ದಲಿತರ ಕ್ಷೌರಕ್ಕೆ ನಿರಾಕರಣೆ ಆರೋಪ: ಗ್ರಾಮಕ್ಕೆ ಅಧಿಕಾರಿಗಳು ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸದಸ್ಯ ಭೇಟಿ ಪರಿಶೀಲನೆ: ಪ್ರಕರಣ ಇತ್ಯರ್ಥ

ತಾಲೂಕಿನ ಕಾಡನೂರು ಗ್ರಾಮದಲ್ಲಿ ದಲಿತರಿಗೆ ಕ್ಷೌರ ನಿರಾಕರಣೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸದಸ್ಯ ಓಬದೇನಹಳ್ಳಿ ಮುನಿಯಪ್ಪ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ಷೌರ ನಿರಾಕರಣೆ ಆರೋಪವನ್ನು ಇತ್ಯರ್ಥಗೊಳಸಿದರು.

ಈ ವೇಳೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸದಸ್ಯ ಓಬದೇನಹಳ್ಳಿ ಮುನಿಯಪ್ಪ ಮಾತನಾಡಿ,  21ನೇ ಶತಮಾನದಲ್ಲೂ ಇಂತಹ ಆರೋಪ ಕೇಳಿ ಬರುವುದು ಹಾಗೂ ಅಸ್ಪೃಶ್ಯತೆ ಆಚರಣೆ ಮಾಡುವುದು ವಿಷಾದನೀಯ ವಿಚಾರವಾಗಿದೆ. ಗ್ರಾಮಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸಿದಾಗ, ಗ್ರಾಮದಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿರುವ ಸೋಮು ಎಂಬುವವರು ಯಾವುದೇ ಅಸ್ಪೃಶ್ಯತೆ ಆಚರಣೆ ಮಾಡುತ್ತಿಲ್ಲ. ಆದರೆ ಆರೋಪ ಕೇಳಿ ಬಂದ ದಿನವೇ ಅದೇ ಸಮುದಾಯದ ವ್ಯಕ್ತಿಗೆ ಕ್ಷೌರಿಕೆ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ ಎಂದರು.

ಈ ಬಗ್ಗೆ ಸವಿತ ಸಮಾಜದ ತಾಲೂಕು ಕಾರ್ಯದರ್ಶಿ  ನರಸಿಂಹ ರಾಜು ಮಾತನಾಡಿ, ತಾಲೂಕು ಮಟ್ಟದಲ್ಲಿ  ಸವಿತ ಸಮಾಜದ ಜಾಗೃತಿ ಸಭೆಯನ್ನು ಮುಂದಿನ ದಿನಗಳಲ್ಲಿ ಆಯೋಜಿಸಿ ಯಾವುದೇ ತಾರತಮ್ಯ  ಮಾಡಬಾರದೆಂಬ ಜಾಗೃತಿ ಸಭೆಯನ್ನು ಏರ್ಪಡಿಸಲಾಗುವುದು ಹಾಗೂ ತಾಲೂಕಿನಲ್ಲಿ ಇದುವರೆಗೂ ಯಾವುದೇ ಈ ತರಹದ ಪ್ರಕರಣಗಳು ಕಂಡುಬಂದಿಲ್ಲ  ಇನ್ನು ಮುಂದೆ ಯಾವುದೇ ತಾರತಮ್ಯವಾಗದಂತೆ  ಬುದ್ಧಿವಾದ ಹೇಳಿದ್ದೇವೆ ಎಂದು ತಿಳಿಸಿದರು.

ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಓಬಳೇಶ್, ಪೋಲಿಸ್ ಸಿಬ್ಬಂದಿ ಸುರೇಶ್, ಪಿಡಿಒ  ಸೂರ್ಯನಾರಾಯಣ್, ಸವಿತಾ ಸಮಾಜದ  ಮುಖಂಡರಾದ ರಾಮಂಜಿನೇಯ ಶ್ರೀನಾಥ್  ಉಪಸ್ಥಿತರಿದ್ದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

21 minutes ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

8 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

9 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago