Categories: ತುಮಕೂರು

ಖತರ್ನಾಕ್ ಬೈಕ್ ಚೋರ ಅರೆಸ್ಟ್: ಬಂಧಿತನಿಂದ 11,60,511 ರೂ. ಬೆಲೆ ಬಾಳುವ 42 ದ್ವಿಚಕ್ರ ವಾಹನಗಳ ಜಪ್ತಿ

ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧಿಸಲಾಗಿದೆ.‌ ಬಂಧಿತ ಆರೋಪಿಯಿಂದ ಸುಮಾರು 11,60,511 ರೂ. ಬೆಲೆ ಬಾಳುವ 42 ದ್ವಿಚಕ್ರ ವಾಹನಗಳು ಜಪ್ತಿ ಮಾಡಲಾಗಿದೆ.

ಕ್ಯಾತ್ಸಂದ್ರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಬೈಕುಗಳು ಕಳ್ಳತನವಾಗುತ್ತಿದ್ದ ಬಗ್ಗೆ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳ  ಸಂಬಂಧಪಟ್ಟ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು.

ಶಿಡ್ಲಘಟ್ಟ ಮೂಲದ ಆರೋಪಿ ಮುಭಾರಕ್ ಖಾನ್ @ ಮಟನ್ ಮುಭಾರಕ್ ಬಿನ್ ಮುಸ್ತಫಾ ಎಂಬಾತನನ್ನು ಬಂಧಿಸಲಾಗಿದೆ.

ಆರೋಪಿಯು ಕ್ಯಾತ್ಸಂದ್ರ ಪೊಲೀಸ್ ಠಾಣೆಯ-02. ತುಮಕೂರು ನಗರ ಪೊಲೀಸ್ ಠಾಣೆಯ-03, ಶ್ರೀನಿವಾಸಪುರ ಠಾಣೆಯ-02. ಆಂಧ್ರಪ್ರದೇಶದ ಕುಪ್ಪಂ ಪೊಲೀಸ್ ಠಾಣೆಯ-01, ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣೆಯ-01. ಯಲಹಂಕ ಪೊಲೀಸ್ ಠಾಣೆಯ-01. ಬಾಗೇಪಲ್ಲಿ ಪೊಲೀಸ್ ಠಾಣೆಯ-01, ಪಾವಗಡ ಪೊಲೀಸ್ ಠಾಣೆಯ-01, ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯ-01, ನೆಲಮಂಗಲ ಪೊಲೀಸ್ ಠಾಣೆಯ-01 ಮತ್ತು ಬೆಂಗಳೂರು ರೈಲ್ವೆ ಪೊಲೀಸ್ ಠಾಣೆಯ-01 ಮತ್ತು ಇತರೆ ಪ್ರಕರಣಗಳು ದಾಖಲಾಗದೇ ಇರುವ ದ್ವಿಚಕ್ರ ವಾಹನಗಳು-27 ಒಟ್ಟು 42 ದ್ವಿಚಕ್ರ ವಾಹನಗಳನ್ನು‌ ಕಳವು ಮಾಡಿರುತ್ತಾನೆ ಎಂದು ತಿಳಿದುಬಂದಿದ್ದು, ಕೂಡಲೇ 11,60,511‌ ಮೌಲ್ಯದ 42ಬೈಕ್ ಗಳನ್ನು ವಶಪಡಿಸಿಕೊಳ್ಳಾಗಿದೆ.

ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ವಿ.ಮರಿಯಪ್ಪ ಮತ್ತು ಅಬ್ದುಲ್ ಖಾದರ್ ಬಿ.ಎಸ್. ರವರ ಮಾರ್ಗದರ್ಶನದಲ್ಲಿ ಆರೋಪಿಗಳ ಪತ್ತೆಗಾಗಿ ಶ್ರಮಿಸಿದ ಚಂದ್ರಶೇಖರ್, ಡಿ.ವೈ.ಎಸ್.ಪಿ. ತುಮಕೂರು ಉಪವಿಭಾಗ, ರಾಮ ಪ್ರಸಾದ, ಸಿಪಿಐ, ಕ್ಯಾತ್ಸಂದ್ರ ವೃತ್ತ. ಚೇತನ್ ಕುಮಾರ್, ಎಸ್.ಎಸ್, ಪಿ.ಎಸ್.ಐ. ಕ್ಯಾತ್ಸಂದ್ರ ಪೊಲೀಸ್ ಠಾಣೆ ಮತ್ತು ಕ್ಯಾತ್ಸಂದ್ರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ರಮೇಶ್.ಜಿ. ಎ.ಎಸ್.ಐ. ಸೌಭಾಗ್ಯಮ್ಮ ಮ.ಹೆಚ್.ಸಿ, ಹನುಮರಂಗಯ್ಯ, ಹೆಚ್.ಸಿ, ಶಶಿಧರ ಹೆಚ್.ಸಿ, ಮಹೇಶ್. ಹೆಚ್.ಸಿ. ಗಿರೀಶ್ ಸಿಪಿಸಿ, ಶರಣಪ್ಪ ಸಿಪಿಸಿ, ನದೀಂಪಾಷ ಸಿಪಿಸಿ, ಸಂತೋಷ್ ಸಿಪಿಸಿ ಇವರುಗಳ ತಂಡವನ್ನು ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರವರು ಅಭಿನಂದಿಸಿರುತ್ತಾರೆ.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

16 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago