ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಇಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಮಾಹಿತಿ ಹಾಗೂ ಸೂಚನೆಗಳು
• ಬಿಬಿಎಂಪಿಯಲ್ಲಿ ಸುಮಾರು 15 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ. ಇದರಿಂದ ತೆರಿಗೆಯೂ ಕಟ್ಟದ ಕಾರಣ ಸಾವಿರಾರು ಕೋಟಿ ರೂ. ತೆರಿಗೆ ಪ್ರತೀ ವರ್ಷ ಸರ್ಕಾರಕ್ಕೆ ನಷ್ಟ ಉಂಟಾಗುತ್ತಿದೆ.
• ಸ್ಥಳೀಯ ಸಂಸ್ಥೆಗಳಲ್ಲಿ ಅಂದಾಜು 30 ಲಕ್ಷ ಆಸ್ತಿಗಳಿಗೆ ಖಾತೆಗಳು ಇರುವುದಿಲ್ಲ, ಗ್ರಾಮ ಪಂಚಾಯತ್ಗಳಲ್ಲಿ ಅಂದಾಜು 90 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ.
• ಖಾತೆಯಿಲ್ಲದೆ, ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನೋಂದಣಿ ಮಾಡುವ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು. ಇದು ಸ್ಥಳೀಯ ಸಂಸ್ಥೆಗಳು ಮತ್ತು ನೋಂದಣಿ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.
• ಸ್ಥಳೀಯ ಸಂಸ್ಥೆಗಳು ಖಾತಾ ನೀಡಿರುವ ಆಸ್ತಿಗಳನ್ನು ಮಾತ್ರ ನೋಂದಣಿ ಇಲಾಖೆಯಡಿ ನೋಂದಣಿ ಮಾಡಬೇಕು. ಸ್ಥಳೀಯ ಸಂಸ್ಥೆಗಳು ನೀಡಿರುವ ಖಾತಾ ದಾಖಲೆಗಳ ಡಾಟಾಬೇಸ್ ಕಂಪ್ಯೂಟರ್ನಲ್ಲಿ ಇರಬೇಕು. ಈ ಡಾಟಾ ಬೇಸ್ ಆಧರಿಸಿ ನೋಂದಣಿ ಪ್ರಕ್ರಿಯೆ ಮಾಡಬೇಕು.
• ನೋಂದಣಿ ಪ್ರಕ್ರಿಯೆ ಇಂಟಿಗ್ರೇಷನ್ ಆದ ಮೇಲೆ ಅಕ್ರಮಗಳ ಮೇಲೆ ಕಡಿವಾಣ ಸಾಧ್ಯವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒನ್ ಟೈಮ್ ಪರಿಹಾರ ನೀಡುವ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು.
• ಬಿಬಿಎಂಪಿಯಲ್ಲಿ ವ್ಯಾಪ್ತಿಯಲ್ಲಿ ಖಾತಾ ನೀಡಿರುವುದನ್ನು ಡಾಟಾ ಬೇಸ್ನಲ್ಲಿ ಹಾಕಬೇಕು. ಇದರಿಂದ ಖಾತೆ ಆದ ಆಸ್ತಿಗಳನ್ನು ಮಾತ್ರ ನೋಂದಣಿ ಮಾಡಬಹುದು. ಕಾಗದ ದಾಖಲೆಗಳ ಆಧಾರದಲ್ಲಿ ಯಾವುದೇ ಕಾರಣಕ್ಕೂ ನೋಂದಣಿಗೆ ಪರಿಗಣಿಸಬಾರದು.
• ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಭಿಯಾನದ ಮಾದರಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ನಡೆಸಬೇಕು. ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
• ಬಿಬಿಎಂಪಿ ವ್ಯಾಪ್ತಿಯಲ್ಲಿ 23 ಲಕ್ಷ ಆಸ್ತಿಗಳ ಡಿಜಿಟಲೈಸ್ ಮಾಡಲಾಗಿದೆ. ಈಗಾಗಲೇ 15 ಲಕ್ಷ ಖಾತೆಗಳನ್ನು ಡೌನ್ಲೋಡ್ ಮಾಡಲಾಗಿದೆ.
• ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಕ್ರಮಬದ್ಧವಲ್ಲದ ಸ್ವತ್ತುಗಳ ನಕಲಿ ಖಾತೆಗಳನ್ನು ಸೃಜಿಸಿ ವಂಚನೆಯಿಂದ ಹೆಚ್ಚು ದಸ್ತಾವೇಜುಗಳ ನೋಂದಣಿ ಮಾಡುವ ಪ್ರಕ್ರಿಯೆಗೆ ಸಂಪೂರ್ಣ ಕಡಿವಾಣ ಹಾಕಬೇಕು.
• ಇನ್ನು ಮುಂದೆ ಕಂದಾಯ ಜಮೀನಿನಲ್ಲಿ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಇದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಇರುವ ಅಂತಹ ಲೇಔಟ್ಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು.
• ನಿವೇಶನಗಳಲ್ಲಿರುವ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳಾಗಿ ಪರಿಗಣಿಸುವ ಕುರಿತು ಕ್ರಮ ಪರಿಶೀಲಿಸಬೇಕು.
• ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ಕಡ್ಡಾಯಗೊಳಿಸಲಾಗಿದೆ.
• ಈ ವರ್ಷ ಡಿಸೆಂಬರ್ ಕೊನೆಗೆ ರೂ.16,993 ಕೋಟಿ ರಾಜಸ್ವ ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.17ರಷ್ಟು ಹೆಚ್ಚುವರಿ ಪ್ರಗತಿ ಸಾಧಿಸಲಾಗಿದೆ.
• ಕಂದಾಯ ಇಲಾಖೆಯಲ್ಲಿ ಸರ್ವೇ ನಂಬರ್ಗಳಲ್ಲಿ ನಿರ್ಮಿಸಿದ ಅನಧಿಕೃತ ಬಡಾವಣೆಗಳು/ನಿವೇಶನಗಳ ದತ್ತಾಂಶ ಮಾಹಿತಿ ಇದ್ದು, ಸದರಿ ಮಾಹಿತಿಯನ್ನು ಆಧರಿಸಿ ಒಂದೇ ಯೋಜನೆಯಲ್ಲಿ ಸದರಿ ಸ್ವತ್ತುಗಳಿಗೆ ಖಾತಾ ದಾಖಲೆಗಳನ್ನು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಬೇಕು.
• ಗ್ರಾಮ ಪಂಚಾಯತ್ಗಳಲ್ಲಿ 44 ಲಕ್ಷ ಆಸ್ತಿಗಳಿಗೆ ಮಾತ್ರ ಖಾತೆಯಿದೆ. ಇದರಿಂದ 800 ಕೋಟಿ ರೂ. ಆದಾಯ ಪ್ರತಿ ವರ್ಷ ಬರುತ್ತಿದೆ. ಆದರೆ ಸುಮಾರು 96 ಲಕ್ಷ ಆಸ್ತಿಗಳಿಗೆ ಇನ್ನೂ ಈ ಖಾತಾ ಇರುವುದಿಲ್ಲ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಖಾತೆ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುವ ಕುರಿತು ಕ್ರಮ ವಹಿಸಬೇಕು.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…