2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಬೆನ್ನಲ್ಲೇ ಕ್ಷೇತ್ರದಲ್ಲಿ ಜೆಡಿಎಸ್, ಕಾಂಗ್ರೆಸ್, ಬಿಜೆಪಿ(ಜೆಸಿಬಿ) ಪಕ್ಷಗಳು ಮತದಾರರಿಗೆ ಆಸೆ, ಆಮಿಷಕ್ಕೆ ಒಳಪಡಿಸಿ ದಿಕ್ಕು ತಪ್ಪಿಸಿ ಮತ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಎಎಪಿ ಅಭ್ಯರ್ಥಿ ಪುರುಷೋತ್ತಮ್ ಆರೋಪಿಸಿದರು.
ನಗರದ ಎಎಪಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಈ ಕುರಿತು ಮಾತನಾಡಿದ ಅವರು, ಎಎಪಿ ವತಿಯಿಂದ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಪ್ರಾಮಾಣಿಕವಾಗಿ ಮತದಾರರನ್ನು ಯಾವುದೇ ಆಸೆ, ಆಮಿಷಕ್ಕೆ ಒಳಪಡಿಸದೇ ಮತಯಾಚನೆ ಮಾಡುತ್ತಿದ್ದೇವೆ. ಆದರೆ ಜೆಸಿಬಿ ಪಕ್ಷಗಳು ಮದ್ಯ, ಹಣ ಹಂಚಿಕೆ ಮಾಡಿ ಕಾನೂನು ಬಾಹಿರವಾಗಿ ಮತಯಾಚನೆ ಮಾಡುತ್ತಿರುವ ಕೂಗು ಕೇಳಿಬರುತ್ತಿದೆ. ಇದರ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದರು.
ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ವಾಮಮಾರ್ಗ ಅನುಸರಿಸುವುದು ಎಷ್ಟರ ಮಟ್ಟಿಗೆ ಸರಿ, ನಮ್ಮಂತ ಬಡ ಪಕ್ಷ, ಭ್ರಷ್ಟಾಚಾರ ರಹಿತ ಪಕ್ಷಗಳು ಕಷ್ಟಪಟ್ಟು ಪ್ರಮಾಣಕವಾಗಿ ಮನೆ ಮನೆಗೆ ಭೇಟಿ ಕಾನೂನಾತ್ಮಕವಾಗಿ ಮತಯಾಚನೆ ಮಾಡಿದ್ದೇವೆ. ಜೆಸಿಬಿ ಪಕ್ಷಗಳ ಅನ್ಯಮಾರ್ಗದ ಮತಯಾಚನೆಯಿಂದ ನಮ್ಮಂತ ಬಡ ಪಕ್ಷಗಳು ಗೆಲ್ಲುವುದಾದರು ಹೇಗೆ ಎಂದು ಪ್ರಶ್ನೆ ಮಾಡಿದರು.
ಕ್ಷೇತ್ರದ ಮತದಾರರು ದಯವಿಟ್ಟು ಯಾವುದೇ ಹಣ, ಮದ್ಯ, ಆಸೆ, ಆಕಾಂಕ್ಷೆ, ಆಮಿಷಕ್ಕೆ ಒಳಗಾಗದೇ ಪ್ರಮಾಣಿಕವಾಗಿ ನಿಷ್ಠಾವಂತ, ಕ್ಷೇತ್ರದ ಅಭಿವೃದ್ಧಿಗೆ ತುಡಿಯುವ ಅಭ್ಯರ್ಥಿಗೆ ಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.
ಈ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…