ಖಾತೆಯಿಲ್ಲದೆ, ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನೋಂದಣಿ ಮಾಡುವ ಪ್ರಕ್ರಿಯೆಗೆ ಕಡಿವಾಣ ಹಾಕಿ- ಸಿಎಂ ಸಿದ್ದರಾಮಯ್ಯ

ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಇಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಮಾಹಿತಿ ಹಾಗೂ ಸೂಚನೆಗಳು

• ಬಿಬಿಎಂಪಿಯಲ್ಲಿ ಸುಮಾರು 15 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ. ಇದರಿಂದ ತೆರಿಗೆಯೂ ಕಟ್ಟದ ಕಾರಣ ಸಾವಿರಾರು ಕೋಟಿ ರೂ. ತೆರಿಗೆ ಪ್ರತೀ ವರ್ಷ ಸರ್ಕಾರಕ್ಕೆ ನಷ್ಟ ಉಂಟಾಗುತ್ತಿದೆ.

• ಸ್ಥಳೀಯ ಸಂಸ್ಥೆಗಳಲ್ಲಿ ಅಂದಾಜು 30 ಲಕ್ಷ ಆಸ್ತಿಗಳಿಗೆ ಖಾತೆಗಳು ಇರುವುದಿಲ್ಲ‌, ಗ್ರಾಮ ಪಂಚಾಯತ್‌ಗಳಲ್ಲಿ ಅಂದಾಜು 90 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ.

• ಖಾತೆಯಿಲ್ಲದೆ, ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನೋಂದಣಿ ಮಾಡುವ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು. ಇದು ಸ್ಥಳೀಯ ಸಂಸ್ಥೆಗಳು ಮತ್ತು ನೋಂದಣಿ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.

• ಸ್ಥಳೀಯ ಸಂಸ್ಥೆಗಳು ಖಾತಾ ನೀಡಿರುವ ಆಸ್ತಿಗಳನ್ನು ಮಾತ್ರ ನೋಂದಣಿ ಇಲಾಖೆಯಡಿ ನೋಂದಣಿ ಮಾಡಬೇಕು. ಸ್ಥಳೀಯ ಸಂಸ್ಥೆಗಳು ನೀಡಿರುವ ಖಾತಾ ದಾಖಲೆಗಳ ಡಾಟಾಬೇಸ್‌ ಕಂಪ್ಯೂಟರ್‌ನಲ್ಲಿ ಇರಬೇಕು. ಈ ಡಾಟಾ ಬೇಸ್‌ ಆಧರಿಸಿ ನೋಂದಣಿ ಪ್ರಕ್ರಿಯೆ ಮಾಡಬೇಕು.

• ನೋಂದಣಿ ಪ್ರಕ್ರಿಯೆ ಇಂಟಿಗ್ರೇಷನ್‌ ಆದ ಮೇಲೆ ಅಕ್ರಮಗಳ ಮೇಲೆ ಕಡಿವಾಣ ಸಾಧ್ಯವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒನ್ ಟೈಮ್‌ ಪರಿಹಾರ ನೀಡುವ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು.

• ಬಿಬಿಎಂಪಿಯಲ್ಲಿ ವ್ಯಾಪ್ತಿಯಲ್ಲಿ ಖಾತಾ ನೀಡಿರುವುದನ್ನು ಡಾಟಾ ಬೇಸ್‌ನಲ್ಲಿ ಹಾಕಬೇಕು. ಇದರಿಂದ ಖಾತೆ ಆದ ಆಸ್ತಿಗಳನ್ನು ಮಾತ್ರ ನೋಂದಣಿ ಮಾಡಬಹುದು. ಕಾಗದ ದಾಖಲೆಗಳ ಆಧಾರದಲ್ಲಿ ಯಾವುದೇ ಕಾರಣಕ್ಕೂ ನೋಂದಣಿಗೆ ಪರಿಗಣಿಸಬಾರದು.

• ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅಭಿಯಾನದ ಮಾದರಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ನಡೆಸಬೇಕು. ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.

