ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ ಸುಮಾರು 11,60,511 ರೂ. ಬೆಲೆ ಬಾಳುವ 42 ದ್ವಿಚಕ್ರ ವಾಹನಗಳು ಜಪ್ತಿ ಮಾಡಲಾಗಿದೆ.
ಕ್ಯಾತ್ಸಂದ್ರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಬೈಕುಗಳು ಕಳ್ಳತನವಾಗುತ್ತಿದ್ದ ಬಗ್ಗೆ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳ ಸಂಬಂಧಪಟ್ಟ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು.
ಶಿಡ್ಲಘಟ್ಟ ಮೂಲದ ಆರೋಪಿ ಮುಭಾರಕ್ ಖಾನ್ @ ಮಟನ್ ಮುಭಾರಕ್ ಬಿನ್ ಮುಸ್ತಫಾ ಎಂಬಾತನನ್ನು ಬಂಧಿಸಲಾಗಿದೆ.
ಆರೋಪಿಯು ಕ್ಯಾತ್ಸಂದ್ರ ಪೊಲೀಸ್ ಠಾಣೆಯ-02. ತುಮಕೂರು ನಗರ ಪೊಲೀಸ್ ಠಾಣೆಯ-03, ಶ್ರೀನಿವಾಸಪುರ ಠಾಣೆಯ-02. ಆಂಧ್ರಪ್ರದೇಶದ ಕುಪ್ಪಂ ಪೊಲೀಸ್ ಠಾಣೆಯ-01, ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣೆಯ-01. ಯಲಹಂಕ ಪೊಲೀಸ್ ಠಾಣೆಯ-01. ಬಾಗೇಪಲ್ಲಿ ಪೊಲೀಸ್ ಠಾಣೆಯ-01, ಪಾವಗಡ ಪೊಲೀಸ್ ಠಾಣೆಯ-01, ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯ-01, ನೆಲಮಂಗಲ ಪೊಲೀಸ್ ಠಾಣೆಯ-01 ಮತ್ತು ಬೆಂಗಳೂರು ರೈಲ್ವೆ ಪೊಲೀಸ್ ಠಾಣೆಯ-01 ಮತ್ತು ಇತರೆ ಪ್ರಕರಣಗಳು ದಾಖಲಾಗದೇ ಇರುವ ದ್ವಿಚಕ್ರ ವಾಹನಗಳು-27 ಒಟ್ಟು 42 ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುತ್ತಾನೆ ಎಂದು ತಿಳಿದುಬಂದಿದ್ದು, ಕೂಡಲೇ 11,60,511 ಮೌಲ್ಯದ 42ಬೈಕ್ ಗಳನ್ನು ವಶಪಡಿಸಿಕೊಳ್ಳಾಗಿದೆ.
ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ವಿ.ಮರಿಯಪ್ಪ ಮತ್ತು ಅಬ್ದುಲ್ ಖಾದರ್ ಬಿ.ಎಸ್. ರವರ ಮಾರ್ಗದರ್ಶನದಲ್ಲಿ ಆರೋಪಿಗಳ ಪತ್ತೆಗಾಗಿ ಶ್ರಮಿಸಿದ ಚಂದ್ರಶೇಖರ್, ಡಿ.ವೈ.ಎಸ್.ಪಿ. ತುಮಕೂರು ಉಪವಿಭಾಗ, ರಾಮ ಪ್ರಸಾದ, ಸಿಪಿಐ, ಕ್ಯಾತ್ಸಂದ್ರ ವೃತ್ತ. ಚೇತನ್ ಕುಮಾರ್, ಎಸ್.ಎಸ್, ಪಿ.ಎಸ್.ಐ. ಕ್ಯಾತ್ಸಂದ್ರ ಪೊಲೀಸ್ ಠಾಣೆ ಮತ್ತು ಕ್ಯಾತ್ಸಂದ್ರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ರಮೇಶ್.ಜಿ. ಎ.ಎಸ್.ಐ. ಸೌಭಾಗ್ಯಮ್ಮ ಮ.ಹೆಚ್.ಸಿ, ಹನುಮರಂಗಯ್ಯ, ಹೆಚ್.ಸಿ, ಶಶಿಧರ ಹೆಚ್.ಸಿ, ಮಹೇಶ್. ಹೆಚ್.ಸಿ. ಗಿರೀಶ್ ಸಿಪಿಸಿ, ಶರಣಪ್ಪ ಸಿಪಿಸಿ, ನದೀಂಪಾಷ ಸಿಪಿಸಿ, ಸಂತೋಷ್ ಸಿಪಿಸಿ ಇವರುಗಳ ತಂಡವನ್ನು ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರವರು ಅಭಿನಂದಿಸಿರುತ್ತಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…