Categories: ಕೋಲಾರ

ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ: ವಿರೋಧಿಗಳ ಟೀಕೆಗೆ ಉತ್ತರವಿಲ್ಲ: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ವಿಧಾನಸಭಾ ಕ್ಷೇತ್ರಕ್ಕೆ ಸರಕಾರದಿಂದ ಅನುದಾನ ತಂದು ಅಭಿವೃದ್ಧಿ ಮಾಡೋದು ನನಗೆ ಗೊತ್ತಿದೆ ವಿರೋಧಿಗಳ ಟೀಕೆಗಳಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಮಾಡೋ ಕೆಲಸಗಳು ಸಾಕಷ್ಟು ಇವೆ ಅವುಗಳ ಕಡೆ ಗಮನ ಕೊಡತ್ತೇನೆ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.

ನಗರದ ತಮ್ಮ ಕಚೇರಿಯಲ್ಲಿ ಮಂಗಳವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಇವತ್ತು ಕೂಡ ಸಾರ್ವಜನಿಕರು ಕೋಲಾರಮ್ಮ ದೇವಿಯ ರಥೋತ್ಸವ ನಡೆಯುವ ರಸ್ತೆಯ ಅಭಿವೃದ್ಧಿಗೆ ಮನವಿ ಮಾಡಿದರು ಕೂಡಲೇ ಅಧಿಕಾರಿಗಳ ಗಮನಕ್ಕೆ ತಂದು ರಸ್ತೆ ಮಾಡುವಂತೆ ತಿಳಿಸಿದ್ದೇನೆ. ಕ್ಷೇತ್ರದಲ್ಲಿ ಯಾವುದೇ ಸಮಸ್ಯೆಯಾಗಲಿ ನನ್ನ ಗಮನಕ್ಕೆ ತಂದರೆ ಕೂಡಲೇ ಕ್ರಮ ವಹಿಸಲಾಗುತ್ತಾ ಇದೆ. ಸುಮ್ಮನೆ ವಿರೋಧಿಗಳ ಟೀಕೆಗೆ ಉತ್ತರಿಸುವುದರಿಂದ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕೋಲಾರ ನಗರದ ಎಲ್ಲಾ ರಸ್ತೆಗಳನ್ನು ಹಂತಹಂತವಾಗಿ ಅಭಿವೃದ್ಧಿ ಮಾಡಲು ಮುಂದಾಗಿದ್ದೇವೆ. ಈಗಾಗಲೇ ಕಾಂಗ್ರೆಸ್ ಸರಕಾರ ಬಂದ ನಂತರ ಕೆಲವು ಪ್ರಮುಖ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಹಿಂದೆ ಮುಳಬಾಗಿಲು ಕ್ಷೇತ್ರದಲ್ಲಿ ಶಾಸಕನಾಗಿದ್ದ ಸಂದರ್ಭದಲ್ಲಿ ನಡೆದ ಅಭಿವೃದ್ಧಿ ಕೆಲಸಗಳನ್ನು ಗುರುತಿಸಿ ಕೇವಲ 20 ದಿನದಲ್ಲಿ ನನ್ನನ್ನು ಕೋಲಾರ ಕ್ಷೇತ್ರದ ಜನ ಶಾಸಕನಾಗಿ ಆಶೀರ್ವದಿಸಿದ್ದಾರೆ. ಅವರ ಋಣ ತೀರಿಸಲು ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ ಕಾಲ ಮಿತಿಯೊಳಗೆ ಕೋಲಾರ ನಗರಸಭೆಯನ್ನು ಮೇಲ್ದರ್ಜೆಗೆ ಏರಿಸಿ ಮಹಾನಗರ ಪಾಲಿಕೆ ಮಾಡಲು ಸರಕಾರ ಬದ್ಧವಾಗಿದೆ ಜಿಲ್ಲೆಯಾದ್ಯಂತ ಸೇರಿದಂತೆ ಕೋಲಾರ ಕ್ಷೇತ್ರದಲ್ಲಿ ಕೈಗೆತ್ತಿಕೊಳ್ಳುವ ಯಾವುದೇ ಮೂಲಸೌಕರ್ಯ ಯೋಜನೆಗಳಿಗೆ ಹಣಕಾಸಿನ ಅಡ್ಡಿ ಎದುರಾಗದು ಎಂದು ತಿಳಿಸಿದರು.

ಕೋಲಾರ ವಿಧಾನಸಭಾ ಕ್ಷೇತ್ರದ ಕಾಲೇಜುಗಳ ಅಭಿವೃದ್ಧಿಗೆ ಸುಮಾರು 30 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಹೊಸ ಬಸ್ ನಿಲ್ದಾಣ ಮತ್ತು ಹಳೆ ಬಸ್ ನಿಲ್ದಾಣದ ಅಭಿವೃದ್ಧಿಗೆ ವಿಶೇಷವಾಗಿ ಅನುದಾನವನ್ನು ಬಿಡುಗಡೆ ಮಾಡಿಸಲಾಗಿದೆ ಕೋಲಾರ ರಿಂಗ್ ರಸ್ತೆಗೆ ಈಗಾಗಲೇ ಡಿಪಿಆರ್ ಸಿದ್ದಪಡಿಸಲಾಗಿದ್ದು ಆದಷ್ಟು ಬೇಗ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಪಿಎಂಸಿ ಜಾಗದ ಸಮಸ್ಯೆ ಇತ್ಯರ್ಥಪಡಿಸಲಾಗುತ್ತದೆ. ಜನಕ್ಕೆ ಕುಡಿಯುವ ನೀರು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಸಮಸ್ಯೆಗಳಿಗೆ ತಾಲೂಕು ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿನ ಅಧಿಕಾರಿಗಳು ಗಮನ ಹರಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಲೋಕಸಭಾ ಚುನಾವಣೆಯಿಂದಾಗಿ ಸುಮಾರು ಎರಡು ತಿಂಗಳು ಕಾಲ ನೀತಿ ಸಂಹಿತೆ ಜಾರಿಯಲ್ಲಿ ಇತ್ತು ಅ ಸಂದರ್ಭದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿತ್ತು ಈಗ ಚುನಾವಣಾ ಕೆಲಸಗಳು ಮುಗಿದಿದ್ದು, ಕೂಡಲೇ ಅಧಿಕಾರಿಗಳು ಸಹ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸೂಚಿಸಲಾಗಿದೆ ಕಾಂಗ್ರೆಸ್ ಸರಕಾರವು ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುವ ಸರಕಾರವಾಗಿದ್ದು ಯಾವುದೇ ಸಮಸ್ಯೆ ಎದುರಾದರೂ ಅಭಿವೃದ್ಧಿಯಿಂದ ಹಿಂದೆ ಸರಿಯಲ್ಲ ಚುನಾವಣೆ ಪೂರ್ವದಲ್ಲಿ ನಿಂತಿದ್ದ ಅಭಿವೃದ್ಧಿ ಕಾಮಗಾರಿಗಳನ್ನು ಸೂಕ್ತ ಸಮಯದಲ್ಲಿ ಉತ್ತಮ ಗುಣಮಟ್ಟದಿಂದ ನಿರ್ಮಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Ramesh Babu

Journalist

Recent Posts

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

6 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

6 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

14 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

20 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

1 day ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 day ago