ಖತರ್ನಾಕ್ ಚಿನ್ನಾಭರಣ ಕಳ್ಳನ ಬಂಧನ: ಆರೋಪಿಯಿಂದ 25 ಲಕ್ಷ ರೂ. ಮೌಲ್ಯದ 531 ಗ್ರಾಂ ಚಿನ್ನದ ಒಡವೆ ವಶ

ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಡೆದ ಮನೆಗಳ್ಳತನದ ಆರೋಪಿಯನ್ನು ಇನ್ಸ್ಪೆಕ್ಟರ್ ಶಶಿಧರ್ ರವರ ನೇತೃತ್ವದಲ್ಲಿ ಬಂಧಿಸಿ, ಆತನಿಂದ ಸುಮಾರು 25 ಲಕ್ಷ ರೂ ಮೌಲ್ಯದ 531 ಗ್ರಾಂ ಚಿನ್ನದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದಿರುವುದನ್ನೇ ಗಮನಿಸಿ ಅಂತಹ ಮನೆಗಳಿಗೆ ಎಂಟ್ರಿ ಕೊಟ್ಟು ಕ್ಷಣಾರ್ಧದಲ್ಲೇ ಚಿನ್ನಾಭರಣ ದೋಚಿ ಆರೋಪಿ ಎಸ್ಕೇಪ್ ಆಗುತ್ತಿದ್ದ.

ಮನೆಕಳ್ಳತನ ಪ್ರಕರಣ ತನಿಖೆ ಜಾಡು ಹಿಡಿದ ನೆಲಮಂಗಲ ಟೌನ್ ಇನ್ಸ್ಪೆಕ್ಟರ್ SD ಶಶಿಧರ್ ಹಾಗೂ ತಂಡ ಕೋಲಾರದ ಬಂಗಾರಪೇಟೆ ಮೂಲದ 39 ವರ್ಷದ ಸೈಯ್ಯದ್ ಅಹಮದ್ ಬಿನ್ ಅಬ್ದುಲ್ ಜಬ್ಬರ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ಅರೋಪಿಯಿಂದ 25 ಲಕ್ಷ ರೂಪಾಯಿ ಮೌಲ್ಯದ 531 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ವಶಪಡಿಸಿಕೊಂಡು ಬೆಂಗಳೂರು ಗ್ರಾಮಾಂತರ SP ಮಲ್ಲಿಕಾರ್ಜುನ ಬಾಲದಂಡಿ ಹಾಗೂ ನೆಲಮಂಗಲ ಉಪವಿಭಾಗದ ಡಿವೈಎಸ್ಪಿ ಜಗದೀಶ್, ಇನ್ಸ್ಪೆಕ್ಟರ್ SD ಶಶಿಧರ್ ಮತ್ತು ತಂಡ ವಾರಸುದಾರರಿಗೆ ಹಿಂತಿರುಗಿಸಿದರು.

ಬಂಧಿತ ಆರೋಪಿ ಮೇಲೆ ಈಗಾಗಲೇ ನೆಲಮಂಗಲ ಟೌನ್, ನೆಲಮಂಗಲ ಗ್ರಾಮಾಂತರ, ಮೈಕೋ ಲೇಔಟ್, ಮಾದನಾಯಕನಹಳ್ಳಿ, ತುಮಕೂರು, ಕ್ಯಾತ್ಸಂದ್ರ, ಸಿಟಿ ಮಾರ್ಕೆಟ್ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ 45ಕ್ಕೂ ಅಧಿಕ ಮನೆಗಳ್ಳತನ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

3 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

13 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

15 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

17 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

22 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

1 day ago