ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ ಸುಮಾರು 11,60,511 ರೂ. ಬೆಲೆ ಬಾಳುವ 42 ದ್ವಿಚಕ್ರ ವಾಹನಗಳು ಜಪ್ತಿ ಮಾಡಲಾಗಿದೆ.
ಕ್ಯಾತ್ಸಂದ್ರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಬೈಕುಗಳು ಕಳ್ಳತನವಾಗುತ್ತಿದ್ದ ಬಗ್ಗೆ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳ ಸಂಬಂಧಪಟ್ಟ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು.
ಶಿಡ್ಲಘಟ್ಟ ಮೂಲದ ಆರೋಪಿ ಮುಭಾರಕ್ ಖಾನ್ @ ಮಟನ್ ಮುಭಾರಕ್ ಬಿನ್ ಮುಸ್ತಫಾ ಎಂಬಾತನನ್ನು ಬಂಧಿಸಲಾಗಿದೆ.
ಆರೋಪಿಯು ಕ್ಯಾತ್ಸಂದ್ರ ಪೊಲೀಸ್ ಠಾಣೆಯ-02. ತುಮಕೂರು ನಗರ ಪೊಲೀಸ್ ಠಾಣೆಯ-03, ಶ್ರೀನಿವಾಸಪುರ ಠಾಣೆಯ-02. ಆಂಧ್ರಪ್ರದೇಶದ ಕುಪ್ಪಂ ಪೊಲೀಸ್ ಠಾಣೆಯ-01, ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣೆಯ-01. ಯಲಹಂಕ ಪೊಲೀಸ್ ಠಾಣೆಯ-01. ಬಾಗೇಪಲ್ಲಿ ಪೊಲೀಸ್ ಠಾಣೆಯ-01, ಪಾವಗಡ ಪೊಲೀಸ್ ಠಾಣೆಯ-01, ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯ-01, ನೆಲಮಂಗಲ ಪೊಲೀಸ್ ಠಾಣೆಯ-01 ಮತ್ತು ಬೆಂಗಳೂರು ರೈಲ್ವೆ ಪೊಲೀಸ್ ಠಾಣೆಯ-01 ಮತ್ತು ಇತರೆ ಪ್ರಕರಣಗಳು ದಾಖಲಾಗದೇ ಇರುವ ದ್ವಿಚಕ್ರ ವಾಹನಗಳು-27 ಒಟ್ಟು 42 ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುತ್ತಾನೆ ಎಂದು ತಿಳಿದುಬಂದಿದ್ದು, ಕೂಡಲೇ 11,60,511 ಮೌಲ್ಯದ 42ಬೈಕ್ ಗಳನ್ನು ವಶಪಡಿಸಿಕೊಳ್ಳಾಗಿದೆ.
ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ವಿ.ಮರಿಯಪ್ಪ ಮತ್ತು ಅಬ್ದುಲ್ ಖಾದರ್ ಬಿ.ಎಸ್. ರವರ ಮಾರ್ಗದರ್ಶನದಲ್ಲಿ ಆರೋಪಿಗಳ ಪತ್ತೆಗಾಗಿ ಶ್ರಮಿಸಿದ ಚಂದ್ರಶೇಖರ್, ಡಿ.ವೈ.ಎಸ್.ಪಿ. ತುಮಕೂರು ಉಪವಿಭಾಗ, ರಾಮ ಪ್ರಸಾದ, ಸಿಪಿಐ, ಕ್ಯಾತ್ಸಂದ್ರ ವೃತ್ತ. ಚೇತನ್ ಕುಮಾರ್, ಎಸ್.ಎಸ್, ಪಿ.ಎಸ್.ಐ. ಕ್ಯಾತ್ಸಂದ್ರ ಪೊಲೀಸ್ ಠಾಣೆ ಮತ್ತು ಕ್ಯಾತ್ಸಂದ್ರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ರಮೇಶ್.ಜಿ. ಎ.ಎಸ್.ಐ. ಸೌಭಾಗ್ಯಮ್ಮ ಮ.ಹೆಚ್.ಸಿ, ಹನುಮರಂಗಯ್ಯ, ಹೆಚ್.ಸಿ, ಶಶಿಧರ ಹೆಚ್.ಸಿ, ಮಹೇಶ್. ಹೆಚ್.ಸಿ. ಗಿರೀಶ್ ಸಿಪಿಸಿ, ಶರಣಪ್ಪ ಸಿಪಿಸಿ, ನದೀಂಪಾಷ ಸಿಪಿಸಿ, ಸಂತೋಷ್ ಸಿಪಿಸಿ ಇವರುಗಳ ತಂಡವನ್ನು ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರವರು ಅಭಿನಂದಿಸಿರುತ್ತಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…