ರೌಡಿಶೀಟ್ನಿಂದ ಹೆಸರು ತೆಗೆದುಹಾಕಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ (PSI) ಮತ್ತು ಓರ್ವ ಎಎಸ್ಐ (ASI) ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಬೇಟೆ ಮುಂದುವರಿಸಿರುವ ಲೋಕಾಯುಕ್ತ ಪೊಲೀಸರು, ನಿನ್ನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಿಂಚಿನ ಈ ಕಾರ್ಯಾಚರಣೆ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಶರಣಪ್ಪ ಹಾಗೂ ಸಹಾಯಕ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ವೆಂಕಟೇಶ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.
ರಾಘವೇಂದ್ರ ಎಂಬುವವರ ಹೆಸರನ್ನು ರೌಡಿಶೀಟರ್ ಪಟ್ಟಿಯಿಂದ ತೆಗೆದುಹಾಕಲು ಈ ಅಧಿಕಾರಿಗಳು ಭಾರಿ ಮೊತ್ತದ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.
ಪೊಲೀಸ್ ದಾಖಲೆಗಳಲ್ಲಿ ರೌಡಿಶೀಟರ್ ಎಂಬ ಹಣೆಪಟ್ಟಿಯನ್ನು ಅಳಿಸಿಹಾಕಲು ರಾಘವೇಂದ್ರ ಅವರಿಂದ ಹಣಕ್ಕಾಗಿ ಪೀಡಿಸಲಾಗುತ್ತಿತ್ತು. ಅಂತಿಮವಾಗಿ 70 ಸಾವಿರ ರೂಪಾಯಿ ನೀಡಲು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ, ಭ್ರಷ್ಟ ಅಧಿಕಾರಿಗಳಿಗೆ ಪಾಠ ಕಲಿಸಲು ನಿರ್ಧರಿಸಿದ ರಾಘವೇಂದ್ರ ಅವರು ಲೋಕಾಯುಕ್ತ ಪೊಲೀಸರ ಮೊರೆ ಹೋಗಿದ್ದರು.
ಪೂರ್ವನಿಯೋಜಿತ ಸ್ಕೆಚ್ನಂತೆ ನಿನ್ನೆ ರಾಘವೇಂದ್ರ ಅವರು ಪಿಎಸ್ಐ ಶರಣಪ್ಪ ಮತ್ತು ಎಎಸ್ಐ ವೆಂಕಟೇಶ್ ಅವರಿಗೆ 70 ಸಾವಿರ ಹಣ ನೀಡುತ್ತಿದ್ದರು. ಈ ವೇಳೆ ಹೊಂಚು ಹಾಕಿದ್ದ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಲಂಚದ ಹಣದ ಸಮೇತ ಇಬ್ಬರೂ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಲಂಚದ ಹಣವನ್ನು ಮುಟ್ಟಿದ್ದ ಅಧಿಕಾರಿಗಳ ಕೈ ಬೆರಳುಗಳು ಲೋಕಾಯುಕ್ತ ತಪಾಸಣೆಯ ವೇಳೆ ಕೆಂಪು ಬಣ್ಣಕ್ಕೆ ತಿರುಗಿದ್ದು, ಭ್ರಷ್ಟಾಚಾರಕ್ಕೆ ಪ್ರಬಲ ಸಾಕ್ಷ್ಯ ಸಿಕ್ಕಂತಾಗಿದೆ.
ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಆಂಟನಿ ಜಾನ್ ಹಾಗೂ ಡಿವೈಎಸ್ಪಿ ವೀರೇಂದ್ರ ಅವರ ನೇತೃತ್ವದ ತಂಡ ಈ ಯಶಸ್ವಿ ಕಾರ್ಯಾಚರಣೆಯನ್ನು ಕೈಗೊಂಡಿದೆ. ಸದ್ಯ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದ್ದು, ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆ ಮುಂದುವರಿದಿದೆ. ಠಾಣೆಯ ಇತರ ದಾಖಲೆಗಳನ್ನು ಸಹ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಖಾಕಿ ಬಟ್ಟೆ ಧರಿಸಿ ರಕ್ಷಕರಾಗಿರಬೇಕಾದವರೇ ಭಕ್ಷಕರಾಗಿ ಲಂಚಕ್ಕೆ ಕೈಯೊಡ್ಡಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಭ್ರಷ್ಟಾಚಾರದ ವಿರುದ್ಧದ ಇಂತಹ ಕಠಿಣ ಕ್ರಮಗಳಿಂದ ಬಡ ಮತ್ತು ಸಾಮಾನ್ಯ ಜನರಿಗೆ ನ್ಯಾಯ ಸಿಗುವ ಭರವಸೆ ಮೂಡಿದೆ.
ಯುವಕರ ದಂಗೆ...... ನಿರುದ್ಯೋಗ ದಂಗೆ, ಕೆಪಿಎಸ್ಸಿ ಪರೀಕ್ಷಾ ಅಕ್ರಮ, ಎರಡೂವರೆ ಲಕ್ಷ ಸರ್ಕಾರಿ ಉದ್ಯೋಗಗಳ ಭರ್ತಿ ಇಲ್ಲ, ದೀರ್ಘಕಾಲದಿಂದ ಅತಿಯಾದ…
ಪಾದಚಾರಿಗೆ ಬೈಕ್ ಡಿಕ್ಕಿಯಾಗಿರುವ ಘಟನೆ ಇಂದು ದೊಡ್ಡಬಳ್ಳಾಪುರದ ಶ್ಯಾಕಲದೇವನಪುರ ಬಳಿ ನಡೆದಿದೆ. ಪಾದಚಾರಿಗೆ ಬೈಕ್ ಡಿಕ್ಕಿ ರಭಸಕ್ಕೆ ಪಾದಚಾರಿಗೆ ಸಣ್ಣಪುಟ್ಟ…
ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಾದರಿ ಕ್ಷೇತ್ರವಾಗಿ ಹೊರಹೊಮ್ಮಲಿದೆ ಎಂದು…
“ಜನತೆಗೆ ಗೌರವಯುತವಾಗಿ ಜೀವನ ನಡೆಸಲು ಮೂಲಸೌಕರ್ಯ ಕಲ್ಪಿಸುವುದೇ ಜನಪ್ರತಿನಿಧಿಗಳ ಕರ್ತವ್ಯ” ಎಂದು ಸಚಿವ ಕೆ.ಜೆ.ಜಾರ್ಜ್ ಅನಿಸಿಕೆ ವ್ಯಕ್ತಪಡಿಸಿದರು. ಇಂಧನ ಸಚಿವರು…
ಪ್ರಸ್ತುತ ರಾಜ್ಯದಲ್ಲಿ 2 ಲಕ್ಷ 6 ಸಾವಿರ ಪೋಡಿ ಪ್ರಕರಣಗಳ ದುರಸ್ತಿ ಮಾಡಲಾಗಿದ್ದು ಮುಂದಿನ ಎರಡು ವರ್ಷಗಳಲ್ಲಿ 5 ಲಕ್ಷ…
ದೇಶದ ಶ್ರೀಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳು, ಔಷಧ, ಶಸ್ತ್ರಚಿಕಿತ್ಸಾ ಉಪಕರಣಗಳು ಲಭ್ಯವಾಗಿಸಬೇಕು ಎಂಬ ಉದ್ದೇಶದಿಂದ ಪ್ರಧಾನಮಂತ್ರಿ ಭಾರತೀಯ…