ಕ್ಷೇತ್ರದ ಮತದಾರರ ಮನ ಸೆಳೆಯಲು ಜೆಸಿಬಿ ಪಕ್ಷಗಳಿಂದ ಹಣ, ಮದ್ಯ ಆಮಿಷ: ಎಎಪಿ‌ ಅಭ್ಯರ್ಥಿ ಪುರುಷೋತ್ತಮ್ ಆರೋಪ

2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಬೆನ್ನಲ್ಲೇ ಕ್ಷೇತ್ರದಲ್ಲಿ ಜೆಡಿಎಸ್, ಕಾಂಗ್ರೆಸ್, ಬಿಜೆಪಿ(ಜೆಸಿಬಿ) ಪಕ್ಷಗಳು ಮತದಾರರಿಗೆ ಆಸೆ, ಆಮಿಷಕ್ಕೆ ಒಳಪಡಿಸಿ ದಿಕ್ಕು ತಪ್ಪಿಸಿ ಮತ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಎಎಪಿ ಅಭ್ಯರ್ಥಿ ಪುರುಷೋತ್ತಮ್ ಆರೋಪಿಸಿದರು.

ನಗರದ ಎಎಪಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಈ ಕುರಿತು ಮಾತನಾಡಿದ ಅವರು, ಎಎಪಿ ವತಿಯಿಂದ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಪ್ರಾಮಾಣಿಕವಾಗಿ ಮತದಾರರನ್ನು ಯಾವುದೇ ಆಸೆ, ಆಮಿಷಕ್ಕೆ ಒಳಪಡಿಸದೇ ಮತಯಾಚನೆ ಮಾಡುತ್ತಿದ್ದೇವೆ. ಆದರೆ ಜೆಸಿಬಿ ಪಕ್ಷಗಳು ಮದ್ಯ, ಹಣ ಹಂಚಿಕೆ ಮಾಡಿ ಕಾನೂನು ಬಾಹಿರವಾಗಿ ಮತಯಾಚನೆ ಮಾಡುತ್ತಿರುವ ಕೂಗು ಕೇಳಿಬರುತ್ತಿದೆ. ಇದರ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದರು.

ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ವಾಮಮಾರ್ಗ ಅನುಸರಿಸುವುದು ಎಷ್ಟರ ಮಟ್ಟಿಗೆ ಸರಿ, ನಮ್ಮಂತ ಬಡ ಪಕ್ಷ, ಭ್ರಷ್ಟಾಚಾರ ರಹಿತ ಪಕ್ಷಗಳು ಕಷ್ಟಪಟ್ಟು ಪ್ರಮಾಣಕವಾಗಿ ಮನೆ ಮನೆಗೆ ಭೇಟಿ ಕಾನೂನಾತ್ಮಕವಾಗಿ ಮತಯಾಚನೆ ಮಾಡಿದ್ದೇವೆ. ಜೆಸಿಬಿ ಪಕ್ಷಗಳ ಅನ್ಯಮಾರ್ಗದ ಮತಯಾಚನೆಯಿಂದ ನಮ್ಮಂತ ಬಡ ಪಕ್ಷಗಳು ಗೆಲ್ಲುವುದಾದರು ಹೇಗೆ ಎಂದು ಪ್ರಶ್ನೆ‌ ಮಾಡಿದರು.

ಕ್ಷೇತ್ರದ ಮತದಾರರು ದಯವಿಟ್ಟು ಯಾವುದೇ ಹಣ, ಮದ್ಯ, ಆಸೆ, ಆಕಾಂಕ್ಷೆ, ಆಮಿಷಕ್ಕೆ ಒಳಗಾಗದೇ ಪ್ರಮಾಣಿಕವಾಗಿ ನಿಷ್ಠಾವಂತ, ಕ್ಷೇತ್ರದ ಅಭಿವೃದ್ಧಿಗೆ ತುಡಿಯುವ ಅಭ್ಯರ್ಥಿಗೆ ಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಈ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

10 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

10 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

10 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

10 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

13 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

17 hours ago