ದಲಿತರ ಕ್ಷೌರಕ್ಕೆ ನಿರಾಕರಣೆ ಆರೋಪ: ಗ್ರಾಮಕ್ಕೆ ಅಧಿಕಾರಿಗಳು ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸದಸ್ಯ ಭೇಟಿ ಪರಿಶೀಲನೆ: ಪ್ರಕರಣ ಇತ್ಯರ್ಥ

ತಾಲೂಕಿನ ಕಾಡನೂರು ಗ್ರಾಮದಲ್ಲಿ ದಲಿತರಿಗೆ ಕ್ಷೌರ ನಿರಾಕರಣೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸದಸ್ಯ ಓಬದೇನಹಳ್ಳಿ ಮುನಿಯಪ್ಪ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ಷೌರ ನಿರಾಕರಣೆ ಆರೋಪವನ್ನು ಇತ್ಯರ್ಥಗೊಳಸಿದರು.

ಈ ವೇಳೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸದಸ್ಯ ಓಬದೇನಹಳ್ಳಿ ಮುನಿಯಪ್ಪ ಮಾತನಾಡಿ,  21ನೇ ಶತಮಾನದಲ್ಲೂ ಇಂತಹ ಆರೋಪ ಕೇಳಿ ಬರುವುದು ಹಾಗೂ ಅಸ್ಪೃಶ್ಯತೆ ಆಚರಣೆ ಮಾಡುವುದು ವಿಷಾದನೀಯ ವಿಚಾರವಾಗಿದೆ. ಗ್ರಾಮಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸಿದಾಗ, ಗ್ರಾಮದಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿರುವ ಸೋಮು ಎಂಬುವವರು ಯಾವುದೇ ಅಸ್ಪೃಶ್ಯತೆ ಆಚರಣೆ ಮಾಡುತ್ತಿಲ್ಲ. ಆದರೆ ಆರೋಪ ಕೇಳಿ ಬಂದ ದಿನವೇ ಅದೇ ಸಮುದಾಯದ ವ್ಯಕ್ತಿಗೆ ಕ್ಷೌರಿಕೆ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ ಎಂದರು.

ಈ ಬಗ್ಗೆ ಸವಿತ ಸಮಾಜದ ತಾಲೂಕು ಕಾರ್ಯದರ್ಶಿ  ನರಸಿಂಹ ರಾಜು ಮಾತನಾಡಿ, ತಾಲೂಕು ಮಟ್ಟದಲ್ಲಿ  ಸವಿತ ಸಮಾಜದ ಜಾಗೃತಿ ಸಭೆಯನ್ನು ಮುಂದಿನ ದಿನಗಳಲ್ಲಿ ಆಯೋಜಿಸಿ ಯಾವುದೇ ತಾರತಮ್ಯ  ಮಾಡಬಾರದೆಂಬ ಜಾಗೃತಿ ಸಭೆಯನ್ನು ಏರ್ಪಡಿಸಲಾಗುವುದು ಹಾಗೂ ತಾಲೂಕಿನಲ್ಲಿ ಇದುವರೆಗೂ ಯಾವುದೇ ಈ ತರಹದ ಪ್ರಕರಣಗಳು ಕಂಡುಬಂದಿಲ್ಲ  ಇನ್ನು ಮುಂದೆ ಯಾವುದೇ ತಾರತಮ್ಯವಾಗದಂತೆ  ಬುದ್ಧಿವಾದ ಹೇಳಿದ್ದೇವೆ ಎಂದು ತಿಳಿಸಿದರು.

ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಓಬಳೇಶ್, ಪೋಲಿಸ್ ಸಿಬ್ಬಂದಿ ಸುರೇಶ್, ಪಿಡಿಒ  ಸೂರ್ಯನಾರಾಯಣ್, ಸವಿತಾ ಸಮಾಜದ  ಮುಖಂಡರಾದ ರಾಮಂಜಿನೇಯ ಶ್ರೀನಾಥ್  ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

43 seconds ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

2 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

7 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

10 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

12 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

23 hours ago