ಕ್ಷೇತ್ರದ ಮತದಾರರ ಮನ ಸೆಳೆಯಲು ಜೆಸಿಬಿ ಪಕ್ಷಗಳಿಂದ ಹಣ, ಮದ್ಯ ಆಮಿಷ: ಎಎಪಿ‌ ಅಭ್ಯರ್ಥಿ ಪುರುಷೋತ್ತಮ್ ಆರೋಪ

2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಬೆನ್ನಲ್ಲೇ ಕ್ಷೇತ್ರದಲ್ಲಿ ಜೆಡಿಎಸ್, ಕಾಂಗ್ರೆಸ್, ಬಿಜೆಪಿ(ಜೆಸಿಬಿ) ಪಕ್ಷಗಳು ಮತದಾರರಿಗೆ ಆಸೆ, ಆಮಿಷಕ್ಕೆ ಒಳಪಡಿಸಿ ದಿಕ್ಕು ತಪ್ಪಿಸಿ ಮತ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಎಎಪಿ ಅಭ್ಯರ್ಥಿ ಪುರುಷೋತ್ತಮ್ ಆರೋಪಿಸಿದರು.

ನಗರದ ಎಎಪಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಈ ಕುರಿತು ಮಾತನಾಡಿದ ಅವರು, ಎಎಪಿ ವತಿಯಿಂದ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಪ್ರಾಮಾಣಿಕವಾಗಿ ಮತದಾರರನ್ನು ಯಾವುದೇ ಆಸೆ, ಆಮಿಷಕ್ಕೆ ಒಳಪಡಿಸದೇ ಮತಯಾಚನೆ ಮಾಡುತ್ತಿದ್ದೇವೆ. ಆದರೆ ಜೆಸಿಬಿ ಪಕ್ಷಗಳು ಮದ್ಯ, ಹಣ ಹಂಚಿಕೆ ಮಾಡಿ ಕಾನೂನು ಬಾಹಿರವಾಗಿ ಮತಯಾಚನೆ ಮಾಡುತ್ತಿರುವ ಕೂಗು ಕೇಳಿಬರುತ್ತಿದೆ. ಇದರ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದರು.

ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ವಾಮಮಾರ್ಗ ಅನುಸರಿಸುವುದು ಎಷ್ಟರ ಮಟ್ಟಿಗೆ ಸರಿ, ನಮ್ಮಂತ ಬಡ ಪಕ್ಷ, ಭ್ರಷ್ಟಾಚಾರ ರಹಿತ ಪಕ್ಷಗಳು ಕಷ್ಟಪಟ್ಟು ಪ್ರಮಾಣಕವಾಗಿ ಮನೆ ಮನೆಗೆ ಭೇಟಿ ಕಾನೂನಾತ್ಮಕವಾಗಿ ಮತಯಾಚನೆ ಮಾಡಿದ್ದೇವೆ. ಜೆಸಿಬಿ ಪಕ್ಷಗಳ ಅನ್ಯಮಾರ್ಗದ ಮತಯಾಚನೆಯಿಂದ ನಮ್ಮಂತ ಬಡ ಪಕ್ಷಗಳು ಗೆಲ್ಲುವುದಾದರು ಹೇಗೆ ಎಂದು ಪ್ರಶ್ನೆ‌ ಮಾಡಿದರು.

ಕ್ಷೇತ್ರದ ಮತದಾರರು ದಯವಿಟ್ಟು ಯಾವುದೇ ಹಣ, ಮದ್ಯ, ಆಸೆ, ಆಕಾಂಕ್ಷೆ, ಆಮಿಷಕ್ಕೆ ಒಳಗಾಗದೇ ಪ್ರಮಾಣಿಕವಾಗಿ ನಿಷ್ಠಾವಂತ, ಕ್ಷೇತ್ರದ ಅಭಿವೃದ್ಧಿಗೆ ತುಡಿಯುವ ಅಭ್ಯರ್ಥಿಗೆ ಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಈ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

2 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

11 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

17 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

18 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 days ago