• ಬಿಬಿಎಂಪಿ ವ್ಯಾಪ್ತಿಯಲ್ಲಿ 23 ಲಕ್ಷ ಆಸ್ತಿಗಳ ಡಿಜಿಟಲೈಸ್‌ ಮಾಡಲಾಗಿದೆ. ಈಗಾಗಲೇ 15 ಲಕ್ಷ ಖಾತೆಗಳನ್ನು ಡೌನ್‌ಲೋಡ್‌ ಮಾಡಲಾಗಿದೆ.

• ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಕ್ರಮಬದ್ಧವಲ್ಲದ ಸ್ವತ್ತುಗಳ ನಕಲಿ ಖಾತೆಗಳನ್ನು ಸೃಜಿಸಿ ವಂಚನೆಯಿಂದ ಹೆಚ್ಚು ದಸ್ತಾವೇಜುಗಳ ನೋಂದಣಿ ಮಾಡುವ ಪ್ರಕ್ರಿಯೆಗೆ ಸಂಪೂರ್ಣ ಕಡಿವಾಣ ಹಾಕಬೇಕು.

• ಇನ್ನು ಮುಂದೆ ಕಂದಾಯ ಜಮೀನಿನಲ್ಲಿ ಲೇಔಟ್‌ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಇದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಇರುವ ಅಂತಹ ಲೇಔಟ್‌ಗಳ ಕುರಿತು ಸೂಕ್ತ ಕ್ರಮ‌ ಕೈಗೊಳ್ಳಬೇಕು.

• ನಿವೇಶನಗಳಲ್ಲಿರುವ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳಾಗಿ ಪರಿಗಣಿಸುವ ಕುರಿತು ಕ್ರಮ ಪರಿಶೀಲಿಸಬೇಕು.

• ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ಕಡ್ಡಾಯಗೊಳಿಸಲಾಗಿದೆ.

• ಈ ವರ್ಷ ಡಿಸೆಂಬರ್‌ ಕೊನೆಗೆ ರೂ.16,993 ಕೋಟಿ ರಾಜಸ್ವ ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.17ರಷ್ಟು ಹೆಚ್ಚುವರಿ ಪ್ರಗತಿ ಸಾಧಿಸಲಾಗಿದೆ.

• ಕಂದಾಯ ಇಲಾಖೆಯಲ್ಲಿ ಸರ್ವೇ ನಂಬರ್‌ಗಳಲ್ಲಿ ನಿರ್ಮಿಸಿದ ಅನಧಿಕೃತ ಬಡಾವಣೆಗಳು/ನಿವೇಶನಗಳ ದತ್ತಾಂಶ ಮಾಹಿತಿ ಇದ್ದು, ಸದರಿ ಮಾಹಿತಿಯನ್ನು ಆಧರಿಸಿ ಒಂದೇ ಯೋಜನೆಯಲ್ಲಿ ಸದರಿ ಸ್ವತ್ತುಗಳಿಗೆ ಖಾತಾ ದಾಖಲೆಗಳನ್ನು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಬೇಕು.

• ಗ್ರಾಮ ಪಂಚಾಯತ್‌ಗಳಲ್ಲಿ 44 ಲಕ್ಷ ಆಸ್ತಿಗಳಿಗೆ ಮಾತ್ರ ಖಾತೆಯಿದೆ. ಇದರಿಂದ 800 ಕೋಟಿ ರೂ. ಆದಾಯ ಪ್ರತಿ ವರ್ಷ ಬರುತ್ತಿದೆ. ಆದರೆ ಸುಮಾರು 96 ಲಕ್ಷ ಆಸ್ತಿಗಳಿಗೆ ಇನ್ನೂ ಈ ಖಾತಾ ಇರುವುದಿಲ್ಲ. ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಖಾತೆ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುವ ಕುರಿತು ಕ್ರಮ ವಹಿಸಬೇಕು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

14 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

15 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

17 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

18 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

23 hours ago