ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹೆಚ್ಚು ಬಹುಮತ ಬರುವಂತೆ ಶ್ರಮವಹಿಸಿ- ಕಾರ್ಯಕರ್ತರಿಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸೂಚನೆ

2024ರ ಸಾರ್ವತ್ರಿಕ‌‌ ಲೋಕಸಭೆ ಚುನಾವಣೆ ಹಿನ್ನೆಲೆ ಮತದಾರರ ಮನವೊಲಿಸಿ ಮತ ಪಡೆಯಲು ತಂತ್ರಗಾರಿಕೆಗಳನ್ನ ಹೆಣೆಯುವಲ್ಲಿ ಅಭ್ಯರ್ಥಿಗಳು ನಿರತರಾಗಿದ್ದಾರೆ.

ಅದೇರೀತಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ರಕ್ಷಾ ರಾಮಯ್ಯ ಟಿಕೆಟ್ ಪಡೆದು ಈಗಾಗಲೇ ಪ್ರಚಾರ ಕಾರ್ಯ ಪ್ರಾರಂಭಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರವಾಗಿ ದೇನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ನವರು ತೂಬಗೆರೆ ಹೋಬಳಿಯ ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ತರುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕು ಎಂದು ಕಾರ್ಯಕರ್ತರಿಗೆ ಸೂಚಿಸಿದರು.

ಪ್ರತಿಯೊಂದು ಬೂತ್ ಮಟ್ಟದಲ್ಲಿ 5 ಮಂದಿ ಮಹಿಳೆಯರು 15 ಮಂದಿ ಪುರುಷರು ಸೇರಿ 25 ಸದಸ್ಯರನ್ನೊಳಗೊಂಡ ಒಂದು ಕಮಿಟಿಯನ್ನ ಮಾಡಬೇಕು. ಕಮಿಟಿಯಲ್ಲಿರುವ ಸದಸ್ಯರು ತಮ್ಮ ವ್ಯಾಪ್ತಿಯ ಮತದಾರರ ಬಳಿ ತೆರಳಿ ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಬೇಕು. ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ವೋಟ್ ಮಾಡುವಂತೆ ಮನವೊಲಿಸಬೇಕು ಎಂದು‌ ಸೂಚಿಸಿದರು.

ಕಾಂಗ್ರೆಸ್ ಗೆಲುವಿಗೆ ಪ್ರತಿಯೊಬ್ಬ ಕಾರ್ಯಕರ್ತ ಜವಾಬ್ದಾರಿ ತೆಗೆದುಕೊಂಡು ಈ ನಿಟ್ಟಿನಲ್ಲಿ ಶ್ರಮಿಸಬೇಕು. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಬಹುಮತ ದೊರಕಿಸಿ ಕೊಟ್ಟರೆ ಸರ್ಕಾರದಿಂದ 100 ಕೋಟಿ ಅನುದಾನ ಪಡೆದು ಕ್ಷೇತ್ರವನ್ನ ಇನ್ನಷ್ಟು ಅಭಿವೃದ್ಧಿ ಮಾಡುವಲ್ಲಿ ಶ್ರಮಿಸುತ್ತೇನೆ ಎಂದರು.

ಕ್ಷೇತ್ರದಲ್ಲಿ ಶಾಲಾ ಕಟ್ಟಡ ನವೀಕರಣ, ಕೆರೆ ಕಟ್ಟೆ ದುರಸ್ತಿ ಸೇರಿದಂತೆ ಎಸ್ ಎಸ್ ಘಾಟಿ‌ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ 5 ಸಾವಿರ ಮಂದಿ ಕುಳಿತುಕೊಂಡು ಊಟ ಮಾಡುವ ಕಲ್ಯಾಣ ಮಂಟಪ, ವಸತಿ ಕಟ್ಟಡ ನಿರ್ಮಾಣ ಮಾಡಲು ಚಿಂತಿಸಲಾಗಿದೆ ಎಂದರು.

ಈ ವೇಳೆ ಕೆಪಿಸಿಸಿ ಸದಸ್ಯ ಎಸ್. ಆರ್. ಮುನಿರಾಜ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎನ್.ಅರವಿಂದ್, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಪ್ಪ, ಕಾರ್ಯದರ್ಶಿ ರವಿಸಿದ್ದಪ್ಪ, ಜಿಲ್ಲಾ ಮೀನುಗಾರಿಕಾ ಸಂಘದ ಅಧ್ಯಕ್ಷ ಆರ್. ವಿ. ಮಹೇಶ್, ಘಾಟಿ ಪಂಚಾಯ್ತಿ ಅಧ್ಯಕ್ಷೆ ಉಮಾ ಬಾಯಿ, ಸದಸ್ಯ ಪುರುಷೋತ್ತಮ್, ಮಾಜಿ ಸದಸ್ಯ ಪ್ರಸಾದ್, ತೂಬಗೆರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ನಂಜಮ್ಮ ನರಸಿಂಹಮೂರ್ತಿ, ಮಾಜಿ ಅಧ್ಯಕ್ಷ ಟಿ.ವಿ. ವೆಂಕಟೇಶ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

4 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

15 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

16 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

16 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

18 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

21 hours ago