ಖತರ್ನಾಕ್ ಚಿನ್ನಾಭರಣ ಕಳ್ಳನ ಬಂಧನ: ಆರೋಪಿಯಿಂದ 25 ಲಕ್ಷ ರೂ. ಮೌಲ್ಯದ 531 ಗ್ರಾಂ ಚಿನ್ನದ ಒಡವೆ ವಶ

ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಡೆದ ಮನೆಗಳ್ಳತನದ ಆರೋಪಿಯನ್ನು ಇನ್ಸ್ಪೆಕ್ಟರ್ ಶಶಿಧರ್ ರವರ ನೇತೃತ್ವದಲ್ಲಿ ಬಂಧಿಸಿ, ಆತನಿಂದ ಸುಮಾರು 25 ಲಕ್ಷ ರೂ ಮೌಲ್ಯದ 531 ಗ್ರಾಂ ಚಿನ್ನದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದಿರುವುದನ್ನೇ ಗಮನಿಸಿ ಅಂತಹ ಮನೆಗಳಿಗೆ ಎಂಟ್ರಿ ಕೊಟ್ಟು ಕ್ಷಣಾರ್ಧದಲ್ಲೇ ಚಿನ್ನಾಭರಣ ದೋಚಿ ಆರೋಪಿ ಎಸ್ಕೇಪ್ ಆಗುತ್ತಿದ್ದ.

ಮನೆಕಳ್ಳತನ ಪ್ರಕರಣ ತನಿಖೆ ಜಾಡು ಹಿಡಿದ ನೆಲಮಂಗಲ ಟೌನ್ ಇನ್ಸ್ಪೆಕ್ಟರ್ SD ಶಶಿಧರ್ ಹಾಗೂ ತಂಡ ಕೋಲಾರದ ಬಂಗಾರಪೇಟೆ ಮೂಲದ 39 ವರ್ಷದ ಸೈಯ್ಯದ್ ಅಹಮದ್ ಬಿನ್ ಅಬ್ದುಲ್ ಜಬ್ಬರ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ಅರೋಪಿಯಿಂದ 25 ಲಕ್ಷ ರೂಪಾಯಿ ಮೌಲ್ಯದ 531 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ವಶಪಡಿಸಿಕೊಂಡು ಬೆಂಗಳೂರು ಗ್ರಾಮಾಂತರ SP ಮಲ್ಲಿಕಾರ್ಜುನ ಬಾಲದಂಡಿ ಹಾಗೂ ನೆಲಮಂಗಲ ಉಪವಿಭಾಗದ ಡಿವೈಎಸ್ಪಿ ಜಗದೀಶ್, ಇನ್ಸ್ಪೆಕ್ಟರ್ SD ಶಶಿಧರ್ ಮತ್ತು ತಂಡ ವಾರಸುದಾರರಿಗೆ ಹಿಂತಿರುಗಿಸಿದರು.

ಬಂಧಿತ ಆರೋಪಿ ಮೇಲೆ ಈಗಾಗಲೇ ನೆಲಮಂಗಲ ಟೌನ್, ನೆಲಮಂಗಲ ಗ್ರಾಮಾಂತರ, ಮೈಕೋ ಲೇಔಟ್, ಮಾದನಾಯಕನಹಳ್ಳಿ, ತುಮಕೂರು, ಕ್ಯಾತ್ಸಂದ್ರ, ಸಿಟಿ ಮಾರ್ಕೆಟ್ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ 45ಕ್ಕೂ ಅಧಿಕ ಮನೆಗಳ್ಳತನ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

2 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

4 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago