Categories: ಕೋಲಾರ

ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ: ವಿರೋಧಿಗಳ ಟೀಕೆಗೆ ಉತ್ತರವಿಲ್ಲ: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ವಿಧಾನಸಭಾ ಕ್ಷೇತ್ರಕ್ಕೆ ಸರಕಾರದಿಂದ ಅನುದಾನ ತಂದು ಅಭಿವೃದ್ಧಿ ಮಾಡೋದು ನನಗೆ ಗೊತ್ತಿದೆ ವಿರೋಧಿಗಳ ಟೀಕೆಗಳಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಮಾಡೋ ಕೆಲಸಗಳು ಸಾಕಷ್ಟು ಇವೆ ಅವುಗಳ ಕಡೆ ಗಮನ ಕೊಡತ್ತೇನೆ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.

ನಗರದ ತಮ್ಮ ಕಚೇರಿಯಲ್ಲಿ ಮಂಗಳವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಇವತ್ತು ಕೂಡ ಸಾರ್ವಜನಿಕರು ಕೋಲಾರಮ್ಮ ದೇವಿಯ ರಥೋತ್ಸವ ನಡೆಯುವ ರಸ್ತೆಯ ಅಭಿವೃದ್ಧಿಗೆ ಮನವಿ ಮಾಡಿದರು ಕೂಡಲೇ ಅಧಿಕಾರಿಗಳ ಗಮನಕ್ಕೆ ತಂದು ರಸ್ತೆ ಮಾಡುವಂತೆ ತಿಳಿಸಿದ್ದೇನೆ. ಕ್ಷೇತ್ರದಲ್ಲಿ ಯಾವುದೇ ಸಮಸ್ಯೆಯಾಗಲಿ ನನ್ನ ಗಮನಕ್ಕೆ ತಂದರೆ ಕೂಡಲೇ ಕ್ರಮ ವಹಿಸಲಾಗುತ್ತಾ ಇದೆ. ಸುಮ್ಮನೆ ವಿರೋಧಿಗಳ ಟೀಕೆಗೆ ಉತ್ತರಿಸುವುದರಿಂದ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕೋಲಾರ ನಗರದ ಎಲ್ಲಾ ರಸ್ತೆಗಳನ್ನು ಹಂತಹಂತವಾಗಿ ಅಭಿವೃದ್ಧಿ ಮಾಡಲು ಮುಂದಾಗಿದ್ದೇವೆ. ಈಗಾಗಲೇ ಕಾಂಗ್ರೆಸ್ ಸರಕಾರ ಬಂದ ನಂತರ ಕೆಲವು ಪ್ರಮುಖ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಹಿಂದೆ ಮುಳಬಾಗಿಲು ಕ್ಷೇತ್ರದಲ್ಲಿ ಶಾಸಕನಾಗಿದ್ದ ಸಂದರ್ಭದಲ್ಲಿ ನಡೆದ ಅಭಿವೃದ್ಧಿ ಕೆಲಸಗಳನ್ನು ಗುರುತಿಸಿ ಕೇವಲ 20 ದಿನದಲ್ಲಿ ನನ್ನನ್ನು ಕೋಲಾರ ಕ್ಷೇತ್ರದ ಜನ ಶಾಸಕನಾಗಿ ಆಶೀರ್ವದಿಸಿದ್ದಾರೆ. ಅವರ ಋಣ ತೀರಿಸಲು ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ ಕಾಲ ಮಿತಿಯೊಳಗೆ ಕೋಲಾರ ನಗರಸಭೆಯನ್ನು ಮೇಲ್ದರ್ಜೆಗೆ ಏರಿಸಿ ಮಹಾನಗರ ಪಾಲಿಕೆ ಮಾಡಲು ಸರಕಾರ ಬದ್ಧವಾಗಿದೆ ಜಿಲ್ಲೆಯಾದ್ಯಂತ ಸೇರಿದಂತೆ ಕೋಲಾರ ಕ್ಷೇತ್ರದಲ್ಲಿ ಕೈಗೆತ್ತಿಕೊಳ್ಳುವ ಯಾವುದೇ ಮೂಲಸೌಕರ್ಯ ಯೋಜನೆಗಳಿಗೆ ಹಣಕಾಸಿನ ಅಡ್ಡಿ ಎದುರಾಗದು ಎಂದು ತಿಳಿಸಿದರು.

ಕೋಲಾರ ವಿಧಾನಸಭಾ ಕ್ಷೇತ್ರದ ಕಾಲೇಜುಗಳ ಅಭಿವೃದ್ಧಿಗೆ ಸುಮಾರು 30 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಹೊಸ ಬಸ್ ನಿಲ್ದಾಣ ಮತ್ತು ಹಳೆ ಬಸ್ ನಿಲ್ದಾಣದ ಅಭಿವೃದ್ಧಿಗೆ ವಿಶೇಷವಾಗಿ ಅನುದಾನವನ್ನು ಬಿಡುಗಡೆ ಮಾಡಿಸಲಾಗಿದೆ ಕೋಲಾರ ರಿಂಗ್ ರಸ್ತೆಗೆ ಈಗಾಗಲೇ ಡಿಪಿಆರ್ ಸಿದ್ದಪಡಿಸಲಾಗಿದ್ದು ಆದಷ್ಟು ಬೇಗ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಪಿಎಂಸಿ ಜಾಗದ ಸಮಸ್ಯೆ ಇತ್ಯರ್ಥಪಡಿಸಲಾಗುತ್ತದೆ. ಜನಕ್ಕೆ ಕುಡಿಯುವ ನೀರು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಸಮಸ್ಯೆಗಳಿಗೆ ತಾಲೂಕು ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿನ ಅಧಿಕಾರಿಗಳು ಗಮನ ಹರಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಲೋಕಸಭಾ ಚುನಾವಣೆಯಿಂದಾಗಿ ಸುಮಾರು ಎರಡು ತಿಂಗಳು ಕಾಲ ನೀತಿ ಸಂಹಿತೆ ಜಾರಿಯಲ್ಲಿ ಇತ್ತು ಅ ಸಂದರ್ಭದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿತ್ತು ಈಗ ಚುನಾವಣಾ ಕೆಲಸಗಳು ಮುಗಿದಿದ್ದು, ಕೂಡಲೇ ಅಧಿಕಾರಿಗಳು ಸಹ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸೂಚಿಸಲಾಗಿದೆ ಕಾಂಗ್ರೆಸ್ ಸರಕಾರವು ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುವ ಸರಕಾರವಾಗಿದ್ದು ಯಾವುದೇ ಸಮಸ್ಯೆ ಎದುರಾದರೂ ಅಭಿವೃದ್ಧಿಯಿಂದ ಹಿಂದೆ ಸರಿಯಲ್ಲ ಚುನಾವಣೆ ಪೂರ್ವದಲ್ಲಿ ನಿಂತಿದ್ದ ಅಭಿವೃದ್ಧಿ ಕಾಮಗಾರಿಗಳನ್ನು ಸೂಕ್ತ ಸಮಯದಲ್ಲಿ ಉತ್ತಮ ಗುಣಮಟ್ಟದಿಂದ ನಿರ್ಮಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

8 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

12 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

12 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

15 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago