Categories: ಲೇಖನ

ಖರ್ಚು ಮಾಡುವ ಸುಲಭ ಮಾರ್ಗಗಳು, ಸಂಪಾದನೆ ಮಾಡಲು ಕಠಿಣ ಹಾದಿಗಳು……

ಗೌರಿ ಗಣೇಶ ಹಬ್ಬದ ಶುಭಾಶಯಗಳು…….

ಈ ಸಂದರ್ಭದಲ್ಲಿ ನಮ್ಮ ಸಮಾಜದ ವ್ಯಾವಹಾರಿಕ ಜಗತ್ತಿನಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ಒಂದು ಪಕ್ಷಿನೋಟ…….

ಖರ್ಚು ಮಾಡುವ ಸುಲಭ ಮಾರ್ಗಗಳು,
ಸಂಪಾದನೆ ಮಾಡಲು ಕಠಿಣ ಹಾದಿಗಳು……

ಆಧುನಿಕತೆ – ಜಾಗತೀಕರಣದ ಬಹುದೊಡ್ಡ ಪರಿಣಾಮವೆಂದರೆ ಇರುವ ಹಣವನ್ನು ಅತ್ಯಂತ ಸುಲಭವಾಗಿ, ಸುಲಲಿತವಾಗಿ – ಸರಳವಾಗಿ ಕುಳಿತಲ್ಲಿಂದಲೇ ಹೇಗೆ ಬೇಕಾದರೂ, ಯಾರು ಬೇಕಾದರೂ ಹಣ ಖರ್ಚು ಮಾಡಬಹುದು. ನಮಗೆ ಬೇಕಾದ ವಸ್ತುಗಳನ್ನು, ಹೂಡಿಕೆಯನ್ನು, ಪಾವತಿಗಳನ್ನು, ವರ್ಗಾವಣೆಯನ್ನು ಮಾಡಬಹುದು ಮತ್ತು ಕೊಳ್ಳಬಹುದು. ಇದಕ್ಕೆ ಯಾವುದೇ ಶ್ರಮ ಬೇಕಿಲ್ಲ…..

ಒಂದು ಮೊಬೈಲಿನ ಮೂಲಕವೇ ಕೋಟ್ಯಾಂತರ ಹಣ ಖರ್ಚು ಮಾಡಬಹುದು. ಅದಕ್ಕಾಗಿ ಎಲ್ಲಾ ಬಗೆಯ ವೇದಿಕೆ – ಅವಕಾಶ – ಮೂಲ ಸೌಕರ್ಯ ಅಭಿವೃದ್ಧಿ ಪಡಿಸಲಾಗಿದೆ. ಹಣ ನಿಮ್ಮ ಬಳಿ ಇರಬೇಕಷ್ಟೇ…

ಆದರೆ ಅದಕ್ಕೆ ವಿರುದ್ಧವಾಗಿ ಹಣ ಸಂಪಾದನೆಯ ಮಾರ್ಗಗಳ ಬಗ್ಗೆ ಒಮ್ಮೆ ಯೋಚಿಸಿ ನೋಡಿ. ಇಷ್ಟು ಸುಲಭವಾಗಿ, ಸರಳವಾಗಿ, ಯಾವುದೇ ಒತ್ತಡವಿಲ್ಲದೇ ಹಣವನ್ನು ಸಂಪಾದನೆ ಮಾಡಲು ಸಾಧ್ಯವೇ. ಹೌದು ಕೆಲವು ಅಪರೂಪದ ಜೂಜಿನಂತ ಸ್ವಲ್ಪ ಅಪಾಯಕಾರಿ ಟ್ರೇಡಿಂಗ್ ನಂತಹ ವ್ಯವಹಾರ ಹೊರತುಪಡಿಸಿ ಇತರೇ ವ್ಯಾಪಾರ ವಹಿವಾಟು ಮಾಡಲು ಸಾಧ್ಯವೇ…..

ಬಹುಶಃ ಇಂದು ನಮ್ಮೆಲ್ಲರ ಬಹುದೊಡ್ಡ ಸವಾಲು ಇದೇ ಆಗಿದೆ. ಸಂಪಾದನೆ ಮತ್ತು ಲಾಭಗಳು ಕಡಿಮೆಯಾಗುತ್ತಾ, ಖರ್ಚುಗಳು ಹೆಚ್ಚಾಗುತ್ತಾ ಅವುಗಳ ನಡುವೆ ಹೊಂದಾಣಿಕೆ ಸಾಧ್ಯವಾಗುತ್ತಿಲ್ಲ. ಇದು ದಿನೇ ದಿನೇ ಅಧಿಕವಾಗುತ್ತಿದೆ…..

ಹಾಗೇ ಒಮ್ಮೆ 30 ವರ್ಷಗಳ ಹಿಂದಿನ ಜನಜೀವನದ ಬಗ್ಗೆ ಯೋಚಿಸಿ. ಮೊಬೈಲ್ ಇರಲಿಲ್ಲ. ಅದರ ಖರ್ಚು ಸಂಪೂರ್ಣ ಉಳಿತಾಯ. ಇಂದು ಅದು ಅನಿವಾರ್ಯ. ಟಿವಿ ಪ್ರಸಾರ ಉಚಿತವಾಗಿತ್ತು. ಬಟ್ಟೆಗಳು ಹಬ್ಬದ ಸಂದರ್ಭದಲ್ಲಿ ಮಾತ್ರ. ಸರ್ಕಾರಿ ಶಾಲೆಗಳಲ್ಲಿ ಅತ್ಯಂತ ಕಡಿಮೆ ದುಡ್ಡು. ಸಾಮಾನ್ಯ ಖಾಯಿಲೆಗೆ ಸರ್ಕಾರಿ ಆಸ್ಪತ್ರೆಗಳೇ ಸಾಕಾಗಿದ್ದವು. ನೀರಿಗೆ ಬಿಲ್ ಇರಲಿಲ್ಲ. ಹುಟ್ಟಿದ ಹಬ್ಬ, ಮದುವೆ ವಾರ್ಷಿಕೋತ್ಸವದ ನೆನಪುಗಳೇ ಇರುತ್ತಿರಲಿಲ್ಲ. ಮನೆಯ ಊಟವೇ ಹೆಚ್ಚು. ಹೋಟೆಲ್ ಮತ್ತು ಇತರ ಬೀದಿ ಬದಿಯ ತಿಂಡಿಗಳು ಅಪರೂಪ. ಫ್ರಿಡ್ಜ್, ವಾಶಿಂಗ್ ಮಿಷಿನ್, ವ್ಯಾಕ್ಯೂಮ್ ಕ್ಲೀನರ್ ಮುಂತಾದವುಗಳ ಅವಶ್ಯಕತೆಯೇ ಇರಲಿಲ್ಲ. ಹೀಗೇ ದಿನೇ ದಿನೇ ನಮ್ಮ ಅವಶ್ಯಕತೆಗಳು ಹೆಚ್ಚಾಗುತ್ತಲೇ ಇವೆ ಮತ್ತು ಅದನ್ನು ಮನೆ ಬಾಗಿಲಿಗೆ ಸಾಲದ ರೂಪದಲ್ಲಿ ಬಡ್ಡಿಗೆ ಪೂರೈಸಲಾಗುತ್ತದೆ……

ಆದರೆ ಸರ್ಕಾರಿ ಅಧಿಕಾರಿಗಳು ಮತ್ತು ಕೆಲವೇ ನಿರ್ದಿಷ್ಟ ಕ್ಷೇತ್ರಗಳನ್ನು ಹೊರತುಪಡಿಸಿ ಬಹುತೇಕ ಮಧ್ಯಮ ವರ್ಗದ ಜನರ ವ್ಯಾಪಾರ ವಹಿವಾಟುಗಳ ಲಾಭದ ಪ್ರಮಾಣದಲ್ಲಿ, ಸ್ಪರ್ಧೆಯ ಕಾರಣದಿಂದಾಗಿ ಕಡಿಮೆ ಆಗುತ್ತಲೇ ಇದೆ. ಜೊತೆಗೆ ಬೇರೆ ಬೇರೆ ಅನಿವಾರ್ಯ ಖರ್ಚುಗಳು ಅದಕ್ಕೆ ಜೊತೆಯಾಗುತ್ತಿದೆ…..

ಹೊರ ಹೋಗುವುದು ದೊಡ್ಡ ಪ್ರಮಾಣದ ಹಣ – ಒಳ ಬರುವುದು ಚಿಲ್ಲರೆ ಹಣ ಎಂಬಂತಾಗಿದೆ. ಆದರೆ ಬೃಹತ್ ಉದ್ದಿಮೆಗಳಿಗೆ ಇದು ತದ್ವಿರುದ್ಧವಾಗಿ ಅಪಾರ ಲಾಭವನ್ನು ತಂದುಕೊಡುತ್ತಿದೆ…….

ಅಂದರೆ ಖರ್ಚುಗಳನ್ನು ಹೆಚ್ಚು ಮಾಡಿ ಆ ಹಣವನ್ನು ಕೆಲವೇ ವ್ಯಕ್ತಿಗಳು ಮತ್ತು ಕಂಪನಿಗಳು ಕೇಂದ್ರೀಕೃತ ಮಾಡಿಕೊಂಡು ಜನರ ಆರ್ಥಿಕ ಅಸಮಾನತೆಗೆ ಕಾರಣವಾಗಿ, ಅದೇ ಅಂಶಗಳು ಅವರ ಒಟ್ಟು ಜೀವನಮಟ್ಟ ಕುಸಿಯುವಂತೆ ಮಾಡಿವೆ. ಮಾನಸಿಕ ಮತ್ತು ದೈಹಿಕ ಅಸಹಿಷ್ಣತೆ ಉಂಟಾಗಿ ರೋಗಗಳ ಗೂಡಾಗುವಂತೆ ಮಾಡಿದೆ…..

ಒಂದು ಅಧ್ಯಯನದ ಪ್ರಕಾರ ಕುಟುಂಬವೊಂದು ಭಾರತದಲ್ಲಿ ಅತಿಹೆಚ್ಚು ಹಣ ಖರ್ಚು ಮಾಡುವುದು ಶಿಕ್ಷಣ ಮತ್ತು ಆರೋಗ್ಯಕ್ಕೆ…..

ನೋಡಿ ಇದು ನಮ್ಮ ನೇರ ಅರಿವಿಗೆ ಬಾರದೆ ಪರೋಕ್ಷವಾಗಿ ನಮ್ಮ ಜೇಬುಗಳಿಗೆ ಕತ್ತರಿ ಬೀಳುತ್ತಿದೆ……

ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಜನರ ವಿವಿಧ ರೀತಿಯ ಪರದಾಟಗಳನ್ನು ನೋಡಿದಾಗ ಇದೆಲ್ಲಾ ಮನದ ಮೂಲೆಯಲ್ಲಿ ನೆನಪಾಗುತ್ತಿದೆ….

ಅಭಿವೃದ್ಧಿ ಎಂಬುದು ನಮ್ಮ ಬದುಕಿನ ನೆಮ್ಮದಿಯನ್ನು ನಾಶ ಮಾಡುತ್ತಾ, ಮೇಲ್ನೋಟಕ್ಕೆ ನಮ್ಮನ್ನು ವಸ್ತು ಸಂಸ್ಕೃತಿಯ ಶ್ರೀಮಂತರಂತೆ ಬಿಂಬಿಸುತ್ತಾ, ಕೊನೆಗೆ ಜೀವನದ ಬಗ್ಗೆಯೇ ಜಿಗುಪ್ಸೆ ಮೂಡುವಂತೆ ಮಾಡುತ್ತಿದೆ…..

ನಮ್ಮೆಲ್ಲರ ಕ್ರಿಯಾತ್ಮಕ ಚಟುವಟಿಕೆಗಳನ್ನು ನಾಶ ಮಾಡಿ ಪರೋಕ್ಷ ಆರ್ಥಿಕ ಗುಲಾಮಿ ಸಂಸ್ಕೃತಿಗೆ ದಾಸರನ್ನಾಗಿ ಮಾಡುತ್ತಿದೆ….

ಬಹುತೇಕ ವಿದ್ಯಾವಂತ ಯುವ ಜನಾಂಗ ಸ್ವಿಗ್ಗಿ, ಅಮೆಜಾನ್, ಫ್ಲಿಪ್ ಕಾರ್ಟ್, ಜೊಮ್ಯಾಟೋ, ಕಾಲ್ ಸೆಂಟರ್ ಮುಂತಾದ ಕಂಪನಿಗಳಲ್ಲಿ ಪೋಸ್ಟ್ ಮ್ಯಾನ್ ಗಳ ರೀತಿಯ ಉದ್ಯೋಗಗಳಲ್ಲಿ ಕೇವಲ ಬದುಕುವ ಏಕೈಕ ಉದ್ದೇಶದಿಂದ ತಮ್ಮ ಅಪೂರ್ವ ಶಕ್ತಿಯನ್ನು ವಿನಿಯೋಗಿಸಿದರೆ ಅವರ ಬದುಕಿನ ಸಾರ್ಥಕತೆ ಮತ್ತು ದೇಶದ ಭವಿಷ್ಯದ ಉತ್ಪಾದನಾ ಸಾಮರ್ಥ್ಯ ಏನಾಗಬಹುದು…..

ಆದ್ದರಿಂದ ಕೇವಲ ಹೊಟ್ಟೆಪಾಡಿನ ಉದ್ಯೋಗ ಮಾತ್ರ ಅಭಿವೃದ್ಧಿಯಲ್ಲ. ಮನುಷ್ಯನ ಆಸೆ ಕನಸುಗಳು ಕ್ರಿಯಾತ್ಮಕ ಸಾಧನೆಗಳು ಮತ್ತು ನೆಮ್ಮದಿಯ ಮಟ್ಟ ಹೆಚ್ಚಿ ತೃಪ್ತಿದಾಯಕ ಬದುಕು ನಮ್ಮದಾಗುವಂತಹ ಸಮಾಜ ನಮ್ಮದಾಗಲಿ ಎಂದು ಈ ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಆಶಿಸುತ್ತಾ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

4 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

10 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

23 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago