Categories: ತುಮಕೂರು

ಖತರ್ನಾಕ್ ಬೈಕ್ ಚೋರ ಅರೆಸ್ಟ್: ಬಂಧಿತನಿಂದ 11,60,511 ರೂ. ಬೆಲೆ ಬಾಳುವ 42 ದ್ವಿಚಕ್ರ ವಾಹನಗಳ ಜಪ್ತಿ

ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧಿಸಲಾಗಿದೆ.‌ ಬಂಧಿತ ಆರೋಪಿಯಿಂದ ಸುಮಾರು 11,60,511 ರೂ. ಬೆಲೆ ಬಾಳುವ 42 ದ್ವಿಚಕ್ರ ವಾಹನಗಳು ಜಪ್ತಿ ಮಾಡಲಾಗಿದೆ.

ಕ್ಯಾತ್ಸಂದ್ರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಬೈಕುಗಳು ಕಳ್ಳತನವಾಗುತ್ತಿದ್ದ ಬಗ್ಗೆ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳ  ಸಂಬಂಧಪಟ್ಟ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು.

ಶಿಡ್ಲಘಟ್ಟ ಮೂಲದ ಆರೋಪಿ ಮುಭಾರಕ್ ಖಾನ್ @ ಮಟನ್ ಮುಭಾರಕ್ ಬಿನ್ ಮುಸ್ತಫಾ ಎಂಬಾತನನ್ನು ಬಂಧಿಸಲಾಗಿದೆ.

ಆರೋಪಿಯು ಕ್ಯಾತ್ಸಂದ್ರ ಪೊಲೀಸ್ ಠಾಣೆಯ-02. ತುಮಕೂರು ನಗರ ಪೊಲೀಸ್ ಠಾಣೆಯ-03, ಶ್ರೀನಿವಾಸಪುರ ಠಾಣೆಯ-02. ಆಂಧ್ರಪ್ರದೇಶದ ಕುಪ್ಪಂ ಪೊಲೀಸ್ ಠಾಣೆಯ-01, ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣೆಯ-01. ಯಲಹಂಕ ಪೊಲೀಸ್ ಠಾಣೆಯ-01. ಬಾಗೇಪಲ್ಲಿ ಪೊಲೀಸ್ ಠಾಣೆಯ-01, ಪಾವಗಡ ಪೊಲೀಸ್ ಠಾಣೆಯ-01, ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯ-01, ನೆಲಮಂಗಲ ಪೊಲೀಸ್ ಠಾಣೆಯ-01 ಮತ್ತು ಬೆಂಗಳೂರು ರೈಲ್ವೆ ಪೊಲೀಸ್ ಠಾಣೆಯ-01 ಮತ್ತು ಇತರೆ ಪ್ರಕರಣಗಳು ದಾಖಲಾಗದೇ ಇರುವ ದ್ವಿಚಕ್ರ ವಾಹನಗಳು-27 ಒಟ್ಟು 42 ದ್ವಿಚಕ್ರ ವಾಹನಗಳನ್ನು‌ ಕಳವು ಮಾಡಿರುತ್ತಾನೆ ಎಂದು ತಿಳಿದುಬಂದಿದ್ದು, ಕೂಡಲೇ 11,60,511‌ ಮೌಲ್ಯದ 42ಬೈಕ್ ಗಳನ್ನು ವಶಪಡಿಸಿಕೊಳ್ಳಾಗಿದೆ.

ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ವಿ.ಮರಿಯಪ್ಪ ಮತ್ತು ಅಬ್ದುಲ್ ಖಾದರ್ ಬಿ.ಎಸ್. ರವರ ಮಾರ್ಗದರ್ಶನದಲ್ಲಿ ಆರೋಪಿಗಳ ಪತ್ತೆಗಾಗಿ ಶ್ರಮಿಸಿದ ಚಂದ್ರಶೇಖರ್, ಡಿ.ವೈ.ಎಸ್.ಪಿ. ತುಮಕೂರು ಉಪವಿಭಾಗ, ರಾಮ ಪ್ರಸಾದ, ಸಿಪಿಐ, ಕ್ಯಾತ್ಸಂದ್ರ ವೃತ್ತ. ಚೇತನ್ ಕುಮಾರ್, ಎಸ್.ಎಸ್, ಪಿ.ಎಸ್.ಐ. ಕ್ಯಾತ್ಸಂದ್ರ ಪೊಲೀಸ್ ಠಾಣೆ ಮತ್ತು ಕ್ಯಾತ್ಸಂದ್ರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ರಮೇಶ್.ಜಿ. ಎ.ಎಸ್.ಐ. ಸೌಭಾಗ್ಯಮ್ಮ ಮ.ಹೆಚ್.ಸಿ, ಹನುಮರಂಗಯ್ಯ, ಹೆಚ್.ಸಿ, ಶಶಿಧರ ಹೆಚ್.ಸಿ, ಮಹೇಶ್. ಹೆಚ್.ಸಿ. ಗಿರೀಶ್ ಸಿಪಿಸಿ, ಶರಣಪ್ಪ ಸಿಪಿಸಿ, ನದೀಂಪಾಷ ಸಿಪಿಸಿ, ಸಂತೋಷ್ ಸಿಪಿಸಿ ಇವರುಗಳ ತಂಡವನ್ನು ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರವರು ಅಭಿನಂದಿಸಿರುತ್ತಾರೆ.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

4 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

4 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

5 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

6 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

7 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

11 hours ago