ದಲಿತರ ಕ್ಷೌರಕ್ಕೆ ನಿರಾಕರಣೆ ಆರೋಪ: ಗ್ರಾಮಕ್ಕೆ ಅಧಿಕಾರಿಗಳು ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸದಸ್ಯ ಭೇಟಿ ಪರಿಶೀಲನೆ: ಪ್ರಕರಣ ಇತ್ಯರ್ಥ

ತಾಲೂಕಿನ ಕಾಡನೂರು ಗ್ರಾಮದಲ್ಲಿ ದಲಿತರಿಗೆ ಕ್ಷೌರ ನಿರಾಕರಣೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸದಸ್ಯ ಓಬದೇನಹಳ್ಳಿ ಮುನಿಯಪ್ಪ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ಷೌರ ನಿರಾಕರಣೆ ಆರೋಪವನ್ನು ಇತ್ಯರ್ಥಗೊಳಸಿದರು.

ಈ ವೇಳೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸದಸ್ಯ ಓಬದೇನಹಳ್ಳಿ ಮುನಿಯಪ್ಪ ಮಾತನಾಡಿ,  21ನೇ ಶತಮಾನದಲ್ಲೂ ಇಂತಹ ಆರೋಪ ಕೇಳಿ ಬರುವುದು ಹಾಗೂ ಅಸ್ಪೃಶ್ಯತೆ ಆಚರಣೆ ಮಾಡುವುದು ವಿಷಾದನೀಯ ವಿಚಾರವಾಗಿದೆ. ಗ್ರಾಮಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸಿದಾಗ, ಗ್ರಾಮದಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿರುವ ಸೋಮು ಎಂಬುವವರು ಯಾವುದೇ ಅಸ್ಪೃಶ್ಯತೆ ಆಚರಣೆ ಮಾಡುತ್ತಿಲ್ಲ. ಆದರೆ ಆರೋಪ ಕೇಳಿ ಬಂದ ದಿನವೇ ಅದೇ ಸಮುದಾಯದ ವ್ಯಕ್ತಿಗೆ ಕ್ಷೌರಿಕೆ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ ಎಂದರು.

ಈ ಬಗ್ಗೆ ಸವಿತ ಸಮಾಜದ ತಾಲೂಕು ಕಾರ್ಯದರ್ಶಿ  ನರಸಿಂಹ ರಾಜು ಮಾತನಾಡಿ, ತಾಲೂಕು ಮಟ್ಟದಲ್ಲಿ  ಸವಿತ ಸಮಾಜದ ಜಾಗೃತಿ ಸಭೆಯನ್ನು ಮುಂದಿನ ದಿನಗಳಲ್ಲಿ ಆಯೋಜಿಸಿ ಯಾವುದೇ ತಾರತಮ್ಯ  ಮಾಡಬಾರದೆಂಬ ಜಾಗೃತಿ ಸಭೆಯನ್ನು ಏರ್ಪಡಿಸಲಾಗುವುದು ಹಾಗೂ ತಾಲೂಕಿನಲ್ಲಿ ಇದುವರೆಗೂ ಯಾವುದೇ ಈ ತರಹದ ಪ್ರಕರಣಗಳು ಕಂಡುಬಂದಿಲ್ಲ  ಇನ್ನು ಮುಂದೆ ಯಾವುದೇ ತಾರತಮ್ಯವಾಗದಂತೆ  ಬುದ್ಧಿವಾದ ಹೇಳಿದ್ದೇವೆ ಎಂದು ತಿಳಿಸಿದರು.

ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಓಬಳೇಶ್, ಪೋಲಿಸ್ ಸಿಬ್ಬಂದಿ ಸುರೇಶ್, ಪಿಡಿಒ  ಸೂರ್ಯನಾರಾಯಣ್, ಸವಿತಾ ಸಮಾಜದ  ಮುಖಂಡರಾದ ರಾಮಂಜಿನೇಯ ಶ್ರೀನಾಥ್  ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

15 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago