ಖತರ್ನಾಕ್ ಚಿನ್ನಾಭರಣ ಕಳ್ಳನ ಬಂಧನ: ಆರೋಪಿಯಿಂದ 25 ಲಕ್ಷ ರೂ. ಮೌಲ್ಯದ 531 ಗ್ರಾಂ ಚಿನ್ನದ ಒಡವೆ ವಶ

ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಡೆದ ಮನೆಗಳ್ಳತನದ ಆರೋಪಿಯನ್ನು ಇನ್ಸ್ಪೆಕ್ಟರ್ ಶಶಿಧರ್ ರವರ ನೇತೃತ್ವದಲ್ಲಿ ಬಂಧಿಸಿ, ಆತನಿಂದ ಸುಮಾರು 25 ಲಕ್ಷ ರೂ ಮೌಲ್ಯದ 531 ಗ್ರಾಂ ಚಿನ್ನದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದಿರುವುದನ್ನೇ ಗಮನಿಸಿ ಅಂತಹ ಮನೆಗಳಿಗೆ ಎಂಟ್ರಿ ಕೊಟ್ಟು ಕ್ಷಣಾರ್ಧದಲ್ಲೇ ಚಿನ್ನಾಭರಣ ದೋಚಿ ಆರೋಪಿ ಎಸ್ಕೇಪ್ ಆಗುತ್ತಿದ್ದ.

ಮನೆಕಳ್ಳತನ ಪ್ರಕರಣ ತನಿಖೆ ಜಾಡು ಹಿಡಿದ ನೆಲಮಂಗಲ ಟೌನ್ ಇನ್ಸ್ಪೆಕ್ಟರ್ SD ಶಶಿಧರ್ ಹಾಗೂ ತಂಡ ಕೋಲಾರದ ಬಂಗಾರಪೇಟೆ ಮೂಲದ 39 ವರ್ಷದ ಸೈಯ್ಯದ್ ಅಹಮದ್ ಬಿನ್ ಅಬ್ದುಲ್ ಜಬ್ಬರ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ಅರೋಪಿಯಿಂದ 25 ಲಕ್ಷ ರೂಪಾಯಿ ಮೌಲ್ಯದ 531 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ವಶಪಡಿಸಿಕೊಂಡು ಬೆಂಗಳೂರು ಗ್ರಾಮಾಂತರ SP ಮಲ್ಲಿಕಾರ್ಜುನ ಬಾಲದಂಡಿ ಹಾಗೂ ನೆಲಮಂಗಲ ಉಪವಿಭಾಗದ ಡಿವೈಎಸ್ಪಿ ಜಗದೀಶ್, ಇನ್ಸ್ಪೆಕ್ಟರ್ SD ಶಶಿಧರ್ ಮತ್ತು ತಂಡ ವಾರಸುದಾರರಿಗೆ ಹಿಂತಿರುಗಿಸಿದರು.

ಬಂಧಿತ ಆರೋಪಿ ಮೇಲೆ ಈಗಾಗಲೇ ನೆಲಮಂಗಲ ಟೌನ್, ನೆಲಮಂಗಲ ಗ್ರಾಮಾಂತರ, ಮೈಕೋ ಲೇಔಟ್, ಮಾದನಾಯಕನಹಳ್ಳಿ, ತುಮಕೂರು, ಕ್ಯಾತ್ಸಂದ್ರ, ಸಿಟಿ ಮಾರ್ಕೆಟ್ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ 45ಕ್ಕೂ ಅಧಿಕ ಮನೆಗಳ್ಳತನ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

2 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

15 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

17 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

17 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

18 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

22 hours ago