದಿದ್ದಾರೆ. ಚಾಕು ಇರಿತಕ್ಕೆ ಒಳಗಾಗಿ ರಕ್ತದ ಮಡುವಿನಲ್ಲಿ ಹೊದ್ದಾಡುತ್ತಿದ್ದ ಯುವಕರನ್ನ ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಯುವಕರು ದಾರಿ ಮಧ್ಯೆಯೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ಇದ್ದು, ಸ್ಥಳಕ್ಕೆ ಬಂದ ಪೊಲೀಸರು ಉದ್ರಿಕ್ತ ಯುವಕರ ಗುಂಪಿನತ್ತ ಲಾಠಿ ಪ್ರಹಾರ ನಡೆಸಿ ಚೆದುರಿಸಿದರು. ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಂತರ ಆರೋಪಿಗಳು ಪರಾರಿಯಾಗಿದ್ದಾರೆ.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

10 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

11 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

11 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

13 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

16 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

17 hours ago