ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ ಸುಮಾರು 11,60,511 ರೂ. ಬೆಲೆ ಬಾಳುವ 42 ದ್ವಿಚಕ್ರ ವಾಹನಗಳು ಜಪ್ತಿ ಮಾಡಲಾಗಿದೆ.
ಕ್ಯಾತ್ಸಂದ್ರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಬೈಕುಗಳು ಕಳ್ಳತನವಾಗುತ್ತಿದ್ದ ಬಗ್ಗೆ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳ ಸಂಬಂಧಪಟ್ಟ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು.
ಶಿಡ್ಲಘಟ್ಟ ಮೂಲದ ಆರೋಪಿ ಮುಭಾರಕ್ ಖಾನ್ @ ಮಟನ್ ಮುಭಾರಕ್ ಬಿನ್ ಮುಸ್ತಫಾ ಎಂಬಾತನನ್ನು ಬಂಧಿಸಲಾಗಿದೆ.
ಆರೋಪಿಯು ಕ್ಯಾತ್ಸಂದ್ರ ಪೊಲೀಸ್ ಠಾಣೆಯ-02. ತುಮಕೂರು ನಗರ ಪೊಲೀಸ್ ಠಾಣೆಯ-03, ಶ್ರೀನಿವಾಸಪುರ ಠಾಣೆಯ-02. ಆಂಧ್ರಪ್ರದೇಶದ ಕುಪ್ಪಂ ಪೊಲೀಸ್ ಠಾಣೆಯ-01, ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣೆಯ-01. ಯಲಹಂಕ ಪೊಲೀಸ್ ಠಾಣೆಯ-01. ಬಾಗೇಪಲ್ಲಿ ಪೊಲೀಸ್ ಠಾಣೆಯ-01, ಪಾವಗಡ ಪೊಲೀಸ್ ಠಾಣೆಯ-01, ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯ-01, ನೆಲಮಂಗಲ ಪೊಲೀಸ್ ಠಾಣೆಯ-01 ಮತ್ತು ಬೆಂಗಳೂರು ರೈಲ್ವೆ ಪೊಲೀಸ್ ಠಾಣೆಯ-01 ಮತ್ತು ಇತರೆ ಪ್ರಕರಣಗಳು ದಾಖಲಾಗದೇ ಇರುವ ದ್ವಿಚಕ್ರ ವಾಹನಗಳು-27 ಒಟ್ಟು 42 ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುತ್ತಾನೆ ಎಂದು ತಿಳಿದುಬಂದಿದ್ದು, ಕೂಡಲೇ 11,60,511 ಮೌಲ್ಯದ 42ಬೈಕ್ ಗಳನ್ನು ವಶಪಡಿಸಿಕೊಳ್ಳಾಗಿದೆ.
ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ವಿ.ಮರಿಯಪ್ಪ ಮತ್ತು ಅಬ್ದುಲ್ ಖಾದರ್ ಬಿ.ಎಸ್. ರವರ ಮಾರ್ಗದರ್ಶನದಲ್ಲಿ ಆರೋಪಿಗಳ ಪತ್ತೆಗಾಗಿ ಶ್ರಮಿಸಿದ ಚಂದ್ರಶೇಖರ್, ಡಿ.ವೈ.ಎಸ್.ಪಿ. ತುಮಕೂರು ಉಪವಿಭಾಗ, ರಾಮ ಪ್ರಸಾದ, ಸಿಪಿಐ, ಕ್ಯಾತ್ಸಂದ್ರ ವೃತ್ತ. ಚೇತನ್ ಕುಮಾರ್, ಎಸ್.ಎಸ್, ಪಿ.ಎಸ್.ಐ. ಕ್ಯಾತ್ಸಂದ್ರ ಪೊಲೀಸ್ ಠಾಣೆ ಮತ್ತು ಕ್ಯಾತ್ಸಂದ್ರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ರಮೇಶ್.ಜಿ. ಎ.ಎಸ್.ಐ. ಸೌಭಾಗ್ಯಮ್ಮ ಮ.ಹೆಚ್.ಸಿ, ಹನುಮರಂಗಯ್ಯ, ಹೆಚ್.ಸಿ, ಶಶಿಧರ ಹೆಚ್.ಸಿ, ಮಹೇಶ್. ಹೆಚ್.ಸಿ. ಗಿರೀಶ್ ಸಿಪಿಸಿ, ಶರಣಪ್ಪ ಸಿಪಿಸಿ, ನದೀಂಪಾಷ ಸಿಪಿಸಿ, ಸಂತೋಷ್ ಸಿಪಿಸಿ ಇವರುಗಳ ತಂಡವನ್ನು ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರವರು ಅಭಿನಂದಿಸಿರುತ್ತಾರೆ.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…